ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ, ಯುವ Power Man ಸಾವು

ಕೊಡಗು: ವಿದ್ಯುತ್ ಅವಘಡ ಸಂಭವಿಸಿ, ಯುವ ಪವರ್​ಮ್ಯಾನ್ (ಲೈನ್ ಮೆನ್) ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉಲ್ಲಾಸ್ (23) ಮೃತ ಲೈನ್ ಮೆನ್. 11 ಕೆ.ವಿ. ಸಾಮರ್ಥ್ಯದ ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ. ಸೋಮವಾರಪೇಟೆ ತಾಲೂಕಿನ ಶಾಂತಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ದುರ್ದೈವಿ ಉಲ್ಲಾಸ್ ಚಿಕ್ಕಮಗಳೂರು ಜಿಲ್ಲೆ ಕುಪ್ಪಲ್ ಗ್ರಾಮದ ನಿವಾಸಿ‌. ಉಲ್ಲಾಸ್, ನಾಲ್ಕು ವರ್ಷಗಳಿಂದ ಕೊಡ್ಲಿಪೇಟೆ ಚೆಸ್ಕಾಂ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ರು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ […]

ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ, ಯುವ Power Man ಸಾವು
ಸಾಧು ಶ್ರೀನಾಥ್​

Updated on: Oct 02, 2020 | 11:07 AM

ಕೊಡಗು: ವಿದ್ಯುತ್ ಅವಘಡ ಸಂಭವಿಸಿ, ಯುವ ಪವರ್​ಮ್ಯಾನ್ (ಲೈನ್ ಮೆನ್) ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉಲ್ಲಾಸ್ (23) ಮೃತ ಲೈನ್ ಮೆನ್.

11 ಕೆ.ವಿ. ಸಾಮರ್ಥ್ಯದ ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ. ಸೋಮವಾರಪೇಟೆ ತಾಲೂಕಿನ ಶಾಂತಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ದುರ್ದೈವಿ ಉಲ್ಲಾಸ್ ಚಿಕ್ಕಮಗಳೂರು ಜಿಲ್ಲೆ ಕುಪ್ಪಲ್ ಗ್ರಾಮದ ನಿವಾಸಿ‌.

ಉಲ್ಲಾಸ್, ನಾಲ್ಕು ವರ್ಷಗಳಿಂದ ಕೊಡ್ಲಿಪೇಟೆ ಚೆಸ್ಕಾಂ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ರು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us