AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಎರಡನೇ ದಿನವಾದ ಇಂದು ಅರಮನೆಯಲ್ಲಿ ಆಚರಣೆಗಳು ಶುರುವಾಗಿವೆ. ಅರಮನೆಯಲ್ಲಿ 2ನೇ ದಿನದ ಖಾಸಗಿ ದರ್ಬಾರ್ ಪ್ರಕ್ರಿಯೆ ಆರಂಭವಾಗಿದೆ. ಪಟ್ಟದ ಆನೆ, ಕುದುರೆ, ಹಸುಗೆ ಅರಮನೆಯಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅರಮನೆ ಆಗ್ನೇಯ ದಿಕ್ಕಿನಲ್ಲಿರುವ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಮಂಗಲ ವಾದ್ಯಗಳೊಂದಿಗೆ ತೆರಳಿ ಪಟ್ಟದ ಆನೆ ಮೇಲೆ ಚಾಮುಂಡೇಶ್ವರಿ ವಾಹನ ಸಿಂಹದ ಪ್ರತಿರೂಪವನ್ನ ಇರಿಸಿ ಪೂಜೆ ಮುಗಿಸಿ ಸದ್ಯ ಸ್ವಸ್ಥಾನಕ್ಕೆ ಪಟ್ಟದ ಆನೆ, ಕುದುರೆ ಹಾಗೂ ಹಸು ತಲುಪಿದೆ. ಇನ್ನು ವಿಜಯದಶಮಿ ಜಂಬೂಸವಾರಿ […]

ಮೈಸೂರು ಅರಮನೆಯಲ್ಲಿ  ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ
ಆಯೇಷಾ ಬಾನು
|

Updated on: Oct 18, 2020 | 9:54 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಎರಡನೇ ದಿನವಾದ ಇಂದು ಅರಮನೆಯಲ್ಲಿ ಆಚರಣೆಗಳು ಶುರುವಾಗಿವೆ. ಅರಮನೆಯಲ್ಲಿ 2ನೇ ದಿನದ ಖಾಸಗಿ ದರ್ಬಾರ್ ಪ್ರಕ್ರಿಯೆ ಆರಂಭವಾಗಿದೆ.

ಪಟ್ಟದ ಆನೆ, ಕುದುರೆ, ಹಸುಗೆ ಅರಮನೆಯಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅರಮನೆ ಆಗ್ನೇಯ ದಿಕ್ಕಿನಲ್ಲಿರುವ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಮಂಗಲ ವಾದ್ಯಗಳೊಂದಿಗೆ ತೆರಳಿ ಪಟ್ಟದ ಆನೆ ಮೇಲೆ ಚಾಮುಂಡೇಶ್ವರಿ ವಾಹನ ಸಿಂಹದ ಪ್ರತಿರೂಪವನ್ನ ಇರಿಸಿ ಪೂಜೆ ಮುಗಿಸಿ ಸದ್ಯ ಸ್ವಸ್ಥಾನಕ್ಕೆ ಪಟ್ಟದ ಆನೆ, ಕುದುರೆ ಹಾಗೂ ಹಸು ತಲುಪಿದೆ.

ಇನ್ನು ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಯ ತಾಲೀಮು ಮತ್ತಷ್ಟು ಚುರುಕು ಪಡೆದಿದೆ. ಅಭಿಮನ್ಯುಗೆ ಮರದ ಅಂಬಾರಿಯನ್ನ ಹೊರಿಸಿ ತಾಲೀಮು ಮಾಡಲಾಗಿದೆ. 300 ಕೆ.ಜಿ.ಗೂ ಹೆಚ್ಚಿನ ತೂಕದ ಮರಳಿನ ಮೂಟೆಗಳು, 280 ಕೆ.ಜಿ. ಮರದ ಅಂಬಾರಿಯನ್ನು ಹೊರಿಸಿ ಅರಮನೆ ಆವರಣದಲ್ಲೇ ತಾಲೀಮು ನಡೆಸಲಾಗಿದೆ. ಗಜಪಡೆ ತಾಲೀಮಿಗೂ‌ ಮುನ್ನ ಸಾಂಪ್ರದಾಯಿಕವಾಗಿ ಯಾವುದೇ ವಿಘ್ನಗಳು ಬಾರದಿರಲಿ ಎಂದು ಪೂಜೆ ಮಾಡಲಾಯಿತು.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ