
ಚಿಕ್ಕಮಗಳೂರು: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಜನಸಾಮಾನ್ಯರ ಓಡಾಟ ತೀರಾ ಕಡಿಮೆಯಾಗಿದೆ. ಹಾಗಾಗಿ ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳು ನಿರ್ಭೀತಿಯಿಂದ ಓಡಾಟ ನಡೆಸುತ್ತಿವೆ. ಮೂಡಿಗೆರೆ ತಾಲೂಕಿನ ಬಾನಹಳ್ಳಿ ಸುತ್ತಮುತ್ತ ರಾಜಾ ರೋಷವಾಗಿ ಗಜಪಡೆ ಓಡಾಡುತ್ತಿವೆ.
ಬಾನಹಳ್ಳಿ, ಭಾರತಿಭೈಲ್, ಬೆಳಗೋಡು ಸುತ್ತಮುತ್ತ ಎಸ್ಟೇಟ್ಗಳಲ್ಲಿ ಬೆಳೆದಿರುವ ಕಾಫಿ ಗಿಡಗಳನ್ನು ಕಾಡಾನೆಗಳು ನಾಶ ಮಾಡುತ್ತಿವೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.