AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Road Accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ

Dharwad Road Accident ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವುವಿಸಿದೆ. ಘಟನೆಯಲ್ಲಿ 11 ಜನ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Dharwad Road Accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Feb 06, 2021 | 10:44 AM

Share

ಧಾರವಾಡ: ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ ಹೊಡೆದು 11 ಜನ ಮೃತಪಟ್ಟಿರುವ ಭೀಕರ ಅಪಘಾತವೊಂದು ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವುವಿಸಿದೆ. ಘಟನೆಯಲ್ಲಿ ವೀಣಾ, ಮಂಜುಳಾ, ರಾಜೇಶ್ವರಿ, ಡ್ರೈವರ್, ಕ್ಲೀನರ್​, 9 ಮಹಿಳೆಯರು ಸೇರಿ 11 ಜನ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸ್ಥಳಕ್ಕೆ ಎಸ್‌ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರಿಪ್​ಗೆ ಹೋಗುತ್ತಿದ್ದವರು ಮರಳಿ ಬಾರದ ಕಡೆ ಪ್ರಯಾಣ ಬೆಳೆಸಿದ್ರು ಟಿಟಿಯಲ್ಲಿ ಗೋವಾ ಟ್ರಿಪ್​ಗೆ ಹೋಗುತ್ತಿದ್ದ ಒಟ್ಟು 16 ಜನರಲ್ಲಿ 14 ಮಹಿಳೆಯರು, ಇಬ್ಬರು ಪುರುಷರಿದ್ರು. ಅಪಘಾತದಲ್ಲಿ 9 ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಗಾಯಗೊಂಡ ಐವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ರಸ್ತೆ ದುರಂತದಲ್ಲಿ ಸಾವನ್ನಪ್ಪಿದ ಬಹುತೇಕರು ದಾವಣಗೆರೆ ನಗರದ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಗಳು. 14 ಮಹಿಳೆಯರೂ ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಒಂದೇ ಬ್ಯಾಚ್​ನ ಹಳೆ ವಿದ್ಯಾರ್ಥಿಗಳು. ಇಂದು ಎಲ್ಲರೂ ಸೇರಿ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

Published On - 8:26 am, Fri, 15 January 21

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ