AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Road Accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ

Dharwad Road Accident ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವುವಿಸಿದೆ. ಘಟನೆಯಲ್ಲಿ 11 ಜನ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Dharwad Road Accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
ಆಯೇಷಾ ಬಾನು
| Edited By: |

Updated on:Feb 06, 2021 | 10:44 AM

Share

ಧಾರವಾಡ: ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ ಹೊಡೆದು 11 ಜನ ಮೃತಪಟ್ಟಿರುವ ಭೀಕರ ಅಪಘಾತವೊಂದು ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವುವಿಸಿದೆ. ಘಟನೆಯಲ್ಲಿ ವೀಣಾ, ಮಂಜುಳಾ, ರಾಜೇಶ್ವರಿ, ಡ್ರೈವರ್, ಕ್ಲೀನರ್​, 9 ಮಹಿಳೆಯರು ಸೇರಿ 11 ಜನ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸ್ಥಳಕ್ಕೆ ಎಸ್‌ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರಿಪ್​ಗೆ ಹೋಗುತ್ತಿದ್ದವರು ಮರಳಿ ಬಾರದ ಕಡೆ ಪ್ರಯಾಣ ಬೆಳೆಸಿದ್ರು ಟಿಟಿಯಲ್ಲಿ ಗೋವಾ ಟ್ರಿಪ್​ಗೆ ಹೋಗುತ್ತಿದ್ದ ಒಟ್ಟು 16 ಜನರಲ್ಲಿ 14 ಮಹಿಳೆಯರು, ಇಬ್ಬರು ಪುರುಷರಿದ್ರು. ಅಪಘಾತದಲ್ಲಿ 9 ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಗಾಯಗೊಂಡ ಐವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ರಸ್ತೆ ದುರಂತದಲ್ಲಿ ಸಾವನ್ನಪ್ಪಿದ ಬಹುತೇಕರು ದಾವಣಗೆರೆ ನಗರದ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಗಳು. 14 ಮಹಿಳೆಯರೂ ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಒಂದೇ ಬ್ಯಾಚ್​ನ ಹಳೆ ವಿದ್ಯಾರ್ಥಿಗಳು. ಇಂದು ಎಲ್ಲರೂ ಸೇರಿ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

Published On - 8:26 am, Fri, 15 January 21

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?