Dharwad Road Accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ

Dharwad Road Accident ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವುವಿಸಿದೆ. ಘಟನೆಯಲ್ಲಿ 11 ಜನ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Dharwad Road Accident ಟೆಂಪೋಗೆ ಟಿಪ್ಪರ್​ ಡಿಕ್ಕಿ: ಗೋವಾ ಪ್ರವಾಸಕ್ಕೆ ತೆರಳ್ತಿದ್ದ 11 ಮಂದಿ ಹಳೆ ವಿದ್ಯಾರ್ಥಿಗಳ ದುರ್ಮರಣ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Feb 06, 2021 | 10:44 AM

ಧಾರವಾಡ: ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ ಹೊಡೆದು 11 ಜನ ಮೃತಪಟ್ಟಿರುವ ಭೀಕರ ಅಪಘಾತವೊಂದು ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವುವಿಸಿದೆ. ಘಟನೆಯಲ್ಲಿ ವೀಣಾ, ಮಂಜುಳಾ, ರಾಜೇಶ್ವರಿ, ಡ್ರೈವರ್, ಕ್ಲೀನರ್​, 9 ಮಹಿಳೆಯರು ಸೇರಿ 11 ಜನ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸ್ಥಳಕ್ಕೆ ಎಸ್‌ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರಿಪ್​ಗೆ ಹೋಗುತ್ತಿದ್ದವರು ಮರಳಿ ಬಾರದ ಕಡೆ ಪ್ರಯಾಣ ಬೆಳೆಸಿದ್ರು
ಟಿಟಿಯಲ್ಲಿ ಗೋವಾ ಟ್ರಿಪ್​ಗೆ ಹೋಗುತ್ತಿದ್ದ ಒಟ್ಟು 16 ಜನರಲ್ಲಿ 14 ಮಹಿಳೆಯರು, ಇಬ್ಬರು ಪುರುಷರಿದ್ರು. ಅಪಘಾತದಲ್ಲಿ 9 ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಗಾಯಗೊಂಡ ಐವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ರಸ್ತೆ ದುರಂತದಲ್ಲಿ ಸಾವನ್ನಪ್ಪಿದ ಬಹುತೇಕರು ದಾವಣಗೆರೆ ನಗರದ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಗಳು. 14 ಮಹಿಳೆಯರೂ ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಒಂದೇ ಬ್ಯಾಚ್​ನ ಹಳೆ ವಿದ್ಯಾರ್ಥಿಗಳು. ಇಂದು ಎಲ್ಲರೂ ಸೇರಿ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

Published On - 8:26 am, Fri, 15 January 21

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us