ವಿಶ್ವದ 2ನೇ ಅತಿದೊಡ್ಡ ಶ್ರೀಮಂತ ಬಿಲ್​ ಗೇಟ್ಸ್​ನ ಹಿಂದಿಕ್ಕಿದ ಉದ್ಯಮಿ ಎಲಾನ್​ ಮಸ್ಕ್!

ಕಳೆದ ಜನವರಿಯಲ್ಲಿ 35ನೇ ಸ್ಥಾನದಲ್ಲಿದ ಮಸ್ಕ್ ಈಗ ಏಕಾಎಕಿ 2ನೇ ಸ್ಥಾನಕ್ಕೆ ಏರಿದ್ದು, ಆ ಮೂಲಕ ಎಲಾನ್ ಮಸ್ಕ್ ಕಳೆದ ಸೋಮವಾರ ಮೈಕ್ರೋಸಾಫ್ಟ್​ ಕಂಪನಿಯ ಸಹ ಸಂಸ್ಥಾಪಕ ಬಿಲ್ ಗೇಟ್ಸ್​ರನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿ ದೊಡ್ಡ ಶ್ರೀಮಂತನಾಗಿ ಹೊರಹೊಮ್ಮಿದ್ದಾರೆ.

ವಿಶ್ವದ 2ನೇ ಅತಿದೊಡ್ಡ ಶ್ರೀಮಂತ ಬಿಲ್​ ಗೇಟ್ಸ್​ನ ಹಿಂದಿಕ್ಕಿದ ಉದ್ಯಮಿ ಎಲಾನ್​ ಮಸ್ಕ್!
ಎಲಾನ್​ ಮಸ್ಕ್
Follow us
| Updated By: KUSHAL V

Updated on:Nov 24, 2020 | 6:25 PM

ಟೆಸ್ಲಾ ಸಹ ಸಂಸ್ಥಾಪಕ ಎಲಾನ್ ಮಸ್ಕ್ ನ ನಿವ್ವಳ ಸಂಪತ್ತಿನ ಮೌಲ್ಯ 7.2 ಬಿಲಿಯನ್​ ಡಾಲರ್​ನಿಂದ 127.9 ಬಿಲಿಯನ್ ಡಾಲರ್​​ಗೆ ಏರಿದೆ. ಬ್ಲೂಮ್​ಬರ್ಗ್​ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಜಗತ್ತಿನ 500 ಅತಿದೊಡ್ಡ ಶ್ರೀಮಂತರ ಪಟ್ಟಿಯಲ್ಲಿರುವ ಮಸ್ಕ್​ ಯಾರೂ ಮಾಡದ ಸಾಧನೆಯನ್ನು ಮಾಡಿದ್ದಾರೆ. ಕಳೆದ ಜನವರಿಯಲ್ಲಿ 35ನೇ ಸ್ಥಾನದಲ್ಲಿದ ಮಸ್ಕ್ ಈಗ ಏಕಾಎಕಿ 2ನೇ ಸ್ಥಾನಕ್ಕೆ ಏರಿದ್ದು, ಆ ಮೂಲಕ ಎಲಾನ್ ಮಸ್ಕ್ ಕಳೆದ ಸೋಮವಾರ ಮೈಕ್ರೋಸಾಫ್ಟ್​ ಕಂಪನಿಯ ಸಹ ಸಂಸ್ಥಾಪಕ ಬಿಲ್ ಗೇಟ್ಸ್​ರನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿ ದೊಡ್ಡ ಶ್ರೀಮಂತನಾಗಿ ಹೊರಹೊಮ್ಮಿದ್ದಾರೆ.

ಈ ವರ್ಷ ಎಲಾನ್ ಮಸ್ಕ್ ತನ್ನ ನಿವ್ವಳ ಸಂಪತ್ತಿನ ಮೌಲ್ಯಕ್ಕೆ 100.3 ಬಿಲಿಯನ್ ಡಾಲರ್​ನಷ್ಟು ಮೊತ್ತ​ ಸೇರಿಸಿದ್ದು,ಇದು ಟೆಸ್ಲಾ ಕಂಪನಿಯ ದೊಡ್ಡ ಸಾಧನೆಯಾಗಿದೆ. ಟೆಸ್ಲಾ ಕಂಪನಿಯ ಆದಾಯವೇ 500 ಬಿಲಿಯನ್​ ಡಾಲರ್​ರಷ್ಟಿದೆ. ಬಿಲ್​ ಗೇಟ್ಸ್ ಇದೇ ಮೊದಲ ಬಾರಿಗೆ ಎರಡನೇ ಸ್ಥಾನಕ್ಕಿಂತ ಕೆಳ ಹಂತದಲ್ಲಿದ್ದಾರೆ.

ಫಾರ್ಚೂನ್ ವರದಿಯ ಪ್ರಕಾರ, ಬಿಲ್ ಗೇಟ್ಸ್ ದತ್ತಿ ಸಂಸ್ಥೆಗಳಿಗೆ ಅಪಾರ ಪ್ರಮಾಣದಲ್ಲಿ ದೇಣಿಗೆ ನೀಡದಿದ್ದರೆ ಅವರ ನಿವ್ವಳ ಸಂಪತ್ತಿನ ಮೌಲ್ಯದಲ್ಲಿ ಕುಸಿತ ಕಂಡು ಬರುತ್ತಿರಲಿಲ್ಲ. 2006 ರಿಂದ ಬಿಲ್ ಗೇಟ್ಸ್ ತಮ್ಮ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನಕ್ಕೆ 27 ಬಿಲಿಯನ್​ ಡಾಲರ್​ಗಿಂತ ಹೆಚ್ಚಿನ ಮೊತ್ತವನ್ನು ದಾನ ಮಾಡಿದ್ದಾರೆ.

ಒಟ್ಟಾರೆ, ಕೊರೊನಾದಿಂದ ಜಾಗತಿಕ ಆರ್ಥಿಕತೆಗೆ ಹೊಡೆತಬಿದ್ದು ವಿಶ್ವದ ಕಾರ್ಮಿಕ ವರ್ಗ ಮತ್ತು ಬಡವರ ಮೇಲೆ ಇದರ ಪರಿಣಾಮ ಬೀರಿದ್ದರೂ, ಬ್ಲೂಮ್​ಬರ್ಗ್​ ಬಿಲಿಯನೇರ್ಸ್ ಸೂಚ್ಯಂಕದ ಸದಸ್ಯರು ಮಾತ್ರ ತಮ್ಮ ಸಂಪತ್ತನ್ನು ಒಟ್ಟು 1.3 ಟ್ರಿಲಿಯನ್ ಡಾಲರ್​ನಷ್ಟು ವೃದ್ಧಿಸಿದ್ದಾರೆ.

Published On - 6:23 pm, Tue, 24 November 20

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್