AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ 2ನೇ ಅತಿದೊಡ್ಡ ಶ್ರೀಮಂತ ಬಿಲ್​ ಗೇಟ್ಸ್​ನ ಹಿಂದಿಕ್ಕಿದ ಉದ್ಯಮಿ ಎಲಾನ್​ ಮಸ್ಕ್!

ಕಳೆದ ಜನವರಿಯಲ್ಲಿ 35ನೇ ಸ್ಥಾನದಲ್ಲಿದ ಮಸ್ಕ್ ಈಗ ಏಕಾಎಕಿ 2ನೇ ಸ್ಥಾನಕ್ಕೆ ಏರಿದ್ದು, ಆ ಮೂಲಕ ಎಲಾನ್ ಮಸ್ಕ್ ಕಳೆದ ಸೋಮವಾರ ಮೈಕ್ರೋಸಾಫ್ಟ್​ ಕಂಪನಿಯ ಸಹ ಸಂಸ್ಥಾಪಕ ಬಿಲ್ ಗೇಟ್ಸ್​ರನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿ ದೊಡ್ಡ ಶ್ರೀಮಂತನಾಗಿ ಹೊರಹೊಮ್ಮಿದ್ದಾರೆ.

ವಿಶ್ವದ 2ನೇ ಅತಿದೊಡ್ಡ ಶ್ರೀಮಂತ ಬಿಲ್​ ಗೇಟ್ಸ್​ನ ಹಿಂದಿಕ್ಕಿದ ಉದ್ಯಮಿ ಎಲಾನ್​ ಮಸ್ಕ್!
ಎಲಾನ್​ ಮಸ್ಕ್
preethi shettigar
| Edited By: |

Updated on:Nov 24, 2020 | 6:25 PM

Share

ಟೆಸ್ಲಾ ಸಹ ಸಂಸ್ಥಾಪಕ ಎಲಾನ್ ಮಸ್ಕ್ ನ ನಿವ್ವಳ ಸಂಪತ್ತಿನ ಮೌಲ್ಯ 7.2 ಬಿಲಿಯನ್​ ಡಾಲರ್​ನಿಂದ 127.9 ಬಿಲಿಯನ್ ಡಾಲರ್​​ಗೆ ಏರಿದೆ. ಬ್ಲೂಮ್​ಬರ್ಗ್​ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಜಗತ್ತಿನ 500 ಅತಿದೊಡ್ಡ ಶ್ರೀಮಂತರ ಪಟ್ಟಿಯಲ್ಲಿರುವ ಮಸ್ಕ್​ ಯಾರೂ ಮಾಡದ ಸಾಧನೆಯನ್ನು ಮಾಡಿದ್ದಾರೆ. ಕಳೆದ ಜನವರಿಯಲ್ಲಿ 35ನೇ ಸ್ಥಾನದಲ್ಲಿದ ಮಸ್ಕ್ ಈಗ ಏಕಾಎಕಿ 2ನೇ ಸ್ಥಾನಕ್ಕೆ ಏರಿದ್ದು, ಆ ಮೂಲಕ ಎಲಾನ್ ಮಸ್ಕ್ ಕಳೆದ ಸೋಮವಾರ ಮೈಕ್ರೋಸಾಫ್ಟ್​ ಕಂಪನಿಯ ಸಹ ಸಂಸ್ಥಾಪಕ ಬಿಲ್ ಗೇಟ್ಸ್​ರನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿ ದೊಡ್ಡ ಶ್ರೀಮಂತನಾಗಿ ಹೊರಹೊಮ್ಮಿದ್ದಾರೆ.

ಈ ವರ್ಷ ಎಲಾನ್ ಮಸ್ಕ್ ತನ್ನ ನಿವ್ವಳ ಸಂಪತ್ತಿನ ಮೌಲ್ಯಕ್ಕೆ 100.3 ಬಿಲಿಯನ್ ಡಾಲರ್​ನಷ್ಟು ಮೊತ್ತ​ ಸೇರಿಸಿದ್ದು,ಇದು ಟೆಸ್ಲಾ ಕಂಪನಿಯ ದೊಡ್ಡ ಸಾಧನೆಯಾಗಿದೆ. ಟೆಸ್ಲಾ ಕಂಪನಿಯ ಆದಾಯವೇ 500 ಬಿಲಿಯನ್​ ಡಾಲರ್​ರಷ್ಟಿದೆ. ಬಿಲ್​ ಗೇಟ್ಸ್ ಇದೇ ಮೊದಲ ಬಾರಿಗೆ ಎರಡನೇ ಸ್ಥಾನಕ್ಕಿಂತ ಕೆಳ ಹಂತದಲ್ಲಿದ್ದಾರೆ.

ಫಾರ್ಚೂನ್ ವರದಿಯ ಪ್ರಕಾರ, ಬಿಲ್ ಗೇಟ್ಸ್ ದತ್ತಿ ಸಂಸ್ಥೆಗಳಿಗೆ ಅಪಾರ ಪ್ರಮಾಣದಲ್ಲಿ ದೇಣಿಗೆ ನೀಡದಿದ್ದರೆ ಅವರ ನಿವ್ವಳ ಸಂಪತ್ತಿನ ಮೌಲ್ಯದಲ್ಲಿ ಕುಸಿತ ಕಂಡು ಬರುತ್ತಿರಲಿಲ್ಲ. 2006 ರಿಂದ ಬಿಲ್ ಗೇಟ್ಸ್ ತಮ್ಮ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನಕ್ಕೆ 27 ಬಿಲಿಯನ್​ ಡಾಲರ್​ಗಿಂತ ಹೆಚ್ಚಿನ ಮೊತ್ತವನ್ನು ದಾನ ಮಾಡಿದ್ದಾರೆ.

ಒಟ್ಟಾರೆ, ಕೊರೊನಾದಿಂದ ಜಾಗತಿಕ ಆರ್ಥಿಕತೆಗೆ ಹೊಡೆತಬಿದ್ದು ವಿಶ್ವದ ಕಾರ್ಮಿಕ ವರ್ಗ ಮತ್ತು ಬಡವರ ಮೇಲೆ ಇದರ ಪರಿಣಾಮ ಬೀರಿದ್ದರೂ, ಬ್ಲೂಮ್​ಬರ್ಗ್​ ಬಿಲಿಯನೇರ್ಸ್ ಸೂಚ್ಯಂಕದ ಸದಸ್ಯರು ಮಾತ್ರ ತಮ್ಮ ಸಂಪತ್ತನ್ನು ಒಟ್ಟು 1.3 ಟ್ರಿಲಿಯನ್ ಡಾಲರ್​ನಷ್ಟು ವೃದ್ಧಿಸಿದ್ದಾರೆ.

Published On - 6:23 pm, Tue, 24 November 20

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ