AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?

ಕೆಜಿಎಫ್-2​ ಟೀಸರ್​ ಈವರೆಗೆ 16.19 ಕೋಟಿ ವೀಕ್ಷಣೆ ಕಂಡಿದೆ. ಕನ್ನಡ ಸಿನಿಮಾದ ಟೀಸರ್​ ಒಂದು ಕಡಿಮೆ ಅವಧಿಯಲ್ಲಿ ಇಷ್ಟು ವೀಕ್ಷಣೆ ಕಂಡಿರುವುದು ಇದೇ ಮೊದಲಂತೆ. ಹೀಗಾಗಿ, ಈ ಟೀಸರ್​ನಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಗಳಿಕೆ ಬಂದಿದೆ ಎನ್ನಲಾಗುತ್ತಿದೆ.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?
KGF ಚಾಪ್ಟರ್-2
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Jun 23, 2021 | 1:38 PM

Share

ಕೆಜಿಎಫ್​ ಚಾಪ್ಟರ್​ 2 ಚಿತ್ರದ ಟೀಸರ್​ ಯಶ್​ ಜನ್ಮದಿನದ ಅಂಗವಾಗಿ ಜನವರಿ 7ರಂದು ರಿಲೀಸ್​ ಆಗಿತ್ತು. ಕೆಜಿಎಫ್​-2 ​ ಟೀಸರ್​​ ರಿಲೀಸ್​ ಸಾಕಷ್ಟು ದಾಖಲೆ ಸೃಷ್ಟಿಸಿದೆ. ವಿಶೇಷ ಎಂದರೆ ಈ ಟೀಸರ್​ ಒಂದೇ ಕೋಟಿ ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ.

ಯಶ್​ ಜನ್ಮದಿನದ ಅಂಗವಾಗಿ ರಿಲೀಸ್​ ಆಗಿದ್ದ ಕೆಜಿಎಫ್​-2 ಟೀಸರ್​​ ಐದೂ ಭಾಷೆಗಳಿಗೆ ಹೊಂದಿಕೆ ಆಗುವಂತಿತ್ತು. ಹೀಗಾಗಿ, ಬೇರೆ ಬೇರೆ ಟೀಸರ್​ ಬಿಡುಗಡೆ ಮಾಡದೆ, ಒಂದೇ ಟೀಸರ್​ ರಿಲೀಸ್ ಆಗಿತ್ತು. ಇನ್ನು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಎಲ್ಲಾ ಕಾರಣಕ್ಕೆ ಟೀಸರ್​ ಅತಿ ಹೆಚ್ಚು ವೀಕ್ಷಣೆ ಕಂಡಿತ್ತು.

ಕೆಜಿಎಫ್-2​ ಟೀಸರ್​ ಈವರೆಗೆ 16.19 ಕೋಟಿ ವೀಕ್ಷಣೆ ಕಂಡಿದೆ. ಕನ್ನಡ ಸಿನಿಮಾದ ಟೀಸರ್​ ಒಂದು ಕಡಿಮೆ ಅವಧಿಯಲ್ಲಿ ಇಷ್ಟು ವೀಕ್ಷಣೆ ಕಂಡಿರುವುದು ಇದೇ ಮೊದಲಂತೆ. ಹೀಗಾಗಿ, ಈ ಟೀಸರ್​ನಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಗಳಿಕೆ ಬಂದಿದೆ ಎನ್ನಲಾಗುತ್ತಿದೆ.

ವಿಡಿಯೋ ಎಷ್ಟು ವೀಕ್ಷಣೆ ಕಂಡಿದೆ ಎಂಬಿತ್ಯಾದಿ ವಿಚಾರ ಇಟ್ಟುಕೊಂಡು ಯೂಟ್ಯೂಬ್​ ವಿಡಿಯೋಗೆ ಹಣ ನೀಡುತ್ತದೆ. ಹೊಂಬಾಳೆ ಫಿಲ್ಮ್ಸ್​ನಲ್ಲಿ ತೆರೆಕಂಡಿರುವ ಈ ಟೀಸರ್​ನಿಂದ ಬರೋಬ್ಬರಿ 2.18 ಕೋಟಿ ರೂಪಾಯಿ ದೊರೆತಿದೆ ಎನ್ನಲಾಗಿದೆ. ಇದು ಕೆಲ ಸ್ಯಾಂಡಲ್​ವುಡ್​ ಹೀರೋನ ಸಂಭಾವನೆಗಿಂತ ಹೆಚ್ಚು ಅನ್ನೋದು ವಿಶೇಷ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ಅಕ್ಟೋಬರ್​ ತಿಂಗಳಲ್ಲೇ ಕೆಜಿಎಫ್​ -2 ರಿಲೀಸ್​ ಆಗಬೇಕಿತ್ತು. ಆದರೆ, ಕೊರೊನಾದಿಂದಾಗಿ ಕೆಜಿಎಫ್​-2 ಕೆಲಸಗಳು ಮುಂದೂಡಲ್ಪಟ್ಟಿದ್ದವು. ಈಗ ಚಿತ್ರದ ಕೆಲಸ ಪೂರ್ಣಗೊಂಡಿದ್ದು,  ಈ ವರ್ಷವೇ ಸಿನಿಮಾ ರಿಲೀಸ್​ ಆಗಲಿದೆಯಂತೆ.

Published On - 9:06 pm, Tue, 26 January 21

ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!