AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?

ಕೆಜಿಎಫ್-2​ ಟೀಸರ್​ ಈವರೆಗೆ 16.19 ಕೋಟಿ ವೀಕ್ಷಣೆ ಕಂಡಿದೆ. ಕನ್ನಡ ಸಿನಿಮಾದ ಟೀಸರ್​ ಒಂದು ಕಡಿಮೆ ಅವಧಿಯಲ್ಲಿ ಇಷ್ಟು ವೀಕ್ಷಣೆ ಕಂಡಿರುವುದು ಇದೇ ಮೊದಲಂತೆ. ಹೀಗಾಗಿ, ಈ ಟೀಸರ್​ನಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಗಳಿಕೆ ಬಂದಿದೆ ಎನ್ನಲಾಗುತ್ತಿದೆ.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?
KGF ಚಾಪ್ಟರ್-2
ರಾಜೇಶ್ ದುಗ್ಗುಮನೆ
| Edited By: |

Updated on:Jun 23, 2021 | 1:38 PM

Share

ಕೆಜಿಎಫ್​ ಚಾಪ್ಟರ್​ 2 ಚಿತ್ರದ ಟೀಸರ್​ ಯಶ್​ ಜನ್ಮದಿನದ ಅಂಗವಾಗಿ ಜನವರಿ 7ರಂದು ರಿಲೀಸ್​ ಆಗಿತ್ತು. ಕೆಜಿಎಫ್​-2 ​ ಟೀಸರ್​​ ರಿಲೀಸ್​ ಸಾಕಷ್ಟು ದಾಖಲೆ ಸೃಷ್ಟಿಸಿದೆ. ವಿಶೇಷ ಎಂದರೆ ಈ ಟೀಸರ್​ ಒಂದೇ ಕೋಟಿ ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ.

ಯಶ್​ ಜನ್ಮದಿನದ ಅಂಗವಾಗಿ ರಿಲೀಸ್​ ಆಗಿದ್ದ ಕೆಜಿಎಫ್​-2 ಟೀಸರ್​​ ಐದೂ ಭಾಷೆಗಳಿಗೆ ಹೊಂದಿಕೆ ಆಗುವಂತಿತ್ತು. ಹೀಗಾಗಿ, ಬೇರೆ ಬೇರೆ ಟೀಸರ್​ ಬಿಡುಗಡೆ ಮಾಡದೆ, ಒಂದೇ ಟೀಸರ್​ ರಿಲೀಸ್ ಆಗಿತ್ತು. ಇನ್ನು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಎಲ್ಲಾ ಕಾರಣಕ್ಕೆ ಟೀಸರ್​ ಅತಿ ಹೆಚ್ಚು ವೀಕ್ಷಣೆ ಕಂಡಿತ್ತು.

ಕೆಜಿಎಫ್-2​ ಟೀಸರ್​ ಈವರೆಗೆ 16.19 ಕೋಟಿ ವೀಕ್ಷಣೆ ಕಂಡಿದೆ. ಕನ್ನಡ ಸಿನಿಮಾದ ಟೀಸರ್​ ಒಂದು ಕಡಿಮೆ ಅವಧಿಯಲ್ಲಿ ಇಷ್ಟು ವೀಕ್ಷಣೆ ಕಂಡಿರುವುದು ಇದೇ ಮೊದಲಂತೆ. ಹೀಗಾಗಿ, ಈ ಟೀಸರ್​ನಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಗಳಿಕೆ ಬಂದಿದೆ ಎನ್ನಲಾಗುತ್ತಿದೆ.

ವಿಡಿಯೋ ಎಷ್ಟು ವೀಕ್ಷಣೆ ಕಂಡಿದೆ ಎಂಬಿತ್ಯಾದಿ ವಿಚಾರ ಇಟ್ಟುಕೊಂಡು ಯೂಟ್ಯೂಬ್​ ವಿಡಿಯೋಗೆ ಹಣ ನೀಡುತ್ತದೆ. ಹೊಂಬಾಳೆ ಫಿಲ್ಮ್ಸ್​ನಲ್ಲಿ ತೆರೆಕಂಡಿರುವ ಈ ಟೀಸರ್​ನಿಂದ ಬರೋಬ್ಬರಿ 2.18 ಕೋಟಿ ರೂಪಾಯಿ ದೊರೆತಿದೆ ಎನ್ನಲಾಗಿದೆ. ಇದು ಕೆಲ ಸ್ಯಾಂಡಲ್​ವುಡ್​ ಹೀರೋನ ಸಂಭಾವನೆಗಿಂತ ಹೆಚ್ಚು ಅನ್ನೋದು ವಿಶೇಷ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ಅಕ್ಟೋಬರ್​ ತಿಂಗಳಲ್ಲೇ ಕೆಜಿಎಫ್​ -2 ರಿಲೀಸ್​ ಆಗಬೇಕಿತ್ತು. ಆದರೆ, ಕೊರೊನಾದಿಂದಾಗಿ ಕೆಜಿಎಫ್​-2 ಕೆಲಸಗಳು ಮುಂದೂಡಲ್ಪಟ್ಟಿದ್ದವು. ಈಗ ಚಿತ್ರದ ಕೆಲಸ ಪೂರ್ಣಗೊಂಡಿದ್ದು,  ಈ ವರ್ಷವೇ ಸಿನಿಮಾ ರಿಲೀಸ್​ ಆಗಲಿದೆಯಂತೆ.

Published On - 9:06 pm, Tue, 26 January 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್