AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು -ವಿಡಿಯೋ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಅವರ ವೈಯಕ್ತಿಕ ಸಮಸ್ಯೆ ನೂರು ಇರುತ್ತೆ, ಅವರ ಮನೆಯವರನ್ನ ಕೇಳಬೇಕು. ರಾಜಕೀಯ ಒತ್ತಡ ಏನು ಅಂತಾ ನನಗೇನೂ ಗೊತ್ತು. ಇಂತಹ ವ್ಯಕ್ತಿ ಇಂತಹ ಕಾರಣಗಳಿಂದ ತೊಂದರೆ ಕೊಟ್ಟಿದ್ದಾರೆ ಅಂತಾ ಹೇಳಲಿ.

ಡಿಕೆಶಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು -ವಿಡಿಯೋ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಕೆ.ಎಸ್.ಈಶ್ವರಪ್ಪ
ಪೃಥ್ವಿಶಂಕರ
|

Updated on:Nov 28, 2020 | 12:22 PM

Share

ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಅವನ್ಯಾವೋನೋ ಸತ್ರೆ ಅಂತಾ ನನಗೆ ಪ್ರಶ್ನೆ ಕೇಳಿದ್ರೆ ಎಂದು ಮಾಧ್ಯಮದವರನ್ನೇ ಮೊದಲಿಗೆ ಪ್ರಶ್ನಿಸಿದ ಕೆ.ಎಸ್.ಈಶ್ವರಪ್ಪ ನಂತರ, ಸಂತೋಷ್​ ಅವರು ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಅಂತಾ ಟಿವಿ9 ನಲ್ಲಿ ನೋಡಿದೆ. ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಯತ್ನ ಎಂದು‌ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಬಿಜೆಪಿಯಲ್ಲಿ ಸದಸ್ಯರಿದ್ದಾರೆ.ಅವನು ಯಾಕೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ ಎಂದು ಪ್ರಶ್ನಿಸಿದರು.

ಅವರ ವೈಯಕ್ತಿಕ ಸಮಸ್ಯೆ ನೂರು ಇರುತ್ತೆ, ಅವರ ಮನೆಯವರನ್ನ ಕೇಳಬೇಕು. ರಾಜಕೀಯ ಒತ್ತಡ ಏನು ಅಂತಾ ನನಗೇನೂ ಗೊತ್ತು. ಇಂತಹ ವ್ಯಕ್ತಿ ಇಂತಹ ಕಾರಣಗಳಿಂದ ತೊಂದರೆ ಕೊಟ್ಟಿದ್ದಾರೆ ಅಂತಾ ಹೇಳಲಿ. ತೊಂದರೆ ಕೊಟ್ಟವರ ಬಗ್ಗೆ ಪೊಲೀಸ್ ಠಾಣೆಗೆ ದೂರು ಕೊಡಲಿ. ಅದನ್ನ ಬಿಟ್ಟು ಸುಮ್ಮನೇ ಹೇಳಿಕೆ ಕೊಟ್ಟು ಬಿಜೆಪಿ ಮೇಲೆ ಆಪಾದನೆ ಮಾಡುತ್ತಾ ಕುಳಿತರೇ? ಇದನ್ನ ಕಾಂಗ್ರೆಸ್, ಜೆಡಿಎಸ್‌ನವರು ಮಾಡಿದಾರೆ ಅಂತಾ ಹೇಳೋಕೆ ಬರುತ್ತಾ? ಎಂದರು.

‘ಇಂಥ ಹೇಳಿಕೆ ನೀಡುವುದಕ್ಕೆ ಡಿಕೆಶಿಗೆ ನಾಚಿಕೆಯಾಗಬೇಕು’ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮುಟ್ಠಾಳತನದ ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆ ನೀಡುವುದಕ್ಕೆ ಡಿಕೆಶಿಗೆ ನಾಚಿಕೆಯಾಗಬೇಕು. ಡಿ.ಕೆ.ಶಿವಕುಮಾರ್ ವಿಡಿಯೋ ಬಗ್ಗೆ ಹೇಳಿಕೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಬಳಿ ವಿಡಿಯೋ ಇದ್ದರೆ ಮಾತನಾಡಲಿ. ವಿಡಿಯೋ ಇದೆ ಎಂದು ಹೇಳುವುದು ದಿಕ್ಕು ತಪ್ಪಿಸುವ ಕೆಲಸ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್ ಬಳಿ ವಿಡಿಯೋ ಇದ್ದರೆ ಬಿಡುಗಡೆ ಮಾಡಲಿ. ಏನೇ ಅಪಾದನೆ ಮಾಡಬೇಕಾದರೂ ಡಾಕ್ಯುಮೆಂಟ್ ಬೇಕು. ಕಾಂಗ್ರೆಸ್ ನೆಲಕಚ್ಚಿದ್ದು ಈ ರೀತಿ ಸುಳ್ಳು ಆರೋಪ ಮಾಡ್ತಿದ್ದಾರೆ. ಪ್ರಚಾರಕ್ಕೆ ಈ ರೀತಿ ಹೇಳಿಕೆ ನೀಡಿದರೆ ಉಗ್ರವಾಗಿ ಖಂಡಿಸ್ತೇವೆ. ವಿಡಿಯೋ ಬಗ್ಗೆ ಪ್ರಸ್ತಾಪಿಸಿರುವ ಡಿಕೆಶಿ ಹೇಳಿಕೆಯಲ್ಲಿ ಆ ಶಾಸಕರು ಯಾರು? ಪರಿಷತ್ ಸದಸ್ಯರು ಯಾರು ಎಂಬುದನ್ನಾದರೂ ಹೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ K.S.ಈಶ್ವರಪ್ಪ ಸವಾಲ್ ಹಾಕಿದರು.

Published On - 12:19 pm, Sat, 28 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?