AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!

ಮದುವೆ ನಿಶ್ಚಯವಾಗಿರೋ ಹುಡುಗಿಯನ್ನು ತಾನು ಪ್ರೀತಿಸುತ್ತಿರೋದಾಗಿ ಸತೀಶ್ ಹೇಳಿಕೊಂಡಿದ್ದ. ಅಲ್ಲದೆ ಆಕೆ ಬೇರೆ ಮದುವೆ ಆಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!
ಬಲವಂತವಾಗಿ ತಾಳಿ ಕಟ್ಟಿದ ಸತೀಶ್​
ಪೃಥ್ವಿಶಂಕರ
| Edited By: |

Updated on:Jan 27, 2021 | 11:28 AM

Share

ಹಾಸನ: ಸೋಮವಾರ ವಿವಾಹ ನಿಗದಿಯಾಗಿದ್ದ ಮದುಮಗಳಿಗೆ ಮಾಜಿ ಪ್ರಿಯಕರನಿಂದ ಬಲವಂತವಾಗಿ ತಾಳಿಕಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ಯುವತಿ ಮನೆಯಲ್ಲಿ ನಡೆದಿದೆ.

ತಾನು ಆಕೆಯನ್ನ ಪ್ರೀತಿಸುತ್ತಿರೋದಾಗಿ ಮನೆಗೆ ಬಂದು ಬೆದರಿಸಿ ತಾಳಿಕಟ್ಟಿ ಕರೆದೊಯ್ದಿದ್ದಾರೆ ಎಂದು ಅರೆಕೆರೆ ಗ್ರಾಮದ ಯುವಕ ಸತೀಶ್ ವಿರುದ್ದ ಯುವತಿ ಪೋಷಕರ ಆರೋಪ ಮಾಡುತ್ತಿದ್ದಾರೆ. ಜನವರಿ 25 ಕ್ಕೆ ಸುಜಿತ್ ಕೃಷ್ಣ ಎಂಬುವವರ ಜೊತೆ ಯುವತಿಯ ಮದುವೆ ನಿಶ್ಚಯವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮದುವೆ ನಿಶ್ಚಯಿಸಿ ಕುಟುಂಬದವರು ಎಲ್ಲಾ ತಯಾರಿಮಾಡಿಕೊಂಡಿದ್ದರು.

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ.. ಮಧುವೆ ನಿಶ್ಚಯವಾಗಿರೋ ಹುಡುಗಿಯನ್ನು ತಾನು ಪ್ರೀತಿಸುತ್ತಿರೋದಾಗಿ ಸತೀಶ್ ಹೇಳಿಕೊಂಡಿದ್ದ. ಅಲ್ಲದೆ ಆಕೆ ಬೇರೆ ಮದುವೆ ಆಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ವಿಷಯ ತಿಳಿದ ಆತನ ಸ್ನೇಹಿತರು, ಸತೀಶ್‌ನನ್ನು ಯುವತಿ ಮನೆಗೆ ಕರೆದೊಯ್ದು ಅಲ್ಲೇ ಯುವತಿಯೊಂದಿಗೆ ಮದುವೆ ಮಾಡಿದ್ದಾರೆ.

ತಮ್ಮ ಮಗಳಿಗೆ ಇಷ್ಟವಿಲ್ಲದಿದ್ದರೂ ತಮ್ಮನ್ನ ಬೆದರಿಸಿ ಬಲವಂತವಾಗಿ ಮನೆಯೊಳಗೇ ಅರಿಶಿಣಕೊಂಬು ಕಟ್ಟಿ ಮಧುವೆ ಮಾಡಿದ್ದಾರೆ. ಹೀಗಾಗಿ ತಮ್ಮ ಮಗಳ ಪ್ರಾಣಕ್ಕೆ ಬೆದರಿಕೆ ಇದ್ದು ಆಕೆಯನ್ನು ರಕ್ಷಿಸಿ ಎಂದು ಯುವತಿಯ ತಾಯಿಯಿಂದ ಸಕಲೇಶಪುರ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಜನವರಿ 21 ರಂದು ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪ್ರಕರಣ ದಾಖಲಿಸಿಕೊಂಡ ಸಕಲೇಶಪುರ ನಗರ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

Published On - 8:10 am, Sat, 23 January 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು