ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!

ಮದುವೆ ನಿಶ್ಚಯವಾಗಿರೋ ಹುಡುಗಿಯನ್ನು ತಾನು ಪ್ರೀತಿಸುತ್ತಿರೋದಾಗಿ ಸತೀಶ್ ಹೇಳಿಕೊಂಡಿದ್ದ. ಅಲ್ಲದೆ ಆಕೆ ಬೇರೆ ಮದುವೆ ಆಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!
ಬಲವಂತವಾಗಿ ತಾಳಿ ಕಟ್ಟಿದ ಸತೀಶ್​
Edited By: sandhya thejappa

Updated on: Jan 27, 2021 | 11:28 AM

ಹಾಸನ: ಸೋಮವಾರ ವಿವಾಹ ನಿಗದಿಯಾಗಿದ್ದ ಮದುಮಗಳಿಗೆ ಮಾಜಿ ಪ್ರಿಯಕರನಿಂದ ಬಲವಂತವಾಗಿ ತಾಳಿಕಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ಯುವತಿ ಮನೆಯಲ್ಲಿ ನಡೆದಿದೆ.

ತಾನು ಆಕೆಯನ್ನ ಪ್ರೀತಿಸುತ್ತಿರೋದಾಗಿ ಮನೆಗೆ ಬಂದು ಬೆದರಿಸಿ ತಾಳಿಕಟ್ಟಿ ಕರೆದೊಯ್ದಿದ್ದಾರೆ ಎಂದು ಅರೆಕೆರೆ ಗ್ರಾಮದ ಯುವಕ ಸತೀಶ್ ವಿರುದ್ದ ಯುವತಿ ಪೋಷಕರ ಆರೋಪ ಮಾಡುತ್ತಿದ್ದಾರೆ. ಜನವರಿ 25 ಕ್ಕೆ ಸುಜಿತ್ ಕೃಷ್ಣ ಎಂಬುವವರ ಜೊತೆ ಯುವತಿಯ ಮದುವೆ ನಿಶ್ಚಯವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮದುವೆ ನಿಶ್ಚಯಿಸಿ ಕುಟುಂಬದವರು ಎಲ್ಲಾ ತಯಾರಿಮಾಡಿಕೊಂಡಿದ್ದರು.

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ..
ಮಧುವೆ ನಿಶ್ಚಯವಾಗಿರೋ ಹುಡುಗಿಯನ್ನು ತಾನು ಪ್ರೀತಿಸುತ್ತಿರೋದಾಗಿ ಸತೀಶ್ ಹೇಳಿಕೊಂಡಿದ್ದ. ಅಲ್ಲದೆ ಆಕೆ ಬೇರೆ ಮದುವೆ ಆಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ವಿಷಯ ತಿಳಿದ ಆತನ ಸ್ನೇಹಿತರು, ಸತೀಶ್‌ನನ್ನು ಯುವತಿ ಮನೆಗೆ ಕರೆದೊಯ್ದು ಅಲ್ಲೇ ಯುವತಿಯೊಂದಿಗೆ ಮದುವೆ ಮಾಡಿದ್ದಾರೆ.

ತಮ್ಮ ಮಗಳಿಗೆ ಇಷ್ಟವಿಲ್ಲದಿದ್ದರೂ ತಮ್ಮನ್ನ ಬೆದರಿಸಿ ಬಲವಂತವಾಗಿ ಮನೆಯೊಳಗೇ ಅರಿಶಿಣಕೊಂಬು ಕಟ್ಟಿ ಮಧುವೆ ಮಾಡಿದ್ದಾರೆ. ಹೀಗಾಗಿ ತಮ್ಮ ಮಗಳ ಪ್ರಾಣಕ್ಕೆ ಬೆದರಿಕೆ ಇದ್ದು ಆಕೆಯನ್ನು ರಕ್ಷಿಸಿ ಎಂದು ಯುವತಿಯ ತಾಯಿಯಿಂದ ಸಕಲೇಶಪುರ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಜನವರಿ 21 ರಂದು ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪ್ರಕರಣ ದಾಖಲಿಸಿಕೊಂಡ ಸಕಲೇಶಪುರ ನಗರ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

Published On - 8:10 am, Sat, 23 January 21

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us