AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿದ ಮಾಜಿ ಮಿನಿಸ್ಟರ್, ರಾತ್ರಿ ಇಡೀ ನಿದ್ದೆ ಇಲ್ಲವಂತೆ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಯಂತೆ ಬೆಳಗಾವಿಯ ಹಿಂಡಲಗಾ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಒಂದು ರಾತ್ರಿ ಕಳೆದಿದ್ದಾರೆ. ರಾತ್ರಿ ಪೂರ್ತಿ ನಿದ್ದೆ ಮಾಡದ ವಿನಯ್ ಕುಲಕರ್ಣಿ: ವಿನಯ್ ಸೆಲ್​ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿ ರಾತ್ರಿಯಿಡೀ ನಿದ್ದೆ ಮಾಡದೆ ಸೆಲ್​ನಲ್ಲಿಯೇ ಅತ್ತಿಂದಿತ್ತ ಓಡಾಡುತ್ತ ಬೆಳಗಿನ ಜಾವ ನಿದ್ದೆಗೆ ಜಾರಿದ್ರು. ಊಟವಿಲ್ಲದೆ ರಾತ್ರಿ ಕಳೆದಿದ್ದಾರೆ. ವಿನಯ್ […]

ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿದ ಮಾಜಿ ಮಿನಿಸ್ಟರ್, ರಾತ್ರಿ ಇಡೀ ನಿದ್ದೆ ಇಲ್ಲವಂತೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Nov 30, 2020 | 5:25 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಯಂತೆ ಬೆಳಗಾವಿಯ ಹಿಂಡಲಗಾ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಒಂದು ರಾತ್ರಿ ಕಳೆದಿದ್ದಾರೆ.

ರಾತ್ರಿ ಪೂರ್ತಿ ನಿದ್ದೆ ಮಾಡದ ವಿನಯ್ ಕುಲಕರ್ಣಿ: ವಿನಯ್ ಸೆಲ್​ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿ ರಾತ್ರಿಯಿಡೀ ನಿದ್ದೆ ಮಾಡದೆ ಸೆಲ್​ನಲ್ಲಿಯೇ ಅತ್ತಿಂದಿತ್ತ ಓಡಾಡುತ್ತ ಬೆಳಗಿನ ಜಾವ ನಿದ್ದೆಗೆ ಜಾರಿದ್ರು. ಊಟವಿಲ್ಲದೆ ರಾತ್ರಿ ಕಳೆದಿದ್ದಾರೆ. ವಿನಯ್ ಕುಲಕರ್ಣಿ ವಿಚಾರಣಾಧೀನ ಕೈದಿ ನಂಬರ್ 16635.

ಮಾಜಿ ಸಚಿವರಿಗೆ ಉಪ್ಪಿಟ್ಟೇ ಉಪಾಹಾರ: ಹಿಂಡಲಗಾ ಜೈಲಲ್ಲಿ ಮಾಜಿ ಸಚಿವರಿಗೆ ಉಪ್ಪಿಟ್ಟನ್ನು ಉಪಾಹಾರಕ್ಕೆ ನೀಡಲಾಯಿತು. ಬೆಳಗ್ಗೆ 7.30ಕ್ಕೆ ಉಪಾಹಾರಕ್ಕೆ ಉಪ್ಪಿಟ್ಟು ಹಾಗೂ ಚಹಾ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ಕೈದಿಗಳಿಗೆ ಕೊಡುವ ಉಪಾಹಾರವನ್ನೇ ಸಿಬ್ಬಂದಿ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಕೊಟ್ಟಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಬೆಳಗ್ಗೆ 11.30ಕ್ಕೆ ವಿನಯ್​ ಕುಲಕರ್ಣಿ ವಿಚಾರಣೆ ನಡೆಯುತ್ತೆ. ಧಾರವಾಡ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಂಚಾಕ್ಷರಿ ಮುಂದೆ ಹಾಜರು ಪಡಿಸಲಾಗುತ್ತೆ. ಸಿಬಿಐ ಪರ ವಕೀಲರು 3 ದಿನ ವಶಕ್ಕೆ ನೀಡುವಂತೆ ಕೋರಿದ್ದರು. ಆದರೆ ಸಿಬಿಐ ಕೋರಿಕೆ ಮನ್ನಿಸದೆ 1 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದ್ದು ಇಂದು ಬೆಳಗ್ಗೆ ಹಾಜರು ಪಡಿಸಬೇಕೆಂದು ನ್ಯಾಯಾಧೀಶರು ತಿಳಿಸಿದ್ದರು. ಅದರಂತೆ ಇಂದು ವಿಚಾರಣೆ ನಡೆಯುತ್ತೆ.

Published On - 8:42 am, Fri, 6 November 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ