AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿದ ಮಾಜಿ ಮಿನಿಸ್ಟರ್, ರಾತ್ರಿ ಇಡೀ ನಿದ್ದೆ ಇಲ್ಲವಂತೆ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಯಂತೆ ಬೆಳಗಾವಿಯ ಹಿಂಡಲಗಾ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಒಂದು ರಾತ್ರಿ ಕಳೆದಿದ್ದಾರೆ. ರಾತ್ರಿ ಪೂರ್ತಿ ನಿದ್ದೆ ಮಾಡದ ವಿನಯ್ ಕುಲಕರ್ಣಿ: ವಿನಯ್ ಸೆಲ್​ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿ ರಾತ್ರಿಯಿಡೀ ನಿದ್ದೆ ಮಾಡದೆ ಸೆಲ್​ನಲ್ಲಿಯೇ ಅತ್ತಿಂದಿತ್ತ ಓಡಾಡುತ್ತ ಬೆಳಗಿನ ಜಾವ ನಿದ್ದೆಗೆ ಜಾರಿದ್ರು. ಊಟವಿಲ್ಲದೆ ರಾತ್ರಿ ಕಳೆದಿದ್ದಾರೆ. ವಿನಯ್ […]

ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿದ ಮಾಜಿ ಮಿನಿಸ್ಟರ್, ರಾತ್ರಿ ಇಡೀ ನಿದ್ದೆ ಇಲ್ಲವಂತೆ
ಆಯೇಷಾ ಬಾನು
| Edited By: |

Updated on:Nov 30, 2020 | 5:25 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಯಂತೆ ಬೆಳಗಾವಿಯ ಹಿಂಡಲಗಾ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಒಂದು ರಾತ್ರಿ ಕಳೆದಿದ್ದಾರೆ.

ರಾತ್ರಿ ಪೂರ್ತಿ ನಿದ್ದೆ ಮಾಡದ ವಿನಯ್ ಕುಲಕರ್ಣಿ: ವಿನಯ್ ಸೆಲ್​ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿ ರಾತ್ರಿಯಿಡೀ ನಿದ್ದೆ ಮಾಡದೆ ಸೆಲ್​ನಲ್ಲಿಯೇ ಅತ್ತಿಂದಿತ್ತ ಓಡಾಡುತ್ತ ಬೆಳಗಿನ ಜಾವ ನಿದ್ದೆಗೆ ಜಾರಿದ್ರು. ಊಟವಿಲ್ಲದೆ ರಾತ್ರಿ ಕಳೆದಿದ್ದಾರೆ. ವಿನಯ್ ಕುಲಕರ್ಣಿ ವಿಚಾರಣಾಧೀನ ಕೈದಿ ನಂಬರ್ 16635.

ಮಾಜಿ ಸಚಿವರಿಗೆ ಉಪ್ಪಿಟ್ಟೇ ಉಪಾಹಾರ: ಹಿಂಡಲಗಾ ಜೈಲಲ್ಲಿ ಮಾಜಿ ಸಚಿವರಿಗೆ ಉಪ್ಪಿಟ್ಟನ್ನು ಉಪಾಹಾರಕ್ಕೆ ನೀಡಲಾಯಿತು. ಬೆಳಗ್ಗೆ 7.30ಕ್ಕೆ ಉಪಾಹಾರಕ್ಕೆ ಉಪ್ಪಿಟ್ಟು ಹಾಗೂ ಚಹಾ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ಕೈದಿಗಳಿಗೆ ಕೊಡುವ ಉಪಾಹಾರವನ್ನೇ ಸಿಬ್ಬಂದಿ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಕೊಟ್ಟಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಬೆಳಗ್ಗೆ 11.30ಕ್ಕೆ ವಿನಯ್​ ಕುಲಕರ್ಣಿ ವಿಚಾರಣೆ ನಡೆಯುತ್ತೆ. ಧಾರವಾಡ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಂಚಾಕ್ಷರಿ ಮುಂದೆ ಹಾಜರು ಪಡಿಸಲಾಗುತ್ತೆ. ಸಿಬಿಐ ಪರ ವಕೀಲರು 3 ದಿನ ವಶಕ್ಕೆ ನೀಡುವಂತೆ ಕೋರಿದ್ದರು. ಆದರೆ ಸಿಬಿಐ ಕೋರಿಕೆ ಮನ್ನಿಸದೆ 1 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದ್ದು ಇಂದು ಬೆಳಗ್ಗೆ ಹಾಜರು ಪಡಿಸಬೇಕೆಂದು ನ್ಯಾಯಾಧೀಶರು ತಿಳಿಸಿದ್ದರು. ಅದರಂತೆ ಇಂದು ವಿಚಾರಣೆ ನಡೆಯುತ್ತೆ.

Published On - 8:42 am, Fri, 6 November 20

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !