AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆಗೆ 1 ಕೋಟಿ ಲಂಚ ಕೇಳಿದ ಆರೋಪ: ಸಚಿವ ಹೆಚ್.ನಾಗೇಶ್ ವಿರುದ್ದ ಪ್ರಧಾನಿಗೆ ದೂರು ಕೊಟ್ಟ ಅಬಕಾರಿ ಅಧಿಕಾರಿಯ ಪುತ್ರಿ

ಬೆಂಗಳೂರಲ್ಲಿ ಖಾಲಿ ಇರುವ ಜಂಟಿ ಆಯುಕ್ತರ ಹುದ್ದೆಗೆ ಬರಲು ಸಚಿವರ ಬಳಿ ಮನವಿ ಮಾಡಿದ್ದಾರೆ. ಈ ವೇಳೆ ಅಬಕಾರಿ ಸಚಿವ ಹೆಚ್.ನಾಗೇಶ್ ವರ್ಗಾವಣೆ ಮಾಡಲು ಒಂದು ಕೋಟಿ ರೂಪಾಯಿ ಲಂಚ ಕೇಳಿದ್ದಾರೆ ಎಂದು ಅಧಿಕಾರಿಯ ಪುತ್ರಿ ಪ್ರಧಾನಿ ಮೋದಿ ಕಚೇರಿಗೆ ದೂರು ನೀಡಿದ್ದಾರೆ.

ವರ್ಗಾವಣೆಗೆ 1 ಕೋಟಿ ಲಂಚ ಕೇಳಿದ ಆರೋಪ: ಸಚಿವ ಹೆಚ್.ನಾಗೇಶ್ ವಿರುದ್ದ ಪ್ರಧಾನಿಗೆ ದೂರು ಕೊಟ್ಟ ಅಬಕಾರಿ ಅಧಿಕಾರಿಯ ಪುತ್ರಿ
ಸಚಿವ ಹೆಚ್.ನಾಗೇಶ್
ಪೃಥ್ವಿಶಂಕರ
|

Updated on:Dec 21, 2020 | 6:51 PM

Share

ಕೋಲಾರ: ಅಬಕಾರಿ ಸಚಿವ ಹೆಚ್.ನಾಗೇಶ್ ₹ 1 ಕೋಟಿ ಲಂಚ ಕೇಳಿದ್ದಾರೆ ಎಂದು ಆರೋಪಿಸಿ ಅಬಕಾರಿ ಅಧಿಕಾರಿಯೊಬ್ಬರ ಪುತ್ರಿ ಪ್ರಧಾನಿ ಮೋದಿ ಕಚೇರಿಗೆ ದೂರು ನೀಡಿರುವ ಘಟನೆ ನಡೆದಿದೆ.

ಹೊಸಪೇಟೆ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಬಕಾರಿ ಅಧಿಕಾರಿಯೊಬ್ಬರು ಅನಾರೋಗ್ಯ ಹಿನ್ನೆಲೆಯಿಂದ ಬೆಂಗಳೂರಲ್ಲಿ ಖಾಲಿ ಇರುವ ಜಂಟಿ ಆಯುಕ್ತರ ಹುದ್ದೆಗೆ ನಿಯೋಜಿಸಲು ಸಚಿವರ ಬಳಿ ಮನವಿ ಮಾಡಿದ್ದಾರೆ. ಈ ವೇಳೆ ಅಬಕಾರಿ ಸಚಿವ ಹೆಚ್.ನಾಗೇಶ್ ವರ್ಗಾವಣೆ ಮಾಡಲು ಒಂದು ಕೋಟಿ ರೂಪಾಯಿ ಲಂಚ ಕೇಳಿದ್ದಾರೆ ಎಂದು ಅಧಿಕಾರಿಯ ಪುತ್ರಿ ಪ್ರಧಾನಿ ಮೋದಿ ಕಚೇರಿಗೆ ದೂರು ನೀಡಿದ್ದಾರೆ.

ಅಲ್ಲದೆ ಅಬಕಾರಿ ಇಲಾಖೆಯಲ್ಲಿ ದಲ್ಲಾಳಿಗಳನ್ನು ಇರಿಸಿ ವರ್ಗಾವಣೆಯಲ್ಲಿ ಲಂಚ ವಸೂಲಿ ಮಾಡುತ್ತಿದ್ದಾರೆ ಎಂದು ಅಧಿಕಾರಿಯ ಪುತ್ರಿ ದೂರಿನಲ್ಲಿ ಆರೋಪ ಮಾಡಿದ್ದಾಳೆ. ಯುವತಿ ಕಳುಹಿಸಿರುವ ದೂರು ಪ್ರಧಾನಿ ಕಚೇರಿಯಲ್ಲಿ POWPU/E/2020/0655623 ಸಂಖ್ಯೆಯಲ್ಲಿ ದಾಖಲಾಗಿದೆ.

ರಾಜ್ಯ ಸರ್ಕಾರದ ಇ-ಜನ ಸ್ಪಂದನ ಮನವಿಯು 51868298 ಈ ಸಂಖ್ಯೆಯಲ್ಲಿ ದಾಖಲಾಗಿದೆ. ಅಧಿಕಾರಿಯ ಪುತ್ರಿಯ ಈ ಕಾರ್ಯದಿಂದಾಗಿ ಭ್ರಷ್ಟಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ ಯುವತಿಯು ರಾಜ್ಯದ ಇತರ ಸಚಿವರು ಹಾಗೂ ವಿರೋಧ ಪಕ್ಷದವರಿಗೂ ದೂರಿನ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಲಂಚ ಪಡೆದ BBMP ಹಿರಿಯ ಅರೋಗ್ಯಾಧಿಕಾರಿ ವಿ.ಆರ್. ಪ್ರವೀಣ್ ಕುಮಾರ್ ಅರೆಸ್ಟ್

Published On - 6:44 pm, Mon, 21 December 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್