AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ಮಳೆ: ಆಲಮಟ್ಟಿ ಡ್ಯಾಂಗೆ ಹರಿದು ಬರುತ್ತಿದೆ ಭರಪೂರ ನೀರು

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಲಾಲ್ ಬಹದ್ದೂರ ಶಾಸ್ತ್ರೀ ಸಾಗರಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.ಹೆಚ್ಚಿನ ಒಳ ಹರಿವಿನ ಕಾರಣ ಶುಕ್ರವಾರ ಬೆಳಗ್ಗೆ ಜಲಾಶಯದ ಎಲ್ಲ 26 ಕ್ರಸ್ಟ್  ಗೇಟ್ ಗಳನ್ನು ತೆರದು ಸುಮಾರು 1.50 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಮಹಾರಾಷ್ಟ್ರದ ಜಲಾಶಯಗಳಿಂದಲೂ ಅಧಿಕ ಪ್ರಮಾಣ ನೀರು ಹರಿದು ಬರುತ್ತಿರುವ ಕಾರಣ ಒಳಹರಿವು ಹೆಚ್ಚಾಗಿದೆ. ಸದ್ಯ ಜಲಾಶಯದಲ್ಲಿ 97.27 ಟಿಎಂಸಿ‌ ನೀರು ಸಂಗ್ರಹವಾಗಿದೆ. ಇಂದು ಸಂಜೆಯವರೆಗೆ ಒಳಹರಿವು […]

ಮಹಾ ಮಳೆ: ಆಲಮಟ್ಟಿ ಡ್ಯಾಂಗೆ ಹರಿದು ಬರುತ್ತಿದೆ ಭರಪೂರ ನೀರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 07, 2020 | 2:02 PM

Share

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಲಾಲ್ ಬಹದ್ದೂರ ಶಾಸ್ತ್ರೀ ಸಾಗರಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.ಹೆಚ್ಚಿನ ಒಳ ಹರಿವಿನ ಕಾರಣ ಶುಕ್ರವಾರ ಬೆಳಗ್ಗೆ ಜಲಾಶಯದ ಎಲ್ಲ 26 ಕ್ರಸ್ಟ್  ಗೇಟ್ ಗಳನ್ನು ತೆರದು ಸುಮಾರು 1.50 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ.

ಮಹಾರಾಷ್ಟ್ರದ ಜಲಾಶಯಗಳಿಂದಲೂ ಅಧಿಕ ಪ್ರಮಾಣ ನೀರು ಹರಿದು ಬರುತ್ತಿರುವ ಕಾರಣ ಒಳಹರಿವು ಹೆಚ್ಚಾಗಿದೆ. ಸದ್ಯ ಜಲಾಶಯದಲ್ಲಿ 97.27 ಟಿಎಂಸಿ‌ ನೀರು ಸಂಗ್ರಹವಾಗಿದೆ. ಇಂದು ಸಂಜೆಯವರೆಗೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಕಾರಣ ಸಂಜೆ 2 ಲಕ್ಷ ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ.

ಜಲಾಶಯ ಭರ್ತಿಗೆ ದಿನಗಣನೆ ಸಹ ಆರಂಭವಾಗಿದೆ. ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಇದ್ದು, ಈಗಾಗಲೇ 517.96 ಮೀಟರ್ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ 517.27 ಮೀಟರ್ ನೀರು ಸಂಗ್ರಹವಾಗಿತ್ತು.

ವಿದ್ಯುತ್ ಉತ್ಪಾದನೆ.. ಜಲಾಶಯದಲ್ಲಿ ನೀರು ಹೆಚ್ಚಾಗುತ್ತಿರುವ ಕಾರಣ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ  ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಸದ್ಯ 33,000 ಕ್ಯೂಸೆಕ್ ನೀರನ್ನು ಬಳಸಿಕೊಂಡು 215 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಉತ್ಪಾದನೆ ಬೇಡಿಕೆ ಹೆಚ್ಚಾದರೆ ರಾತ್ರಿ ಸಹ ಇನ್ನಷ್ಟು ನೀರು ಪಡೆದು ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ ಎಂದು ಕೆಬಿಜೆಎನ್ಎಲ್ ಹಾಗೂ ಕೆಪಿಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ -ಅಶೋಕ ಯಡಳ್ಳಿ

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ