AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ತಡೆಯಲು ಫೇಸ್​ಬುಕ್​ನಿಂದ ಹೊಸ ಅಸ್ತ್ರ

ಕೊರೊನಾ ಲಸಿಕೆಯ ಬಗ್ಗೆ ಜಾಲತಾಣದಲ್ಲಿ ಹರಿದಾಡುವ ತಪ್ಪು ಮಾಹಿತಿಗಳು ಅಪಾಯ ತಂದೊಡ್ಡುವ ಸಾಧ್ಯತೆಯಿದೆ ಎಂದು ಫೇಸ್​ಬುಕ್ ಅಭಿಪ್ರಾಯಪಟ್ಟಿದೆ.

ಕೊರೊನಾ ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ತಡೆಯಲು ಫೇಸ್​ಬುಕ್​ನಿಂದ ಹೊಸ ಅಸ್ತ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:42 PM

Share

ಕೊರೊನಾ ಲಸಿಕೆಯ ಬಗೆಗಿನ ಸುಳ್ಳು ಸುದ್ದಿ ತಡೆಗಟ್ಟಲು ಫೇಸ್​ಬುಕ್ ಸಂಸ್ಥೆ ಹೊಸ ಅಸ್ತ್ರ ಪ್ರಯೋಗಿಸಿದೆ. ಕೊವಿಡ್ ಲಸಿಕೆಯ ತಪ್ಪು ಮಾಹಿತಿಗಳನ್ನು ಫೇಸ್​ಬುಕ್​ನಿಂದ ತೆಗೆದುಹಾಕುವುದಾಗಿ ಹೇಳಿದೆ. ಕಳೆದ ಅಕ್ಟೋಬರ್​ನಲ್ಲಿ ಆಲ್ಫಾಬೆಟ್ ಇಂಕ್ (ಗೂಗಲ್) ಸಂಸ್ಥೆ ಯೂಟ್ಯೂಬ್ ಕುರಿತಾಗಿ ಇದೇ ನಿರ್ಧಾರವನ್ನು ತಾಳಿತ್ತು.

ಸಾರ್ವಜನಿಕ ವೇದಿಕೆಯಲ್ಲಿ ಹಲವು ಆರೋಗ್ಯ ತಜ್ಞರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಫೇಸ್​ಬುಕ್​ ನೀತಿಗಳನ್ನು ಮೀರುವ ಅಂತಹ ವಿಚಾರಗಳನ್ನು ತೆಗೆದುಹಾಕುವುದಾಗಿ ಫೇಸ್​ಬುಕ್​ ಹೇಳಿದೆ. ಕೊರೊನಾ ಲಸಿಕೆಯ ಬಗ್ಗೆ ಹರಿದಾಡುವ ತಪ್ಪು ಮಾಹಿತಿಗಳು ಅಪಾಯ ತಂದೊಡ್ಡುವ ಸಾಧ್ಯತೆಯಿದೆ ಎಂದು ಫೇಸ್​ಬುಕ್ ಅಭಿಪ್ರಾಯಪಟ್ಟಿದೆ.

ಫೈಜರ್ ಮತ್ತು ಮಾಡೆರ್ನಾ ಲಸಿಕೆ ತಯಾರಿಕಾ ಸಂಸ್ಥೆಗಳು ಅಮೆರಿಕ ಬಳಿ, ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿವೆ. ಫೈಜರ್ ಲಸಿಕೆಯ ಬಳಕೆಗೆ ಬುಧವಾರ ಅನುಮತಿ ಸೂಚಿಸಿರುವ ಬ್ರಿಟನ್, ಲಸಿಕೆ ಹಂಚಿಕೆಯಲ್ಲಿ ಮುಂಚೂಣಿಯಲ್ಲಿರುವ ಆಸಕ್ತಿ ತೋರಿದೆ.

ಈ ಸಂದರ್ಭದಲ್ಲಿ ವಿವಿಧ ಸಿದ್ಧಾಂತದ ಹಿನ್ನೆಲೆಯ ಲಸಿಕೆ ವಿರೋಧಿ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ವೈರಲ್ ಆಗಿದ್ದನ್ನು ಸಂಶೋಧಕರು ಗುರುತಿಸಿದ್ದಾರೆ. ಫಸ್ಟ್ ಡ್ರಾಫ್ಟ್ ಅಧ್ಯಯನದ ಪ್ರಕಾರ, ಫೇಸ್​ಬುಕ್ ಮತ್ತು ಇನ್ಸ್ಟಾಗ್ರಾಮ್​ನಲ್ಲಿ ನಡೆದ ಶೇ. 84ರಷ್ಟು ಸಂವಹನವು ಕೊವಿಡ್ ಲಸಿಕೆ ಕುರಿತದ್ದಾಗಿದೆ.

ಲಸಿಕೆ ಸುರಕ್ಷತೆ, ಅದರ ಪರಿಣಾಮಗಳು, ಲಸಿಕೆಗೆ ಬಳಸಿರುವ ಅಂಶಗಳು, ಲಸಿಕೆಯ ಅಡ್ಡಪರಿಣಾಮಗಳು ಇತ್ಯಾದಿ ಸುಳ್ಳು ಸುದ್ದಿಗಳನ್ನು ಹೊರಹಾಕುವುದಾಗಿ ಫೇಸ್​ಬುಕ್ ತಿಳಿಸಿದೆ. ಹಾಗೆಂದು ರಾತ್ರೋರಾತ್ರಿ ಈ ಕೆಲಸ ಮಾಡಿ ಮುಗಿಸಲು ಸಾಧ್ಯವಿಲ್ಲ ಎಂದಿರುವ ಫೇಸ್​ಬುಕ್, ಯಾವತ್ತಿನಿಂದ ನಿಯಮಗಳು ಕಾರ್ಯರೂಪಕ್ಕೆ ಬರಲಿವೆ ಎಂದು ತಿಳಿಸಿಲ್ಲ.

ಕೊರೊನಾ ಲಸಿಕೆಯ ಬಗ್ಗೆ ಅಧೈರ್ಯ ಮೂಡಿಸುವ ಜಾಹೀರಾತುಗಳನ್ನೂ ನಿಷೇಧಿಸುವುದಾಗಿ ಫೇಸ್​ಬುಕ್ ಕಳೆದ ಅಕ್ಟೋಬರ್​ನಲ್ಲಿ ಹೇಳಿತ್ತು. ಅದರಂತೆ ಲಸಿಕೆ ವಿರೋಧಿ ಫೇಸ್​ಬುಕ್ ಪೇಜನ್ನು ಮತ್ತು ಕೆಲವು ಖಾಸಗಿ ಗುಂಪುಗಳನ್ನು ಫೇಸ್​ಬುಕ್​ನಿಂದ ತೆಗೆದುಹಾಕಿತ್ತು.

Published On - 6:43 pm, Fri, 4 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್