AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ ಸ್ನೇಹಿತನ ಜೊತೆ ಪ್ರೀತಿಗೆ ಬಿದ್ದಿದ್ದ ಯುವತಿ ಅವನದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್‌ಬುಕ್‌ನಲ್ಲಿ ಸುರೇಶ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಬಳಿಕ ಅಶ್ವಿನಿ ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ಹೋಗುವಾಗ ಆಟೋ ಡ್ರೈವರ್ ಆಗಿದ್ದ ಸುರೇಶ್ ದಿನಲೂ ಆಕೆಯನ್ನು ಕೆಲಸಕ್ಕೆ ಡ್ರಾಪ್ ಮಾಡುತ್ತಿದ್ದ. ಈ ವೇಳೆ ಇವರಿಬ್ಬರಲ್ಲಿ ಪ್ರೀತಿ ಹುಟ್ಟಿತ್ತು...

ಫೇಸ್​ಬುಕ್​ ಸ್ನೇಹಿತನ ಜೊತೆ ಪ್ರೀತಿಗೆ ಬಿದ್ದಿದ್ದ ಯುವತಿ ಅವನದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಅಶ್ವಿನಿ ಮತ್ತು ಸುರೇಶ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 14, 2021 | 11:58 AM

Share

ದೇವನಹಳ್ಳಿ: ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಎಂ.ವಿ.ಬಡಾವಣೆ ಮನೆಯಲ್ಲಿ ಮಹಿಳೆಯ ಮೃತದೇಹ ಸಿಕ್ಕಿದೆ. ತುಮಕೂರು ಜಿಲ್ಲೆ ಕೊರಟಗೆರೆಯ ಅಶ್ವಿನಿ(23) ಮೃತ ಮಹಿಳೆ. 3 ದಿನಗಳಿಂದೆ ಯುವತಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.

ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್‌ಬುಕ್‌ನಲ್ಲಿ ಸುರೇಶ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಬಳಿಕ ಅಶ್ವಿನಿ ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ಹೋಗುವಾಗ ಆಟೋ ಡ್ರೈವರ್ ಆಗಿದ್ದ ಸುರೇಶ್ ದಿನಲೂ ಆಕೆಯನ್ನು ಕೆಲಸಕ್ಕೆ ಡ್ರಾಪ್ ಮಾಡುತ್ತಿದ್ದ. ಈ ವೇಳೆ ಇವರಿಬ್ಬರಲ್ಲಿ ಪ್ರೀತಿ ಹುಟ್ಟಿತ್ತು. 2 ತಿಂಗಳ ಹಿಂದೆ ಸುರೇಶ್ ಆಕೆಯ ಪ್ರಿಯತಮೆ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದಿದ್ದ. ಕೆಲ ದಿನಗಳು ಎಲ್ಲವೂ ಚನ್ನಾಗಿತ್ತು. ಆದ್ರೆ ಇತ್ತೀಚೆಗೆ ಅಶ್ವಿನಿ ಸೂಲಿಬೆಲೆ ಪೊಲೀಸ್ ಠಾಣೆ ಮೆಟ್ಟಿಲೇರಿ ಸುರೇಶ್ ವಂಚಿಸಿದ್ದಾನೆಂದು ಸುರೇಶ್ ವಿರುದ್ಧ ಪೊಲೀಸರ ಮೊರೆ ಹೋಗಿದ್ದಳು. ಈ ವೇಳೆ ಸೂಲಿಬೆಲೆ ಪೊಲೀಸರು ಅಶ್ವಿನಿ ಮತ್ತು ಸುರೇಶ್‌ ಜೊತೆ ಮಾತಾನಾಡಿ ಇಬ್ಬರಿಗೂ ರಾಜಿ ಮಾಡಿ ಕಳಿಸಿದ್ದರು.

ಆದ್ರೆ ಇದೀಗ ಅಶ್ವಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅಶ್ವಿನಿಯನ್ನು ಸುರೇಶ್ ಕೊಲೆ ಮಾಡಿದ್ದಾನೆ ಎಂದು ಅಶ್ವಿನಿ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸುರೇಶ್​ಗಾಗಿ ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: Facebook Fraud | ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ವಿವಾಹಿತೆಗೆ ವಂಚನೆ.. ಚಿಂತಾಮಣಿಯ ಫೈನಾನ್ಸಿಯರ್ ವಿರುದ್ಧ ದೂರು

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್