AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಸಂತ್ರಸ್ತನ ಮನೆ ಮೇಲೆ ನಕಲಿ ಐಟಿ ಅಧಿಕಾರಿಗಳಿಂದ ರೇಡ್​

ಬಾಗಲಕೋಟೆ: ಪ್ರವಾಹ ಸಂತ್ರಸ್ತನ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಜಪ್ತಿ ಮಾಡುವ ನೆಪದಲ್ಲಿ 12,500 ರೂ. ಮತ್ತು ಮೂರು ಮೊಬೈಲ್ ವಶಕ್ಕೆ ಪಡೆದು ಲಕ್ಷ್ಮಣ ಎಂಬುವರಿಗೆ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. Go-07 Gc 8275 ನಂಬರಿನ ಕಾರಿನಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 4 ಗಂಟೆಗೆ ಐಟಿ ಅಧಿಕಾರಿಗಳೆಂದು ಹೇಳಿಕೊಂಡು ಓರ್ವ ಮಹಿಳೆ ಸೇರಿದಂತೆ 7 ಜನರು ಬಂದಿದ್ದಾರೆ. ಮನೆಯ ಹಾಲ್​ನಲ್ಲಿನ ಹಾಸುಕಲ್ಲು, […]

ಪ್ರವಾಹ ಸಂತ್ರಸ್ತನ ಮನೆ ಮೇಲೆ ನಕಲಿ ಐಟಿ ಅಧಿಕಾರಿಗಳಿಂದ ರೇಡ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 04, 2020 | 10:51 AM

Share

ಬಾಗಲಕೋಟೆ: ಪ್ರವಾಹ ಸಂತ್ರಸ್ತನ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಜಪ್ತಿ ಮಾಡುವ ನೆಪದಲ್ಲಿ 12,500 ರೂ. ಮತ್ತು ಮೂರು ಮೊಬೈಲ್ ವಶಕ್ಕೆ ಪಡೆದು ಲಕ್ಷ್ಮಣ ಎಂಬುವರಿಗೆ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Go-07 Gc 8275 ನಂಬರಿನ ಕಾರಿನಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 4 ಗಂಟೆಗೆ ಐಟಿ ಅಧಿಕಾರಿಗಳೆಂದು ಹೇಳಿಕೊಂಡು ಓರ್ವ ಮಹಿಳೆ ಸೇರಿದಂತೆ 7 ಜನರು ಬಂದಿದ್ದಾರೆ. ಮನೆಯ ಹಾಲ್​ನಲ್ಲಿನ ಹಾಸುಕಲ್ಲು, ಬ್ಯಾಗ್, ಪೆಟ್ಟಿಗೆ ಕಿತ್ತು ವಂಚಕರು ಜಾಲಾಡಿದ್ದಾರೆ.

ಪ್ರವಾಹದ ವೇಳೆ ಲಕ್ಷ್ಮಣ ಅಲಗೂರ ಮನೆಗೆ ಕೋಟಿ ಕೋಟಿ ಹಣ ತೇಲಿ ಬಂದಿದೆ ಎಂದು ಇತ್ತೀಚೆಗೆ ಸುದ್ದಿ ಹಬ್ಬಿತ್ತು. ಈ ಸುದ್ದಿ ತಿಳಿದು ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ವಂಚನೆ ಮಾಡಿದ್ದಾರೆ. ನಕಲಿ ಐಟಿ ದಾಳಿ ಹಿಂದೆ ಅಲಗೂರು ಗ್ರಾಮಸ್ಥರ ಕೈವಾಡದ ಶಂಕೆ ವ್ಯಕ್ತವಾಗಿದೆ.

ಬೆಳಗಾವಿಗೆ ಬಂದು ಭೇಟಿಯಾಗಿ ಎಂದು ತೆರಿಗೆ ಇಲಾಖೆಯ ವಿಳಾಸ ಕೊಟ್ಟು ಹೋಗಿದ್ರು. ಲಕ್ಷ್ಮಣ ಅಲಗೂರ ಬೆಳಗಾವಿಗೆ ಹೋದಾಗ ಮೋಸ ಹೋಗಿರುವುದು ಗೊತ್ತಾಗಿದೆ. ಇದರಿಂದ ಕಂಗಾಲಾದ ಲಕ್ಷ್ಮಣ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 7:36 am, Sat, 4 January 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ