ಪ್ರವಾಹ ಸಂತ್ರಸ್ತನ ಮನೆ ಮೇಲೆ ನಕಲಿ ಐಟಿ ಅಧಿಕಾರಿಗಳಿಂದ ರೇಡ್​

ಬಾಗಲಕೋಟೆ: ಪ್ರವಾಹ ಸಂತ್ರಸ್ತನ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಜಪ್ತಿ ಮಾಡುವ ನೆಪದಲ್ಲಿ 12,500 ರೂ. ಮತ್ತು ಮೂರು ಮೊಬೈಲ್ ವಶಕ್ಕೆ ಪಡೆದು ಲಕ್ಷ್ಮಣ ಎಂಬುವರಿಗೆ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. Go-07 Gc 8275 ನಂಬರಿನ ಕಾರಿನಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 4 ಗಂಟೆಗೆ ಐಟಿ ಅಧಿಕಾರಿಗಳೆಂದು ಹೇಳಿಕೊಂಡು ಓರ್ವ ಮಹಿಳೆ ಸೇರಿದಂತೆ 7 ಜನರು ಬಂದಿದ್ದಾರೆ. ಮನೆಯ ಹಾಲ್​ನಲ್ಲಿನ ಹಾಸುಕಲ್ಲು, […]

ಪ್ರವಾಹ ಸಂತ್ರಸ್ತನ ಮನೆ ಮೇಲೆ ನಕಲಿ ಐಟಿ ಅಧಿಕಾರಿಗಳಿಂದ ರೇಡ್​
ಸಾಧು ಶ್ರೀನಾಥ್​

Updated on: Jan 04, 2020 | 10:51 AM

ಬಾಗಲಕೋಟೆ: ಪ್ರವಾಹ ಸಂತ್ರಸ್ತನ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಜಪ್ತಿ ಮಾಡುವ ನೆಪದಲ್ಲಿ 12,500 ರೂ. ಮತ್ತು ಮೂರು ಮೊಬೈಲ್ ವಶಕ್ಕೆ ಪಡೆದು ಲಕ್ಷ್ಮಣ ಎಂಬುವರಿಗೆ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Go-07 Gc 8275 ನಂಬರಿನ ಕಾರಿನಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 4 ಗಂಟೆಗೆ ಐಟಿ ಅಧಿಕಾರಿಗಳೆಂದು ಹೇಳಿಕೊಂಡು ಓರ್ವ ಮಹಿಳೆ ಸೇರಿದಂತೆ 7 ಜನರು ಬಂದಿದ್ದಾರೆ. ಮನೆಯ ಹಾಲ್​ನಲ್ಲಿನ ಹಾಸುಕಲ್ಲು, ಬ್ಯಾಗ್, ಪೆಟ್ಟಿಗೆ ಕಿತ್ತು ವಂಚಕರು ಜಾಲಾಡಿದ್ದಾರೆ.

ಪ್ರವಾಹದ ವೇಳೆ ಲಕ್ಷ್ಮಣ ಅಲಗೂರ ಮನೆಗೆ ಕೋಟಿ ಕೋಟಿ ಹಣ ತೇಲಿ ಬಂದಿದೆ ಎಂದು ಇತ್ತೀಚೆಗೆ ಸುದ್ದಿ ಹಬ್ಬಿತ್ತು. ಈ ಸುದ್ದಿ ತಿಳಿದು ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ವಂಚನೆ ಮಾಡಿದ್ದಾರೆ. ನಕಲಿ ಐಟಿ ದಾಳಿ ಹಿಂದೆ ಅಲಗೂರು ಗ್ರಾಮಸ್ಥರ ಕೈವಾಡದ ಶಂಕೆ ವ್ಯಕ್ತವಾಗಿದೆ.

ಬೆಳಗಾವಿಗೆ ಬಂದು ಭೇಟಿಯಾಗಿ ಎಂದು ತೆರಿಗೆ ಇಲಾಖೆಯ ವಿಳಾಸ ಕೊಟ್ಟು ಹೋಗಿದ್ರು. ಲಕ್ಷ್ಮಣ ಅಲಗೂರ ಬೆಳಗಾವಿಗೆ ಹೋದಾಗ ಮೋಸ ಹೋಗಿರುವುದು ಗೊತ್ತಾಗಿದೆ. ಇದರಿಂದ ಕಂಗಾಲಾದ ಲಕ್ಷ್ಮಣ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 7:36 am, Sat, 4 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us