AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ: ಗೃಹಿಣಿ ನಿಗೂಢ ಸಾವು, ಯಾವೂರಲ್ಲಿ?

ಮೈಸೂರು: ಮೆಲ್ಲಹಳ್ಳಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು ಸಂಭವಿಸಿದೆ. ಸಾವಿಗೆ ಕಾರಣ ಏನು ಎಂದು ಖಚಿತವಾಗಿಲ್ಲ. ಆದರೆ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಜುಳಾ(20) ಮೃತ ಗೃಹಿಣಿ. ಹಳ್ಳಿಕೆರೆಹುಂಡಿಯ ಮಂಜುಳಾ ಹಾಗೂ ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆ ಆಗಿದ್ದರು. ಒಂದು ಮಗು ಹುಟ್ಟಿದ ನಂತರ ತವರು ಮನೆಯಿಂದ 2 ಲಕ್ಷ ಹಣ ತರುವಂತೆ ಕಿರುಕುಳ ನೀಡುತ್ತಿದ್ದರಂತೆ. ಈ ವೇಳೆ ಮಂಜುಳಾ ತಂದೆ ಪುಟ್ಟಸ್ವಾಮಿ ಗೌಡ ಹಣ ನೀಡಲು ಒಂದು ತಿಂಗಳ ಸಮಯ […]

ವರದಕ್ಷಿಣೆ ಕಿರುಕುಳ: ಗೃಹಿಣಿ ನಿಗೂಢ ಸಾವು, ಯಾವೂರಲ್ಲಿ?
ಆಯೇಷಾ ಬಾನು
|

Updated on: Oct 07, 2020 | 10:00 AM

Share

ಮೈಸೂರು: ಮೆಲ್ಲಹಳ್ಳಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು ಸಂಭವಿಸಿದೆ. ಸಾವಿಗೆ ಕಾರಣ ಏನು ಎಂದು ಖಚಿತವಾಗಿಲ್ಲ. ಆದರೆ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಜುಳಾ(20) ಮೃತ ಗೃಹಿಣಿ.

ಹಳ್ಳಿಕೆರೆಹುಂಡಿಯ ಮಂಜುಳಾ ಹಾಗೂ ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆ ಆಗಿದ್ದರು. ಒಂದು ಮಗು ಹುಟ್ಟಿದ ನಂತರ ತವರು ಮನೆಯಿಂದ 2 ಲಕ್ಷ ಹಣ ತರುವಂತೆ ಕಿರುಕುಳ ನೀಡುತ್ತಿದ್ದರಂತೆ. ಈ ವೇಳೆ ಮಂಜುಳಾ ತಂದೆ ಪುಟ್ಟಸ್ವಾಮಿ ಗೌಡ ಹಣ ನೀಡಲು ಒಂದು ತಿಂಗಳ ಸಮಯ ಕೇಳಿದ್ದರು. ಆದ್ರೆ ನಿನ್ನೆ ಅನುಮಾನಸ್ಪದವಾಗಿ ಮಂಜುಳಾ ಸಾವನ್ನಪ್ಪಿದ್ದಾಳೆ.

ಮಂಜುಳಾ ಪತಿ ಕುಟುಂಬಸ್ಥರು ಪೋಷಕರಿಗೆ ಸಾವಿನ ಬಗ್ಗೆ ಮಾಹಿತಿ ನೀಡದೇ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಈ ವೇಳೆ ಮಂಜುಳ ಪೋಷಕರು ಮಾಹಿತಿ ಪಡೆದು ಪೊಲೀಸರ ಸಮೇತ ತೆರಳಿ ಅಂತ್ಯಕ್ರಿಯೆ ನಿಲ್ಲಿಸಿದ್ದಾರೆ. ಮಂಜುಳಾ ಮೃತದೇಹಕ್ಕೆ ಬೆಂಕಿ ಹಚ್ಚುವ ವೇಳೆ ಪೊಲೀಸರು ತಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗಂಡ ಹೇಮಂತ್, ಮಾವ ಪುಟ್ಟಸ್ವಾಮಿ, ಅತ್ತೆ ಭಾಗ್ಯ, ಮೈದುನ ಯಶವಂತ್ ವಿರುದ್ಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ