AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯ ಆರೋಪ.. ಚೊಚ್ಚಲ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಗರ್ಭದಲ್ಲೇ ಮಗು ಸಾವು

ಹೆರಿಗೆಗೆ ಬಂದಿದ್ದ ಗರ್ಭಿಣಿಗೆ ಸರಿಯಾಗಿ ಚಿಕಿತ್ಸೆ ಕೊಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಇದರಿಂದಲೇ ತಾಯಿ ಜೊತೆ ಗರ್ಭದಲ್ಲೇ ಮಗು ಇಬ್ಬರೂ ತೀರಿಕೊಂಡಿದ್ದಾರೆ ಎಂದು ಮೃತ ಗರ್ಭಿಣಿಯ ಕುಟುಂಬಸ್ಥರು ವೈದ್ಯರ ವಿರುದ್ಧ ಆರೋಪ ಮಾಡಿದ್ದು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ವೈದ್ಯರ ನಿರ್ಲಕ್ಷ್ಯ ಆರೋಪ.. ಚೊಚ್ಚಲ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಗರ್ಭದಲ್ಲೇ ಮಗು ಸಾವು
ಹೆರಿಗೆ ವಿಭಾಗದ ಮುಂದೆ ಜಮಾಯಿಸಿರುವ ಕಾವ್ಯಾ ಕುಟುಂಬಸ್ಥರು
ಆಯೇಷಾ ಬಾನು
| Edited By: |

Updated on:Mar 15, 2021 | 3:10 PM

Share

ದಾವಣಗೆರೆ: ಹೆರಿಗೆಗಾಗಿ ಬಂದಿದ್ದ ತಾಯಿಯ ಜೊತೆಗೆ ಗರ್ಭದಲ್ಲಿಯೇ ಮಗು ಸಹ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಕಾವ್ಯಾ(21) ಮತ್ತು ಆಕೆಯ ಜೊತೆಗೆ ಗರ್ಭದಲ್ಲೇ ಮಗು ಸಹ ತೀರಿಕೊಂಡಿದೆ. ಹೆರಿಗೆಗೆ ಬಂದಿದ್ದ ಗರ್ಭಿಣಿಗೆ ಸರಿಯಾಗಿ ಚಿಕಿತ್ಸೆ ಕೊಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೃತ ಗರ್ಭಿಣಿಯ ಕುಟುಂಬಸ್ಥರು ವೈದ್ಯರ ವಿರುದ್ಧ ಆರೋಪ ಮಾಡಿದ್ದು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ ಗ್ರಾಮದ ನಿವಾಸಿ ಕಾವ್ಯಾ ತನ್ನ ಪೋಷಕರಿಗೆ ಒಬ್ಬಳೇ ಮಗಳು. ತಂದೆ ಸಾವನ್ನಪ್ಪಿ ಎಷ್ಟೋ ವರ್ಷಗಳಾದವು. ಮುದ್ದಾದ ಮಗಳಿಗೆ ಸಂಭ್ರಮದಿಂದ ಮದ್ವೆ ಮಾಡಿದ್ದ ಅವಳ ತಾಯಿ ಮೊಮ್ಮಗುವನ್ನ ಎತ್ತಿ ಆಡಿಸುವ ಸಂಭ್ರಮದಲ್ಲಿದ್ದರು. ಕಾವ್ಯಾಳಿಗೆ ಮದ್ವೆಯಾಗಿ ಒಂದು ವರ್ಷವಾಗಿದ್ದು ಚೊಚ್ಚಲ ಹೆರಿಗೆಗಾಗಿ ಬೆಳಿಗ್ಗೆ 11 ಗಂಟೆಗೆ ಆಸ್ಪತ್ರೆಗೆ ಬಂದರು. ರಾತ್ರಿ 12 ಗಂಟೆಯಾದ್ರೂ ಕಾವ್ಯಳಿಗೆ ಮಗು ಆಗಿಲ್ಲ. ಬರೋಬ್ಬರಿ 13 ಗಂಟೆಗಳ ಕಾಲ ಹೆರಿಗೆ ನೋವಲ್ಲಿ ನರಳಿದ್ದಾರೆ. ಆಸ್ಪತ್ರೆಯ ವೈದ್ಯರಿಗೆ ಸಂಬಂಧಿಕರು ಹಿಡಿಶಾಪ ಹಾಕಿದ್ದಾರೆ.

21 ವರ್ಷ ವಯಸ್ಸಿನ ಕಾವ್ಯಾ ಮತ್ತು ಪ್ರಗತಿಪರ ರೈತ ಹಾಗೂ ಸಾಹಿತಿಯಾಗಿರುವ ವೀರಭದ್ರಪ್ಪ ಮದುವೆಯಾಗಿ 1 ವರ್ಷವಾಗಿದೆ. ಕಾವ್ಯಳ ತಂದೆ ನಿಧನವಾಗಿ ಎಷ್ಟೊ ವರ್ಷವಾಗಿದೆ. ತಾಯಿ ಬಸಮ್ಮನಿಗೆ ಕಾವ್ಯಾ ಒಬ್ಬಳೇ ಮಗಳು. ಕಷ್ಟ ಪಟ್ಟು ಮಗಳ ಮದ್ವೆ ಮಾಡಿದ್ದರು. ಮಗಳ ಚೊಚ್ಚಲು ಹೆರಿಗೆ ಇದ್ದ ಹಿನ್ನೆಲೆ ತಾಯಿ ಸಂಭ್ರಮದಲ್ಲಿದ್ದರು. ಆದ್ರೆ ವಿಧಿಯಾಟವೇ ಬೇರೆಯಾಗಿದೆ.

ಮಾರ್ಚ್ 14ರಂದು ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಗ್ರಾಮದಿಂದ ತಾಲೂಕಾ ಕೇಂದ್ರವಾದ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿಂದ ಹೆರಿಗೆ ಸ್ಪಲ್ಪ ಕಷ್ಟವಿದೆ ಎಂದು ಅವರು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಿನ್ನೆ ಬೆಳಗ್ಗೆ ಹನ್ನೊಂದು ಗಂಟೆಗೆ ಆಸ್ಪತ್ರೆ ತಲುಪಿದ್ದಾರೆ. ವೈದ್ಯರು ಮೊದಲು ಸಿಸೇರಿಯನ್ ಮಾಡಿ ಮಗು ತೆಗೆಯುವುದಾಗಿ ಹೇಳಿದ್ದಾರೆ. ಇದಕ್ಕಾಗಿ ಪಾಲಕರ ಒಪ್ಪಿಗೆ ಕೂಡಾ ಪಡೆದುಕೊಂಡಿದ್ದಾರೆ. ನಂತರ ಇಲ್ಲ ನಾರ್ಮಲ್ ಹೆರಿಗೆ ಆಗುತ್ತದೆ ಎಂದು ತಿಳಿಸಿದ್ದಾರೆ. ಆದರೆ ರಾತ್ರಿ 12 ಗಂಟೆಗೆ ಸಂಬಂಧಿಕರನ್ನ ಕರೆದು ಕಾವ್ಯಾ ಸಾವನ್ನಪ್ಪಿರುವ ಬಗ್ಗೆ ಹೇಳಿದ್ದಾರೆ.

ಈ ನಡುವೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಬಂಧಿಕರಿಗೆ ಹೇಳಿದಂತೆ ಮಗು ಹೊಟ್ಟೆಯಲ್ಲಿ ತೊಂದರೆ ಅನುಭವಿಸುತ್ತಿದೆ. ಮೇಲಾಗಿ ಹೃದಯದ ಬಡಿತ ಸಹ ಕಡಿಮೆ ಆಗುತ್ತಿದೆ ಎಂದಿದ್ದಾರೆ. ಅಲ್ಲದೆ ಕಾವ್ಯಾ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಗರ್ಭಿಣಿಗೆ ಕೊಡಬಾರದ ಹಿಂಸೆ ಕೊಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು ತಾಯಿಯ ಗರ್ಭದಲ್ಲಿಯೇ ಮಗು ಮೃತಪಟ್ಟಿದೆ. ಜೊತೆಗೆ ಕಾವ್ಯಾ ಸಹ ಕೊನೆಯುಸಿರೆಳೆದಿದ್ದಾರೆ.

ಇಷ್ಟಾದ್ರು ವೈದ್ಯರು ಮಾತ್ರ ಇದರ ಬಗ್ಗೆ ಸ್ಪಷ್ಟ ಉತ್ತರ ನೀಡಲು ಮುಂದೆ ಬರಲಿಲ್ಲ. ಇದರಿಂದ ಆಕ್ರೋಶಗೊಂಡ ಕಾವ್ಯಾಳ ಸಂಬಂಧಿಕರು ಇಲ್ಲಿನ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ. ಸಿಬ್ಬಂದಿಯ ಬೇಜವಾಬ್ದಾರಿಯಿಂದ ಅಮಾಯಕ ತಾಯಿ ಮತ್ತು ಮಗು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಕ್ತ ಸಮಯಕ್ಕೆ ಬಾರದ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಜನ್ಮ ನೀಡಿ.. ಗರ್ಭಿಣಿ ಸಾವು

Published On - 3:08 pm, Mon, 15 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ