ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಶವ ಸಾಗಿಸಲು ಕುಟುಂಬಸ್ಥರ ಪರದಾಟ
ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ. ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.
ಆಯೇಷಾ ಬಾನು
Updated on:
Oct 11, 2020 | 1:35 PM
ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.
ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.
Published On - 1:14 pm, Sun, 11 October 20
Ayesha Banu
ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.