ಟೆಸ್ಟ್ ಮಾಡಿಸದೆ ಪಾಸಿಟಿವ್ ಎಂದು ಕ್ವಾರಂಟೈನ್ ಮಾಡಿದರು, ನಂತರ ನಡೆದದ್ದೆ ಬೇರೆ.

ಚಿಕ್ಕಬಳ್ಳಾಪುರ: ಕೊರೊನಾ ಟೆಸ್ಟ್ ಮಾಡಿಸದೆ ಕೊರೊನಾ ಪಾಸಿಟಿವ್ ಇದೆಯೆಂದು ಕುಟುಂಬದವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ಕೇಂದ್ರಕ್ಕೆ ಕರೆದುಕೊಂಡು ಹೋಗಿರುವ ಘಟನೆ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿನಗರದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಇದೆಯೆಂದು ಕರೆಮಾಡಿದ ಆರೋಗ್ಯ ಇಲಾಖಾ ಅಧಿಕಾರಿಗಳು, ಬಾಪೂಜಿನಗರದ ನಿವಾಸಿ ಹಾಗೂ ಆತನ ಕುಟುಂಬಸ್ಥರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ನಾನು ಕೊರೊನಾ ಟೆಸ್ಟ್ ಮಾಡಿಸಿಲ್ಲ ಅದು ಹೇಗೆ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ […]

ಟೆಸ್ಟ್ ಮಾಡಿಸದೆ ಪಾಸಿಟಿವ್ ಎಂದು ಕ್ವಾರಂಟೈನ್ ಮಾಡಿದರು, ನಂತರ ನಡೆದದ್ದೆ ಬೇರೆ.
ಸಾಧು ಶ್ರೀನಾಥ್​ Edited By:

Updated on: Jul 26, 2020 | 11:58 PM

ಚಿಕ್ಕಬಳ್ಳಾಪುರ: ಕೊರೊನಾ ಟೆಸ್ಟ್ ಮಾಡಿಸದೆ ಕೊರೊನಾ ಪಾಸಿಟಿವ್ ಇದೆಯೆಂದು ಕುಟುಂಬದವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ಕೇಂದ್ರಕ್ಕೆ ಕರೆದುಕೊಂಡು ಹೋಗಿರುವ ಘಟನೆ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿನಗರದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಇದೆಯೆಂದು ಕರೆಮಾಡಿದ ಆರೋಗ್ಯ ಇಲಾಖಾ ಅಧಿಕಾರಿಗಳು, ಬಾಪೂಜಿನಗರದ ನಿವಾಸಿ ಹಾಗೂ ಆತನ ಕುಟುಂಬಸ್ಥರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ನಾನು ಕೊರೊನಾ ಟೆಸ್ಟ್ ಮಾಡಿಸಿಲ್ಲ ಅದು ಹೇಗೆ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ ಇಲಾಖಾ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ತಕ್ಷಣ ಎಚ್ಚೆತ್ತುಕೊಂಡ ವೈದ್ಯಕೀಯ ಸಿಬ್ಬಂದಿ ಆ ವ್ಯಕ್ತಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ವರದಿಯಲ್ಲಿ ಕೊರೊನಾ ನೆಗೆಟಿವ್ ಇರುವುದು ತಿಳಿದು ಬಂದಿದೆ. ಹೀಗಾಗಿ ಕೊರೊನಾ ಬರದೇ ಇದ್ದರೂ ಪಾಸಿಟಿವ್ ಬಂದಿದೆ ಎಂದು ಸುಳ್ಳು ಹೇಳಿ ನಮಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಅವಮಾನ ಮಾಡಿದ್ದಾರೆ ಎಂದು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆ ಎದುರು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

Published On - 2:29 pm, Sun, 26 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us