AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಿಯುಗದ ಕರ್ಣನ 2ನೇ ಪುಣ್ಯಸ್ಮರಣೆ: ಅಂಬಿ ನೆನಪಲ್ಲಿ ಗುಡಿ ಕಟ್ಟಿದ ಅಭಿಮಾನಿಗಳು

ಮಂಡ್ಯ: ನವೆಂಬರ್ 24 ಕ್ಕೆ ಅಂಬರೀಶ್ ಅವರ 2 ನೇ ವರ್ಷದ ಪುಣ್ಯ ಸ್ಮರಣೆ. ಹೀಗಾಗಿ, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ನೆನಪಿನಲ್ಲಿ ಗುಡಿಯೊಂದನ್ನು ಕಟ್ಟಿದ್ದಾರೆ. ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿ ಗ್ರಾಮದಲ್ಲಿ ಅಭಿಮಾನಿಗಳಿಂದ ಗುಡಿ ನಿರ್ಮಾಣ ಮಾಡಲಾಗಿದೆ. ಗುಡಿಯಲ್ಲಿ ಅಂಬರೀಶ್ ಅವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಈ ಗುಡಿಯನ್ನು ಸುಮಾರು 8 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸುವ ಮುನ್ನ ಅಂಬರೀಶ್ ಚಿತಾಭಸ್ಮವನ್ನ ಅಭಿಮಾನಿಗಳು ಪುತ್ಥಳಿ ನಿರ್ಮಾಣ […]

ಕಲಿಯುಗದ ಕರ್ಣನ 2ನೇ ಪುಣ್ಯಸ್ಮರಣೆ: ಅಂಬಿ ನೆನಪಲ್ಲಿ ಗುಡಿ ಕಟ್ಟಿದ ಅಭಿಮಾನಿಗಳು
ಪೃಥ್ವಿಶಂಕರ
|

Updated on:Nov 15, 2020 | 4:15 PM

Share

ಮಂಡ್ಯ: ನವೆಂಬರ್ 24 ಕ್ಕೆ ಅಂಬರೀಶ್ ಅವರ 2 ನೇ ವರ್ಷದ ಪುಣ್ಯ ಸ್ಮರಣೆ. ಹೀಗಾಗಿ, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ನೆನಪಿನಲ್ಲಿ ಗುಡಿಯೊಂದನ್ನು ಕಟ್ಟಿದ್ದಾರೆ.

ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿ ಗ್ರಾಮದಲ್ಲಿ ಅಭಿಮಾನಿಗಳಿಂದ ಗುಡಿ ನಿರ್ಮಾಣ ಮಾಡಲಾಗಿದೆ. ಗುಡಿಯಲ್ಲಿ ಅಂಬರೀಶ್ ಅವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಈ ಗುಡಿಯನ್ನು ಸುಮಾರು 8 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸುವ ಮುನ್ನ ಅಂಬರೀಶ್ ಚಿತಾಭಸ್ಮವನ್ನ ಅಭಿಮಾನಿಗಳು ಪುತ್ಥಳಿ ನಿರ್ಮಾಣ ಸ್ಥಳದಲ್ಲಿ ಹಾಕಿದ್ದಾರೆ.

ಚಿತಾಭಸ್ಮವನ್ನ ತಂದು ಒಂದು ವರ್ಷದ ಕಾಲ ಪೂಜಿಸಿ ನಂತರ ಪುತ್ಥಳಿ ನಿರ್ಮಾಣದ ಸ್ಥಳದಲ್ಲಿ ಅಭಿಮಾನಿಗಳು ಹಾಕಿದ್ದಾರೆ. ಇದೇ ತಿಂಗಳ 24 ರಂದು ಅಂಬಿ ಪುತ್ಥಳಿಯನ್ನು ಅವರ ಪತ್ನಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅನಾವರಣ ಮಾಡಲಿದ್ದಾರೆ. ಅಂಬರೀಶ್ ಬದುಕಿದ್ದಾಗ ಅವರ ಹುಟ್ಟುಹಬ್ಬವನ್ನ ತಮ್ಮದೇ ಗ್ರಾಮದ ಹಬ್ಬ ಎಂಬಂತೆ ಅಭಿಮಾನಿಗಳು ಆಚರಣೆ ಮಾಡ್ತಿದ್ದರು. ಈಗ ಅವರ ನೆನಪಿನಲ್ಲಿ ಗುಡಿ ನಿರ್ಮಿಸಿ ಅಂಬಿಯನ್ನ ಪೂಜಿಸಲು ಅಭಿಮಾನಿಗಳು ಮುಂದಾಗಿದ್ದಾರೆ.

Published On - 3:58 pm, Sun, 15 November 20

ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು