AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಿಯುಗದ ಕರ್ಣನ 2ನೇ ಪುಣ್ಯಸ್ಮರಣೆ: ಅಂಬಿ ನೆನಪಲ್ಲಿ ಗುಡಿ ಕಟ್ಟಿದ ಅಭಿಮಾನಿಗಳು

ಮಂಡ್ಯ: ನವೆಂಬರ್ 24 ಕ್ಕೆ ಅಂಬರೀಶ್ ಅವರ 2 ನೇ ವರ್ಷದ ಪುಣ್ಯ ಸ್ಮರಣೆ. ಹೀಗಾಗಿ, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ನೆನಪಿನಲ್ಲಿ ಗುಡಿಯೊಂದನ್ನು ಕಟ್ಟಿದ್ದಾರೆ. ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿ ಗ್ರಾಮದಲ್ಲಿ ಅಭಿಮಾನಿಗಳಿಂದ ಗುಡಿ ನಿರ್ಮಾಣ ಮಾಡಲಾಗಿದೆ. ಗುಡಿಯಲ್ಲಿ ಅಂಬರೀಶ್ ಅವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಈ ಗುಡಿಯನ್ನು ಸುಮಾರು 8 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸುವ ಮುನ್ನ ಅಂಬರೀಶ್ ಚಿತಾಭಸ್ಮವನ್ನ ಅಭಿಮಾನಿಗಳು ಪುತ್ಥಳಿ ನಿರ್ಮಾಣ […]

ಕಲಿಯುಗದ ಕರ್ಣನ 2ನೇ ಪುಣ್ಯಸ್ಮರಣೆ: ಅಂಬಿ ನೆನಪಲ್ಲಿ ಗುಡಿ ಕಟ್ಟಿದ ಅಭಿಮಾನಿಗಳು
ಪೃಥ್ವಿಶಂಕರ
|

Updated on:Nov 15, 2020 | 4:15 PM

Share

ಮಂಡ್ಯ: ನವೆಂಬರ್ 24 ಕ್ಕೆ ಅಂಬರೀಶ್ ಅವರ 2 ನೇ ವರ್ಷದ ಪುಣ್ಯ ಸ್ಮರಣೆ. ಹೀಗಾಗಿ, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ನೆನಪಿನಲ್ಲಿ ಗುಡಿಯೊಂದನ್ನು ಕಟ್ಟಿದ್ದಾರೆ.

ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿ ಗ್ರಾಮದಲ್ಲಿ ಅಭಿಮಾನಿಗಳಿಂದ ಗುಡಿ ನಿರ್ಮಾಣ ಮಾಡಲಾಗಿದೆ. ಗುಡಿಯಲ್ಲಿ ಅಂಬರೀಶ್ ಅವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಈ ಗುಡಿಯನ್ನು ಸುಮಾರು 8 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸುವ ಮುನ್ನ ಅಂಬರೀಶ್ ಚಿತಾಭಸ್ಮವನ್ನ ಅಭಿಮಾನಿಗಳು ಪುತ್ಥಳಿ ನಿರ್ಮಾಣ ಸ್ಥಳದಲ್ಲಿ ಹಾಕಿದ್ದಾರೆ.

ಚಿತಾಭಸ್ಮವನ್ನ ತಂದು ಒಂದು ವರ್ಷದ ಕಾಲ ಪೂಜಿಸಿ ನಂತರ ಪುತ್ಥಳಿ ನಿರ್ಮಾಣದ ಸ್ಥಳದಲ್ಲಿ ಅಭಿಮಾನಿಗಳು ಹಾಕಿದ್ದಾರೆ. ಇದೇ ತಿಂಗಳ 24 ರಂದು ಅಂಬಿ ಪುತ್ಥಳಿಯನ್ನು ಅವರ ಪತ್ನಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅನಾವರಣ ಮಾಡಲಿದ್ದಾರೆ. ಅಂಬರೀಶ್ ಬದುಕಿದ್ದಾಗ ಅವರ ಹುಟ್ಟುಹಬ್ಬವನ್ನ ತಮ್ಮದೇ ಗ್ರಾಮದ ಹಬ್ಬ ಎಂಬಂತೆ ಅಭಿಮಾನಿಗಳು ಆಚರಣೆ ಮಾಡ್ತಿದ್ದರು. ಈಗ ಅವರ ನೆನಪಿನಲ್ಲಿ ಗುಡಿ ನಿರ್ಮಿಸಿ ಅಂಬಿಯನ್ನ ಪೂಜಿಸಲು ಅಭಿಮಾನಿಗಳು ಮುಂದಾಗಿದ್ದಾರೆ.

Published On - 3:58 pm, Sun, 15 November 20

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್