AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?

ಹಾವೇರಿ: ಗಾಂಜಾ ಬೆಳೆ ಬೆಳೆಯುವುದು ಕಾನೂನು ಪ್ರಕಾರ ಅಪರಾಧ. ಆದರೆ ಅದ್ಹೇಗೋ ಏನೋ ತನ್ನ ಜಮೀನಿನ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆದು ರೈತನೋರ್ವ ಪೊಲೀಸರ ಕೈಗೆ ತಗ್ಲಾಕ್ಕೊಂಡ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಇನಾಂಯಲ್ಲಾಪುರ ಗ್ರಾಮದ ರೈತ 58 ವರ್ಷದ ಬಸವರಾಜ ಆನವಟ್ಟಿ ತನ್ನ ಜಮೀನಿನಲ್ಲಿ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆಸಿದ್ದ. ಗಿಡಕ್ಕೆ ಕಟ್ಟಿಗೆ ನಿಲ್ಲಿಸಿ, ಗಿಡವನ್ನು ಉತ್ತಮವಾಗಿ ಬೆಳೆಯುವ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದ. ಬದುವಿನಲ್ಲಿ ರೈತ ಬಸವರಾಜ ಗಾಂಜಾ […]

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on: Sep 01, 2020 | 12:46 PM

Share

ಹಾವೇರಿ: ಗಾಂಜಾ ಬೆಳೆ ಬೆಳೆಯುವುದು ಕಾನೂನು ಪ್ರಕಾರ ಅಪರಾಧ. ಆದರೆ ಅದ್ಹೇಗೋ ಏನೋ ತನ್ನ ಜಮೀನಿನ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆದು ರೈತನೋರ್ವ ಪೊಲೀಸರ ಕೈಗೆ ತಗ್ಲಾಕ್ಕೊಂಡ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಇನಾಂಯಲ್ಲಾಪುರ ಗ್ರಾಮದ ರೈತ 58 ವರ್ಷದ ಬಸವರಾಜ ಆನವಟ್ಟಿ ತನ್ನ ಜಮೀನಿನಲ್ಲಿ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆಸಿದ್ದ. ಗಿಡಕ್ಕೆ ಕಟ್ಟಿಗೆ ನಿಲ್ಲಿಸಿ, ಗಿಡವನ್ನು ಉತ್ತಮವಾಗಿ ಬೆಳೆಯುವ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದ. ಬದುವಿನಲ್ಲಿ ರೈತ ಬಸವರಾಜ ಗಾಂಜಾ ಗಿಡ ಬೆಳೆದಿದ್ದು ಹಾನಗಲ್ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿತ್ತು.

ಖಚಿತ ಮಾಹಿತಿ ಮೇರೆಗೆ ಹಾನಗಲ್ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ಹಾಗೂ ತಹಶೀಲ್ದಾರ ಎರ್ರಿಸ್ವಾಮಿ ಪಿ.ಎಸ್ ನೇತೃತ್ವದಲ್ಲಿ ದಾಳಿ ಮಾಡಿದರು. ದಾಳಿ ಸಮಯದಲ್ಲಿ ರೈತ ಬಸವರಾಜನ ಜಮೀನಿನ ಬದುವಿನಲ್ಲಿ ಗಾಂಜಾ ಗಿಡ ಬೆಳೆಸಿದ್ದು ದೊರೆತಿದೆ. 422 ಗ್ರಾಂ ತೂಕದ ಗಾಂಜಾ ಗಿಡವನ್ನು ಪೊಲೀಸರು ಜಪ್ತಿ ಮಾಡಿ, ಆರೋಪಿ ಬಸವರಾಜನನ್ನು ಬಂಧಿಸಿದ್ದಾರೆ.

ರೈತ ಬಸವರಾಜ ಗಾಂಜಾ ಗಿಡವನ್ನು ಯಾವ ಉದ್ದೇಶಕ್ಕೆ ಬೆಳೆಸಿದ ಮತ್ತು ಎಲ್ಲಿಗೆ ಮಾರಾಟ ಮಾಡಲು ಉದ್ದೇಶಿಸಿದ್ದ ಎಂಬುದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. -ಪ್ರಭುಗೌಡ ಎನ್. ಪಾಟೀಲ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು