AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?

ಹಾವೇರಿ: ಗಾಂಜಾ ಬೆಳೆ ಬೆಳೆಯುವುದು ಕಾನೂನು ಪ್ರಕಾರ ಅಪರಾಧ. ಆದರೆ ಅದ್ಹೇಗೋ ಏನೋ ತನ್ನ ಜಮೀನಿನ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆದು ರೈತನೋರ್ವ ಪೊಲೀಸರ ಕೈಗೆ ತಗ್ಲಾಕ್ಕೊಂಡ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಇನಾಂಯಲ್ಲಾಪುರ ಗ್ರಾಮದ ರೈತ 58 ವರ್ಷದ ಬಸವರಾಜ ಆನವಟ್ಟಿ ತನ್ನ ಜಮೀನಿನಲ್ಲಿ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆಸಿದ್ದ. ಗಿಡಕ್ಕೆ ಕಟ್ಟಿಗೆ ನಿಲ್ಲಿಸಿ, ಗಿಡವನ್ನು ಉತ್ತಮವಾಗಿ ಬೆಳೆಯುವ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದ. ಬದುವಿನಲ್ಲಿ ರೈತ ಬಸವರಾಜ ಗಾಂಜಾ […]

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on: Sep 01, 2020 | 12:46 PM

Share

ಹಾವೇರಿ: ಗಾಂಜಾ ಬೆಳೆ ಬೆಳೆಯುವುದು ಕಾನೂನು ಪ್ರಕಾರ ಅಪರಾಧ. ಆದರೆ ಅದ್ಹೇಗೋ ಏನೋ ತನ್ನ ಜಮೀನಿನ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆದು ರೈತನೋರ್ವ ಪೊಲೀಸರ ಕೈಗೆ ತಗ್ಲಾಕ್ಕೊಂಡ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಇನಾಂಯಲ್ಲಾಪುರ ಗ್ರಾಮದ ರೈತ 58 ವರ್ಷದ ಬಸವರಾಜ ಆನವಟ್ಟಿ ತನ್ನ ಜಮೀನಿನಲ್ಲಿ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆಸಿದ್ದ. ಗಿಡಕ್ಕೆ ಕಟ್ಟಿಗೆ ನಿಲ್ಲಿಸಿ, ಗಿಡವನ್ನು ಉತ್ತಮವಾಗಿ ಬೆಳೆಯುವ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದ. ಬದುವಿನಲ್ಲಿ ರೈತ ಬಸವರಾಜ ಗಾಂಜಾ ಗಿಡ ಬೆಳೆದಿದ್ದು ಹಾನಗಲ್ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿತ್ತು.

ಖಚಿತ ಮಾಹಿತಿ ಮೇರೆಗೆ ಹಾನಗಲ್ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ಹಾಗೂ ತಹಶೀಲ್ದಾರ ಎರ್ರಿಸ್ವಾಮಿ ಪಿ.ಎಸ್ ನೇತೃತ್ವದಲ್ಲಿ ದಾಳಿ ಮಾಡಿದರು. ದಾಳಿ ಸಮಯದಲ್ಲಿ ರೈತ ಬಸವರಾಜನ ಜಮೀನಿನ ಬದುವಿನಲ್ಲಿ ಗಾಂಜಾ ಗಿಡ ಬೆಳೆಸಿದ್ದು ದೊರೆತಿದೆ. 422 ಗ್ರಾಂ ತೂಕದ ಗಾಂಜಾ ಗಿಡವನ್ನು ಪೊಲೀಸರು ಜಪ್ತಿ ಮಾಡಿ, ಆರೋಪಿ ಬಸವರಾಜನನ್ನು ಬಂಧಿಸಿದ್ದಾರೆ.

ರೈತ ಬಸವರಾಜ ಗಾಂಜಾ ಗಿಡವನ್ನು ಯಾವ ಉದ್ದೇಶಕ್ಕೆ ಬೆಳೆಸಿದ ಮತ್ತು ಎಲ್ಲಿಗೆ ಮಾರಾಟ ಮಾಡಲು ಉದ್ದೇಶಿಸಿದ್ದ ಎಂಬುದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. -ಪ್ರಭುಗೌಡ ಎನ್. ಪಾಟೀಲ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?