AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?

ಹಾವೇರಿ: ಗಾಂಜಾ ಬೆಳೆ ಬೆಳೆಯುವುದು ಕಾನೂನು ಪ್ರಕಾರ ಅಪರಾಧ. ಆದರೆ ಅದ್ಹೇಗೋ ಏನೋ ತನ್ನ ಜಮೀನಿನ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆದು ರೈತನೋರ್ವ ಪೊಲೀಸರ ಕೈಗೆ ತಗ್ಲಾಕ್ಕೊಂಡ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಇನಾಂಯಲ್ಲಾಪುರ ಗ್ರಾಮದ ರೈತ 58 ವರ್ಷದ ಬಸವರಾಜ ಆನವಟ್ಟಿ ತನ್ನ ಜಮೀನಿನಲ್ಲಿ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆಸಿದ್ದ. ಗಿಡಕ್ಕೆ ಕಟ್ಟಿಗೆ ನಿಲ್ಲಿಸಿ, ಗಿಡವನ್ನು ಉತ್ತಮವಾಗಿ ಬೆಳೆಯುವ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದ. ಬದುವಿನಲ್ಲಿ ರೈತ ಬಸವರಾಜ ಗಾಂಜಾ […]

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on: Sep 01, 2020 | 12:46 PM

Share

ಹಾವೇರಿ: ಗಾಂಜಾ ಬೆಳೆ ಬೆಳೆಯುವುದು ಕಾನೂನು ಪ್ರಕಾರ ಅಪರಾಧ. ಆದರೆ ಅದ್ಹೇಗೋ ಏನೋ ತನ್ನ ಜಮೀನಿನ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆದು ರೈತನೋರ್ವ ಪೊಲೀಸರ ಕೈಗೆ ತಗ್ಲಾಕ್ಕೊಂಡ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಇನಾಂಯಲ್ಲಾಪುರ ಗ್ರಾಮದ ರೈತ 58 ವರ್ಷದ ಬಸವರಾಜ ಆನವಟ್ಟಿ ತನ್ನ ಜಮೀನಿನಲ್ಲಿ ಬದುವಿನಲ್ಲಿ ಒಂದು ಗಾಂಜಾ ಗಿಡ ಬೆಳೆಸಿದ್ದ. ಗಿಡಕ್ಕೆ ಕಟ್ಟಿಗೆ ನಿಲ್ಲಿಸಿ, ಗಿಡವನ್ನು ಉತ್ತಮವಾಗಿ ಬೆಳೆಯುವ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದ. ಬದುವಿನಲ್ಲಿ ರೈತ ಬಸವರಾಜ ಗಾಂಜಾ ಗಿಡ ಬೆಳೆದಿದ್ದು ಹಾನಗಲ್ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿತ್ತು.

ಖಚಿತ ಮಾಹಿತಿ ಮೇರೆಗೆ ಹಾನಗಲ್ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ಹಾಗೂ ತಹಶೀಲ್ದಾರ ಎರ್ರಿಸ್ವಾಮಿ ಪಿ.ಎಸ್ ನೇತೃತ್ವದಲ್ಲಿ ದಾಳಿ ಮಾಡಿದರು. ದಾಳಿ ಸಮಯದಲ್ಲಿ ರೈತ ಬಸವರಾಜನ ಜಮೀನಿನ ಬದುವಿನಲ್ಲಿ ಗಾಂಜಾ ಗಿಡ ಬೆಳೆಸಿದ್ದು ದೊರೆತಿದೆ. 422 ಗ್ರಾಂ ತೂಕದ ಗಾಂಜಾ ಗಿಡವನ್ನು ಪೊಲೀಸರು ಜಪ್ತಿ ಮಾಡಿ, ಆರೋಪಿ ಬಸವರಾಜನನ್ನು ಬಂಧಿಸಿದ್ದಾರೆ.

ರೈತ ಬಸವರಾಜ ಗಾಂಜಾ ಗಿಡವನ್ನು ಯಾವ ಉದ್ದೇಶಕ್ಕೆ ಬೆಳೆಸಿದ ಮತ್ತು ಎಲ್ಲಿಗೆ ಮಾರಾಟ ಮಾಡಲು ಉದ್ದೇಶಿಸಿದ್ದ ಎಂಬುದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. -ಪ್ರಭುಗೌಡ ಎನ್. ಪಾಟೀಲ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ