AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೈತ ಸಾವು

ಗ್ರಾಮದ ನಿವಾಸಿ ಮಲ್ಲೇಶಪ್ಪ (62) ಸಾವನ್ನಪ್ಪಿದ ರೈತನಾಗಿದ್ದು, 25 ದಿನಗಳ ಹಿಂದೆ ಮಲ್ಲೇಶಪ್ಪ ತನ್ನ ಜಮೀನಿನಲ್ಲಿ ಕರಡಿ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದರು. ಇವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದಾವಣಗೆರೆ: ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೈತ ಸಾವು
ಪೃಥ್ವಿಶಂಕರ
| Edited By: |

Updated on:Dec 03, 2020 | 12:45 PM

Share

ದಾವಣಗೆರೆ: ಕರಡಿ ದಾಳಿಯಿಂದ ಗಾಯಗೊಂಡಿದ್ದ ರೈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹನಮಂತಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಲ್ಲೇಶಪ್ಪ (62) ಸಾವನ್ನಪ್ಪಿದ ರೈತ. 25 ದಿನಗಳ ಹಿಂದೆ ಮಲ್ಲೇಶಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಕರಡಿ ಅವರ ಮೇಲೆ ದಾಳಿ ನಡೆಸಿತ್ತು. ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಂದು ನಸುಕಿನಲ್ಲಿ ಮೃತಪಟ್ಟರು.

ಅರಣ್ಯ ಇಲಾಖೆ ವಿರುದ್ಧ ರೈತನ ಸಂಬಂಧಿಗಳು ತೀವ್ರ ಆಕ್ರೋಶ ಹೊರಹಾಕಿದ್ದು, ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ.

Published On - 10:47 am, Sun, 29 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More