AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ. 6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ […]

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 11, 2020 | 11:24 AM

Share

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ.

6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ ಆಗಿದೆ. ಹಿಂಗಾದ್ರೆ ನಮ್ಮ ಪರಿಸ್ಥಿತಿ ಏನು? ಪ್ರತಿ ವರ್ಷ ಹೀಗೇ ಆದರೆ ರೈತ ಹೇಗೆ ಬದುಕಬೇಕು ಎಂದು ಪರಸಪ್ಪ ಸುಣಗಾರ ತಮ್ಮ ಅಳಲು ತೋಡಿಕೊಂಡರು. ನಾನು ಬದುಕೋದಿಲ್ಲ, ಸಾಯುತ್ತೇನೆ. ನಾನು ಇಲ್ಲೇ ಉರುಲು ಹಾಕಿಕೊಂಡು ಸಾಯುತ್ತೇನೆ ಎಂದು ಕಣ್ಣೀರಿಟ್ಟರು.

ನಾಲ್ಕು ತಿಂಗಳಾಯ್ತು, ರೈತರ ಕೈಗೆ ಒಂದು ರೂಪಾಯಿ ಸಹ ಬಂದಿಲ್ಲ. ನಮ್ಮ ಕಣ್ಣಲ್ಲಿ ನೀರು ಉಕ್ಕಿ ಬರುತ್ತಿದೆ. ಸರ್ಕಾರ ಏನಾದ್ರೂ ಮಾಡಬೇಕು ಎಂದು ಹೊಲದಲಿ ತಿರುಗಾಡಿ ಕಣ್ಣೀರು ಹಾಕಿದ ರೈತ ಸರ್ಕಾರಕ್ಕೆ ಅಂಗಲಾಚಿ ಬೇಡಿಕೊಂಡಿದ್ದಾನೆ.

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ