
ಬೆಳಗಾವಿ: ಕೊರೊನಾ ಸಂಕಷ್ಟದ ಸಮಯದಲ್ಲೂ ತಾನೇ ಕೊರೆಸಿದ್ದ ಕೊಳವೆ ಬಾವಿಗೆ ಜಿಗಿದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನ್ಪುರ ಗ್ರಾಮದಲ್ಲಿ ನಡೆದಿದೆ. ಲಕ್ಕಪ್ಪ ದೊಡ್ಡಮನಿ (38) ಕೊಳವೆ ಬಾವಿಗೆ ಹಾರಿದ ರೈತ.
ಸಾಲ ಮಾಡಿ ಎರಡು ದಿನಗಳ ಹಿಂದಷ್ಟೇ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದ. ಆದ್ರೆ ಕೊಳವೆ ಬಾವಿಯಲ್ಲಿ ನೀರು ಬಾರದಿದ್ದಕ್ಕೆ ಮನನೊಂದು ಬಟ್ಟೆಯನ್ನ ಕಳಚಿ ಕೊಳವೆ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Published On - 3:35 pm, Mon, 11 May 20