AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elephant Human Conflict: ಆನೆ- ಮಾನವ ಸಂಘರ್ಷ ತಡೆಗೆ ವಿನೂತನ ತಂತ್ರ; ಗಳಿಕೆ-ನಿಯಂತ್ರಣ ಎರಡೂ ಒಟ್ಟೊಟ್ಟಿಗೆ

ಆನೆ- ಮಾನವ ಸಂಘರ್ಷ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗವನ್ನು ಕಂಡುಕೊಳ್ಳಲಾಗಿದೆ. ಇದರಿಂದ ಸಂಘರ್ಷವನ್ನು ತಡೆಗಟ್ಟುವ ಜತೆಗೆ ರೈತರ ಆದಾಯಕ್ಕೂ ಅನುಕೂಲ ಆಗಲಿದೆ ಎಂದು ಕೆವಿಐಸಿ ಗೌರವಾಧ್ಯಕ್ಷ ವಿನಯ್ ಸಕ್ಸೇನಾ ಹೇಳಿದ್ದಾರೆ.

Elephant Human Conflict: ಆನೆ- ಮಾನವ ಸಂಘರ್ಷ ತಡೆಗೆ ವಿನೂತನ ತಂತ್ರ; ಗಳಿಕೆ-ನಿಯಂತ್ರಣ ಎರಡೂ ಒಟ್ಟೊಟ್ಟಿಗೆ
ಆನೆ (ಸಂಗ್ರಹ ಚಿತ್ರ)
Srinivas Mata
| Edited By: |

Updated on: Mar 16, 2021 | 5:02 PM

Share

ಮಡಿಕೇರಿ: ಆನೆಗಳು ಜೇನುಹುಳುಗಳಿಗೆ ಹೆದರುತ್ತವೆ. ಅವುಗಳ ದೇಹದ ಸೂಕ್ಷ್ಮ ಭಾಗಗಳಾದ ಕಣ್ಣು ಮೊದಲಾದ ಕಡೆ ಅವು ಕಡಿಯುತ್ತವೆ ಎಂದು ಹೆದರುತ್ತವೆ. ಆದ್ದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸುವ ಮೂಲಕ ಆನೆ-ಮಾನವ ನಡುವಿನ ಸಂಘರ್ಷವನ್ನು ತಡೆಯಲು ಸಾಧ್ಯವಿದೆ ಎಂದು ಕೇಂದ್ರ ಸರ್ಕಾರದ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿ ಆಯೋಗದ (ಕೆವಿಐಸಿ) ಗೌರವಾಧ್ಯಕ್ಷ ವಿನಯ್‍ಕುಮಾರ್ ಸಕ್ಸೇನ ಮಾಹಿತಿ ನೀಡಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾಹಿತಿ ನೀಡಿ, ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ. ಆನೆಗಳು ಹೆಚ್ಚು ಸಮಸ್ಯೆಯನ್ನು ಉಂಟುಮಾಡುವ ಪ್ರದೇಶಗಳನ್ನು ಆಯ್ಕೆ ಮಾಡಿ, ಪ್ರಾರಂಭಿಕವಾಗಿ ಅಂತಹ ಪ್ರದೇಶಗಳಲ್ಲಿ ಜೇನುಗೂಡು ಬೇಲಿ ನಿರ್ಮಿಸುವ ವಿನೂತನ ತಂತ್ರವನ್ನು ರೂಪಿಸಲಾಗಿದೆ ಎಂದರು.

ಕೊಡಗು ಜಿಲ್ಲೆಯ ಚೇಳೂರು ಗ್ರಾಮದ ಸುತ್ತಮುತ್ತಲಿನ ನಾಲ್ಕು ಸ್ಥಳಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದ್ದು, ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು. ಈ ಯೋಜನೆಯಿಂದ ಆನೆ- ಮಾನವ ಸಂಘರ್ಷವನ್ನು ತಡೆಗಟ್ಟುವುದರ ಜೊತೆಗೆ ಜೇನುಕೃಷಿಗೆ ಸಹಕಾರಿಯಾಗುವುದರ ಮೂಲಕ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ. ಆದಿವಾಸಿಗಳ ಹಾಡಿ ಪ್ರದೇಶಗಳಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಮೂಲಕ ಫಲಶ್ರುತಿಯನ್ನು ಕಂಡುಕೊಳ್ಳುವುದಕ್ಕೆ ಚಿಂತಿಸಲಾಗಿದೆ. ಈ ಯೋಜನೆ ಫಲದಾಯಕ ಎಂದು ಕಾಣಲು ಆರು ತಿಂಗಳ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

Honey Bee

ಆನೆ- ಮಾನವ ಸಂಘರ್ಷ ತಡೆಯುವುದಕ್ಕೆ ಜೇನು ಸಾಕಣೆ

ಖಾದಿ ಮತ್ತು ಗ್ರಾಮಾಭಿವೃದ್ಧಿ ಆಯೋಗದಿಂದ ನಡೆಸಿದ ಜೇನು ಸಾಕಾಣಿಕೆ ತರಬೇತಿಯಲ್ಲಿ ಭಾಗವಹಿಸಿದ ರೈತರಿಗೆ ಇದೇ ಸಂದರ್ಭದಲ್ಲಿ ಜೇನುಪೆಟ್ಟಿಗೆ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಖಾದಿ ಮತ್ತು ಗ್ರಾಮಾಭಿವೃದ್ಧಿ ಆಯೋಗದ ಉಪಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಶುಕ್ಲ, ಹಾಗೂ ಅರಣ್ಯ ಮಹಾವಿದ್ಯಾಲಯದ ಮುಖ್ಯಸ್ಥ ಸಿ.ಜಿ.ಕುಶಾಲಪ್ಪ, ಎನ್.ಆರ್.ಎಂ. ವಿಭಾಗದ ಮುಖ್ಯಸ್ಥ ಡಾ. ಜಿ.ಎಂ. ದೇವಗಿರಿ, ಎಸ್.ಎ.ಎಫ್. ವಿಭಾಗದ ಮುಖ್ಯಸ್ಥ ರಾಮಕೃಷ್ಣ ಹೆಗ್ಡೆ ಹಾಗೂ ಡಾ. ಕೆಂಚರೆಡ್ಡಿ ಸೇರಿದಂತೆ ರೈತರು ಹಾಗೂ ಪ್ರಾಧ್ಯಾಪಕರು ಇದ್ದರು.

ಇದನ್ನೂ ಓದಿ: ಕೊಡಗಿನಲ್ಲಿ ಹೆಚ್ಚಾಗಿರುವ ಆನೆ ಹಾವಳಿ ತಡೆಗೆ ರೈಲ್ವೆ ಕಂಬಿಗಳ ಬಳಕೆ

Follow Us
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ