ರಾಜಧಾನಿ ಪಕ್ಕದಲ್ಲೇ ಇರುವ ಆನೇಕಲ್​ನಲ್ಲಿ ಅದ್ಧೂರಿ ರೈತರ ಹಬ್ಬ

ಬೆಂಗಳೂರು ಗ್ರಾಮಾಂತರ: ಡಿಸೆಂಬರ್ 23ರಂದು ದೇಶಾದ್ಯಂತ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಲಾಗುತ್ತೆ. ಭಾರತೀಯ ರೈತರ ಅಭಿವೃದ್ಧಿಗಾಗಿ ದೇಶದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಹಲವು ನೀತಿಗಳನ್ನು ಜಾರಿಗೆ ತಂದಿದ್ದರು. ಹೀಗಾಗಿ ಚೌಧರಿ ಚರಣ್ ಸಿಂಗ್ ಅವರ ಹುಟ್ಟು ಹಬ್ಬದ ಸ್ಮರಣಾರ್ಥ ಡಿ.23ರಂದು ರೈತ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತೆ. ರಾಜಧಾನಿ ಪಕ್ಕದಲ್ಲೇ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿನ ಮಾಯಸಂದ್ರದಲ್ಲೂ ಸಹ ಅದ್ಧೂರಿಯಾಗಿ ರೈತ ದಿನಾಚರಣೆ ಮಾಡಲಾಯಿತು. ರಂಗೋಲಿ, ಎತ್ತಿನಗಾಡಿ ಎಳೆಯುವ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು […]

ರಾಜಧಾನಿ ಪಕ್ಕದಲ್ಲೇ ಇರುವ ಆನೇಕಲ್​ನಲ್ಲಿ ಅದ್ಧೂರಿ ರೈತರ ಹಬ್ಬ
ಸಾಧು ಶ್ರೀನಾಥ್​

Updated on: Dec 23, 2019 | 5:08 PM

ಬೆಂಗಳೂರು ಗ್ರಾಮಾಂತರ: ಡಿಸೆಂಬರ್ 23ರಂದು ದೇಶಾದ್ಯಂತ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಲಾಗುತ್ತೆ. ಭಾರತೀಯ ರೈತರ ಅಭಿವೃದ್ಧಿಗಾಗಿ ದೇಶದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಹಲವು ನೀತಿಗಳನ್ನು ಜಾರಿಗೆ ತಂದಿದ್ದರು. ಹೀಗಾಗಿ ಚೌಧರಿ ಚರಣ್ ಸಿಂಗ್ ಅವರ ಹುಟ್ಟು ಹಬ್ಬದ ಸ್ಮರಣಾರ್ಥ ಡಿ.23ರಂದು ರೈತ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತೆ.

ರಾಜಧಾನಿ ಪಕ್ಕದಲ್ಲೇ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿನ ಮಾಯಸಂದ್ರದಲ್ಲೂ ಸಹ ಅದ್ಧೂರಿಯಾಗಿ ರೈತ ದಿನಾಚರಣೆ ಮಾಡಲಾಯಿತು. ರಂಗೋಲಿ, ಎತ್ತಿನಗಾಡಿ ಎಳೆಯುವ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜನಸಾಮಾನ್ಯರಿಗೂ ಸಹ ಕೃಷಿ ಬಗ್ಗೆ ರೈತರು ಮಾಹಿತಿ ನೀಡಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us