
ಹಾವೇರಿ: ಕಳೆದ ಕೆಲವು ವರ್ಷಗಳಿಂದ ಭೀಕರ ಬರಗಾಲ ಮತ್ತು ಅತಿವೃಷ್ಟಿ ಅನುಭವಿಸಿದ್ದ ಹಾವೇರಿ ಜಿಲ್ಲೆಯ ರೈತರು ಈ ಭಾರಿ ಉತ್ತಮ ಮುಂಗಾರಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಆಗಾಗ ಮಳೆ ಆಗುತ್ತಿರುವುದರಿಂದ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಈಗಾಗಲೆ ಸೋಯಾಬೀನ್ ಬೀಜ ಬಿತ್ತನೆ ಮಾಡಿರುವ ರೈತರಿಗೆ ಶಾಕ್ ಆಗಿದೆ.
ಹಾವೇರಿ ತಾಲೂಕಿನ ವರದಾಹಳ್ಳಿ ಮತ್ತು ಕರ್ಜಗಿ ಭಾಗದಲ್ಲಿನ ಹೆಚ್ಚಿನ ಪ್ರಮಾಣದ ರೈತರು ಸೋಯಾಬೀನ್ ಬೀಜವನ್ನು ಬಿತ್ತನೆ ಮಾಡಿದ್ದರು. ಕೆಲವರು ರೈತ ಸಂಪರ್ಕ ಕೇಂದ್ರದ ಮೂಲಕ ಬಿತ್ತನೆ ಬೀಜ ಖರೀದಿ ಮಾಡಿದ್ದರೆ, ಮತ್ತೆ ಕೆಲವು ರೈತರು ಖಾಸಗಿ ಅಂಗಡಿಗಳಲ್ಲಿ ಸೋಯಾಬೀನ್ ಬಿತ್ತನೆ ಬೀಜ ಖರೀದಿಸಿ ತಂದು ಬಿತ್ತನೆ ಮಾಡಿದ್ದರು.
ಕರ್ಜಗಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಬದಲಿಸಿ ಕೊಡುವುದಾಗಿ ಅಧಿಕಾರಿಗಳು ಕೆಲವು ದಿನಗಳಿಂದ ಹೇಳುತ್ತಾ ಬಂದಿದ್ದರೂ ಬಿತ್ತನೆ ಬೀಜ ಬದಲಾವಣೆ ಆಗಿಲ್ಲ. ಅನಿವಾರ್ಯ ಎನ್ನುವ ಹಾಗೆ ರೈತರು ಅವುಗಳನ್ನೆ ಒಯ್ದು ಬಿತ್ತನೆ ಮಾಡಿದರೂ ಬೀಜ ಮೊಳಕೆ ಒಡೆಯುತ್ತಿಲ್ಲ. ಇದರಿಂದ ರೈತರು ರೈತ ಸಂಪರ್ಕ ಕೇಂದ್ರ ಮತ್ತು ಬೀಜ ಕಂಪನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published On - 8:52 am, Sun, 7 June 20