AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಾ ಡ್ಯಾಂ ಭರ್ತಿ; ಕಟಾವಿಗೆ ಬಂದ ಕಬ್ಬು ಸಾಗಿಸಲಾಗದೆ ಪರದಾಟ: ರೈತರ ಗೋಳು ಕೇಳೋರು ಯಾರು?

ಸಮಸ್ಯೆಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಇದುವರೆಗೆ ಯಾರೂ ಇತ್ತ ಗಮನ ಹರಿಸಿಲ್ಲ ಎಂಬುದು ರೈತರ ಅಳಲು. ಇನ್ನೊಂದೆಡೆ ಜಲಾಶಯ ಭರ್ತಿಯಾಗಿರುವುದರಿಂದ ನೀರಿನಲ್ಲಿ ಮೊಸಳೆಗಳು ಇರುವ ಸಾಧ್ಯತೆ ಇದ್ದು ರೈತರು ಜಾನುವಾರುಗಳನ್ನು ಸಾಗಿಸಲು ಸಹ ಭಯಗೊಂಡಿದ್ದಾರೆ.

ಕಾರಂಜಾ ಡ್ಯಾಂ ಭರ್ತಿ; ಕಟಾವಿಗೆ ಬಂದ ಕಬ್ಬು ಸಾಗಿಸಲಾಗದೆ ಪರದಾಟ: ರೈತರ ಗೋಳು ಕೇಳೋರು ಯಾರು?
ಜಲಾವೃತಗೊಂಡ ಜಮೀನು, ರಸ್ತೆ ದಾಟಲು ಪರದಾಡುತ್ತಿರುವ ಜನ, ಜಾನುವಾರು
Skanda
| Edited By: ಸಾಧು ಶ್ರೀನಾಥ್​|

Updated on: Dec 14, 2020 | 4:13 PM

Share

ಬೀದರ್​: ನಾಲ್ಕು ವರ್ಷಗಳಿಂದ ಸರಿಯಾದ ಮಳೆಯಿಲ್ಲದೆ ಕಂಗಾಲಾಗಿದ್ದ ಬೀದರ್​ ಜನತೆ ಈ ಸಲ ಭಾರೀ ಮಳೆಗೆ ಸಾಕ್ಷಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ಸುರಿದ ಭರ್ಜರಿ ಮಳೆಯಿಂದ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ ಭರ್ತಿಯಾಗಿದೆ. ಆದರೆ, ಜಲಾಶಯ ತುಂಬಿದ್ದಕ್ಕೆ ಅಂದು ಖುಷಿಪಟ್ಟಿದ್ದ ಜನ ಇಂದು ದಿಕ್ಕು ತೋಚದಂತಾಗಿ ಹೋಗಿದ್ದಾರೆ.

ಪ್ರಸ್ತುತ ಜಲಾಶಯದ ನೀರಿನ ಸಂಗ್ರಹ 7.691 ಟಿಎಂಸಿ ಮಟ್ಟಕ್ಕೇರಿದೆ. ನೀರನ್ನು ಹೊರ ಬಿಡುತ್ತಿದ್ದರೂ ಒಳಹರಿವು ಜಾಸ್ತಿಯಾಗಿರುವುದರಿಂದ ಜಲಾಶಯದ ಗರಿಷ್ಠ ಮಟ್ಟ ಮೀರಿ ನೀರು ಸಂಗ್ರಹವಾಗುತ್ತಿದೆ. ಇದರಿಂದಾಗಿ ನೂರಾರು ರೈತರ ಜಮೀನಿಗೆ ನೀರು ನುಗ್ಗಿ ಸಾಕಷ್ಟು ಬೆಳೆಹಾನಿಯಾಗಿದೆ. ಜಿಲ್ಲೆಯ ಅತಿವಾಳ, ಭೋತಗಿ ಸೇರಿದಂತೆ ಸುಮಾರು 12 ಗ್ರಾಮಗಳ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಅವಧಿಯಲ್ಲಿ ಜಮೀನಿಗೆ ನೀರು ನುಗುತ್ತಿರುವುದು ಕಬ್ಬು ಬೆಳೆಗಾರರ ನಿದ್ದೆಗೆಡಿಸಿದೆ. ಜಮೀನುಗಳಿಗೆ ಹೋಗುವ ದಾರಿಯೇ ಜಲಾಶಯದ ಹಿನ್ನೀರಿನಿಂದಾಗಿ ಬಂದ್ ಆಗಿದ್ದು, ಅತಿವಾಳ ಗ್ರಾಮದ ರೈತರು ಕಟಾವಿಗೆ ಬಂದ ಕಬ್ಬನ್ನು ಕಾರ್ಖಾನೆಗೆ ಸಾಗಿಸಲಾಗದೆ ಪರದಾಡುತ್ತಿದ್ದಾರೆ.

ಈ ಗಂಭೀರ ಸಮಸ್ಯೆಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಇದುವರೆಗೆ ಯಾರೂ ಇತ್ತ ಗಮನ ಹರಿಸಿಲ್ಲ ಎಂಬುದು ರೈತರ ಅಳಲು. ಇನ್ನೊಂದೆಡೆ ಜಲಾಶಯ ಭರ್ತಿಯಾಗಿರುವುದರಿಂದ ನೀರಿನಲ್ಲಿ ಮೊಸಳೆಗಳು ಇರುವ ಸಾಧ್ಯತೆ ಇದ್ದು ರೈತರು ಜಾನುವಾರುಗಳನ್ನು ಸಾಗಿಸಲು ಸಹ ಭಯಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈ ವರ್ಷ ಸುರಿದ ಭಾರೀ ಮಳೆಯಿಂದಾಗಿ ಅತಿಹೆಚ್ಚು ಬೆಳೆಹಾನಿಯಾಗಿ ರೈತರ ಪರಿಸ್ಥಿತಿ ಯಾತನಾಮಯವಾಗಿದೆ. ಒಂದು ಕಡೆ ಜಲಾಶಯ ತುಂಬಿದ್ದಕ್ಕೆ ಖುಷಿ ಪಡಬೇಕೋ? ಅದೇ ಜಲಾಶಯದ ಹಿನ್ನೀರು ಜಮೀನಿನಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಸಿರುವುದರಿಂದ ದುಃಖಿಸಬೇಕೋ ಎಂದು ತಿಳಿಯದಂತಾಗಿದೆ.

ಒಟ್ಟಿನಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಕಂಗಾಲಾಗಿರುವ ರೈತರಿಗೆ ಇದೀಗ ಬೆಳೆದ ಕಬ್ಬು ಒಣಗಿ ಹೋಗುವ ಮುನ್ನ ಕಾರ್ಖಾನೆಗೆ ಸೇರಿಸಬೇಕಾದ ಅನಿವಾರ್ಯತೆ ಇದೆ. ರೈತರ ಅಳಲಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶೀಘ್ರದಲ್ಲೇ ಸ್ಪಂದಿಸಿ ಪರಿಹಾರ ಒದಗಿಸಿಕೊಡಬೇಕಿದೆ. -ಸುರೇಶ್ ನಾಯಕ್

ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ

Follow Us
Skanda
Skanda
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ