AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನದಾತರ ಕಿಚ್ಚು: ಬೆಳಗಾವಿಯಲ್ಲಿ ಹೇಗಿದೆ ಜನಜೀವನ?

ಕೇಂದ್ರ ಸರ್ಕಾರ ಕೆಲ ರೈತ ವಿರೋಧಿ ಕಾಯಿದೆಗಳನ್ನು ಜಾರಿಗೆ ತಂದಿದೆ. ಅದನ್ನು ಖಂಡಿಸುತ್ತೇವೆ ಎಂದು ರಾಜ್ಯದ ರೈತಾಪಿ ಜನ ಇಂದು ಕರ್ನಾಟಕ ಬಂದ್​ ಆಚರಿಸುತ್ತಿದ್ದಾರೆ. ಅನ್ನದಾತರ ಕಿಚ್ಚು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ವ್ಯಕ್ತವಾಗಿದೆ. ಆದ್ರೆ ಒಂದೆರಡು ಜಿಲ್ಲೆಗಳಲ್ಲಿ ಬಂಸ್ ಬಿಸಿ ಅಷ್ಟಾಗಿ ಆವರಿಸಿಲ್ಲ. ರಾಜ್ಯದ ತುತ್ತತುದಿಯ ಜಿಲ್ಲೆಯಾದ ಬೆಳಗಾವಿಯಲ್ಲಿ ಬಂದ್ ಹೇಗಿದೆ ಎಂದು ನೋಡುವುದಾದರೆ ಅಲ್ಲಿಯ ಜನಜೀವನ ಸಾಮಾನ್ಯವಾಗಿದೆ. ರೈತ ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬೆಳಗಾವಿಯಲ್ಲಿ ಹೂವು, ತರಕಾರಿ ಮಾರುಕಟ್ಟೆಗೆ ಬಂದ್ ಬಿಸಿ […]

ಅನ್ನದಾತರ ಕಿಚ್ಚು: ಬೆಳಗಾವಿಯಲ್ಲಿ ಹೇಗಿದೆ ಜನಜೀವನ?
ಸಾಧು ಶ್ರೀನಾಥ್​
|

Updated on:Sep 28, 2020 | 9:42 AM

Share

ಕೇಂದ್ರ ಸರ್ಕಾರ ಕೆಲ ರೈತ ವಿರೋಧಿ ಕಾಯಿದೆಗಳನ್ನು ಜಾರಿಗೆ ತಂದಿದೆ. ಅದನ್ನು ಖಂಡಿಸುತ್ತೇವೆ ಎಂದು ರಾಜ್ಯದ ರೈತಾಪಿ ಜನ ಇಂದು ಕರ್ನಾಟಕ ಬಂದ್​ ಆಚರಿಸುತ್ತಿದ್ದಾರೆ. ಅನ್ನದಾತರ ಕಿಚ್ಚು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ವ್ಯಕ್ತವಾಗಿದೆ. ಆದ್ರೆ ಒಂದೆರಡು ಜಿಲ್ಲೆಗಳಲ್ಲಿ ಬಂಸ್ ಬಿಸಿ ಅಷ್ಟಾಗಿ ಆವರಿಸಿಲ್ಲ. ರಾಜ್ಯದ ತುತ್ತತುದಿಯ ಜಿಲ್ಲೆಯಾದ ಬೆಳಗಾವಿಯಲ್ಲಿ ಬಂದ್ ಹೇಗಿದೆ ಎಂದು ನೋಡುವುದಾದರೆ ಅಲ್ಲಿಯ ಜನಜೀವನ ಸಾಮಾನ್ಯವಾಗಿದೆ.

ರೈತ ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬೆಳಗಾವಿಯಲ್ಲಿ ಹೂವು, ತರಕಾರಿ ಮಾರುಕಟ್ಟೆಗೆ ಬಂದ್ ಬಿಸಿ ತಟ್ಟಿಲ್ಲ. ಎಂದಿನಂತೆ ಹೂವು, ತರಕಾರಿ ವ್ಯಾಪಾರಿಗಳಿಂದ ವ್ಯಾಪಾರ ವಹಿವಾಟು ಸರಾಗವಾಗಿ ನಡೆದಿದೆ.

ಗ್ರಾಹಕರು ಸಹ ಎಂದಿನಂತೆ ಹೂವು, ತರಕಾರಿ ಖರೀದಿಸುತ್ತಿದ್ದಾರೆ. ಬೆಳಗಾವಿಯಲ್ಲಿ ಬಸ್ ಸಂಚಾರ ಹೊರತು ಪಡಿಸಿದರೆ ಎಂದಿನಂತೆ ಜನಜೀವನ ಸಾಗಿದೆ. ಪರಿಸ್ಥಿತಿ ನೋಡಿಕೊಂಡು ಬಸ್‌ ಸಂಚಾರದ ಬಗ್ಗೆ ತೀರ್ಮಾನಿಸುವುದಾಗಿ ಹೇಳಿದ್ದ ಕೆಎಸ್‌ಆರ್‌‌ಟಿಸಿ ಅಧಿಕಾರಿಗಳು ಇದೀಗ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಬಸ್ ಸಂಚಾರ ಶುರು; ಕಿಕ್ಕಿರಿದು ತುಂಬಿರುವ ಪ್ರಯಾಣಿಕರು ರೈತ ವಿರೋಧಿ ಕಾಯಿದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ಬೆಳಗ್ಗೆ ಏಕಾಏಕಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಇದೀಗ ಪುನಾರಂಭಗೊಂಡಿದೆ. ಪೊಲೀಸ್ ಎಸ್ಕಾರ್ಟ್ ಮೂಲಕ ಬಸ್ ಗಳಿಗೆ ಭದ್ರತೆ ಒದಗಿಸಲಾಗಿದೆ. ಬಸ್ ನಿಲ್ದಾಣದಿಂದ ಪ್ರತಿಭಟನಾಕಾರರು ತೆರಳುತ್ತಿದ್ದಂತೆ ಬಸ್ ಸಂಚಾರ ಆರಂಭಿಸಲಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆ ಮ‌ೂಲಕ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಸ್ ಗಳಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದಾರೆ. ಇದರೊಂದಿಗೆ ಬೆಳಗ್ಗೆಯಿಂದ ಪರದಾಡುತ್ತಿದ್ದ ಪ್ರಯಾಣಿಕರು ನಿರಾಳಗೊಂಡಿದ್ದಾರೆ.

Published On - 9:08 am, Mon, 28 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್