AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಬೆಳೆ ಮಳೆ ಪಾಲಾಗಿದೆ; ಉಳಿದರ್ಧ ಭಾಗ ಕಳ್ಳಕಾಕರ ಪಾಲಾಗಿದೆ: ರೈತನ ಪಾಡೇನು?

ಗದಗ: ಸತತ ಮಳೆಯಿಂದ ರೈತರು ಬೆಳೆದ ಅರ್ಧಕ್ಕಿಂತ ಹೆಚ್ಚು ಬೆಳೆ ಮಳೆರಾಯನ ಪಾಲಾಗಿದೆ. ಹಾಗೋ ಹೀಗೋ ಇನ್ನುಳಿದ ಬೆಳೆಗೆ ಕಳ್ಳರ ಕಣ್ಣು ಬಿದ್ದಿದೆ. ಹೌದು ಗದಗ ಜಿಲ್ಲೆಯಲ್ಲಿ ಈಗ ಬೆಳೆ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಲಿಂಬವ್ವ ಹೊನಗೇರಿ ಎಂಬುವವರ ಜಮೀನಿನಲ್ಲಿ ಸುಮಾರು ಆರು ಕ್ವಿಂಟಲ್​ಗಿಂತಲೂ ಹೆಚ್ಚಿಗೆ ಹಸಿ ಮೆಣಸಿನಕಾಯಿ ಕಳ್ಳತನ ಮಾಡಲಾಗಿದೆ. ರಾತ್ರೋರಾತ್ರಿ ಹೊಲಗಳಿಗೆ ನುಗ್ಗಿದ ಕಳ್ಳರು ಬೆಳೆದಿರುವ ಮೆಣಸಿನಕಾಯಿ ಲೂಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಬೇಕಾಬಿಟ್ಟಿಯಾಗಿ ಮೆಣಸಿನಕಾಯಿ ಗಿಡ […]

ಅರ್ಧ ಬೆಳೆ ಮಳೆ ಪಾಲಾಗಿದೆ; ಉಳಿದರ್ಧ ಭಾಗ ಕಳ್ಳಕಾಕರ ಪಾಲಾಗಿದೆ: ರೈತನ ಪಾಡೇನು?
ಆಯೇಷಾ ಬಾನು
|

Updated on: Nov 03, 2020 | 3:47 PM

Share

ಗದಗ: ಸತತ ಮಳೆಯಿಂದ ರೈತರು ಬೆಳೆದ ಅರ್ಧಕ್ಕಿಂತ ಹೆಚ್ಚು ಬೆಳೆ ಮಳೆರಾಯನ ಪಾಲಾಗಿದೆ. ಹಾಗೋ ಹೀಗೋ ಇನ್ನುಳಿದ ಬೆಳೆಗೆ ಕಳ್ಳರ ಕಣ್ಣು ಬಿದ್ದಿದೆ. ಹೌದು ಗದಗ ಜಿಲ್ಲೆಯಲ್ಲಿ ಈಗ ಬೆಳೆ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಲಿಂಬವ್ವ ಹೊನಗೇರಿ ಎಂಬುವವರ ಜಮೀನಿನಲ್ಲಿ ಸುಮಾರು ಆರು ಕ್ವಿಂಟಲ್​ಗಿಂತಲೂ ಹೆಚ್ಚಿಗೆ ಹಸಿ ಮೆಣಸಿನಕಾಯಿ ಕಳ್ಳತನ ಮಾಡಲಾಗಿದೆ. ರಾತ್ರೋರಾತ್ರಿ ಹೊಲಗಳಿಗೆ ನುಗ್ಗಿದ ಕಳ್ಳರು ಬೆಳೆದಿರುವ ಮೆಣಸಿನಕಾಯಿ ಲೂಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಬೇಕಾಬಿಟ್ಟಿಯಾಗಿ ಮೆಣಸಿನಕಾಯಿ ಗಿಡ ಕಿತ್ತು ಬಿಸಾಕಿ ಪರಾರಿಯಾಗಿದ್ದಾರೆ. ಸುಮಾರು ಮೂರು ಕ್ವಿಂಟಲ್​ಗೂ ಅಧಿಕ ಮೆಣಸಿನಕಾಯಿಯನ್ನು ಹೊತ್ತೊಯ್ದಿದ್ದಾರೆ ಎನ್ನಲಾಗ್ತಿದೆ. ಉಳಿದದ್ದನ್ನು ಹೊಲದಲ್ಲಿಯೇ ಬಿಸಾಡಿ ಎಲ್ಲೆಂದರಲ್ಲಿ ಬೆಳೆಯನ್ನ ತುಳಿದು, ಮೆಣಸಿನ ಕಾಯಿ ಗಿಡಗಳನ್ನು ಸಹ ಕಿತ್ತು ಹಾಕಿ ಪರಾರಿಯಾಗಿದ್ದಾರೆ.

ಕಣ್ಣೀರು ತರಿಸುತ್ತಿದೆ ಕಳ್ಳರ ಆಟ: ತಿಮ್ಮಾಪುರ ಗ್ರಾಮದಲ್ಲಿ ಕೇವಲ ಲಿಂಬವ್ವ ಹೊನಗೇರಿ ಇವರಷ್ಟೇ ಅಲ್ಲದೆ ಇನ್ನೊಬ್ಬರಾದ ಚೆನ್ನಪ್ಪ ಹೊನಗೇರಿ ಎಂಬುವರ ಜಮೀನಿನಲ್ಲಿಯೂ ಸಹ ಇದೇ ರೀತಿ ಮೆಣಸಿನಕಾಯಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಲಕ್ಷಾಂತರ ಆದಾಯದ ಮೆಣಸಿನಕಾಯಿಯನ್ನು ಕಳ್ಳರು ಹೊತ್ತೊಯ್ದಿದ್ದಾರೆ ಅಂತ ಜಮೀನು ಮಾಲೀಕರು ಕಣ್ಣೀರು ಹಾಕಿದ್ದಾರೆ. ಇನ್ನು ಹೊಲದಲ್ಲಿ ಬಿದ್ದಿದ್ದ ಮೆಣಸಿನ ಕಾಯಿ ಗಿಡಗಳನ್ನು ನೋಡಿ ರೈತ ಮಹಿಳೆ ಅಂಬವ್ವ ಒಂದು ಕ್ಷಣ ದಿಗಿಲು ಬಡಿದಂತೆ ಕೂತಿದ್ದಾರೆ. ಕಳ್ಳರಗೆ ಹಿಡಿ ಶಾಪ ಹಾಕಿದ್ದಾರೆ. ಏನ್ ಮಾಡಬೇಕು ಅಂತ ದಿಕ್ಕು ದೋಚುತ್ತಿಲ್ಲಾ ಅಂತಿದ್ದಾರೆ. ವರ್ಷಗಟ್ಟಲೆ ಕಷ್ಟ ಪಟ್ಟು ಶ್ರಮ ಪಟ್ಟಿದ್ದ ಆದಾಯ ಕಳ್ಳರ ಪಾಲಾಯ್ತಲ್ಲಾ ಅಂತ ರೈತರು ಕೊರಗುತ್ತಿದ್ದಾರೆ. ಹಾಗಾಗಿ ಜಿಲ್ಲಾಡಳಿತ ಇಂತಹ ಬೆಳೆ ಕಳ್ಳರಿಂದ ರೈತರನ್ನ ರಕ್ಷಣೆ ಮಾಡಬೇಕು ಅಂತ ರೈತರು ಒತ್ತಾಯ ಮಾಡ್ತಿದ್ದಾರೆ.

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ