AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಬೆಳೆ ಮಳೆ ಪಾಲಾಗಿದೆ; ಉಳಿದರ್ಧ ಭಾಗ ಕಳ್ಳಕಾಕರ ಪಾಲಾಗಿದೆ: ರೈತನ ಪಾಡೇನು?

ಗದಗ: ಸತತ ಮಳೆಯಿಂದ ರೈತರು ಬೆಳೆದ ಅರ್ಧಕ್ಕಿಂತ ಹೆಚ್ಚು ಬೆಳೆ ಮಳೆರಾಯನ ಪಾಲಾಗಿದೆ. ಹಾಗೋ ಹೀಗೋ ಇನ್ನುಳಿದ ಬೆಳೆಗೆ ಕಳ್ಳರ ಕಣ್ಣು ಬಿದ್ದಿದೆ. ಹೌದು ಗದಗ ಜಿಲ್ಲೆಯಲ್ಲಿ ಈಗ ಬೆಳೆ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಲಿಂಬವ್ವ ಹೊನಗೇರಿ ಎಂಬುವವರ ಜಮೀನಿನಲ್ಲಿ ಸುಮಾರು ಆರು ಕ್ವಿಂಟಲ್​ಗಿಂತಲೂ ಹೆಚ್ಚಿಗೆ ಹಸಿ ಮೆಣಸಿನಕಾಯಿ ಕಳ್ಳತನ ಮಾಡಲಾಗಿದೆ. ರಾತ್ರೋರಾತ್ರಿ ಹೊಲಗಳಿಗೆ ನುಗ್ಗಿದ ಕಳ್ಳರು ಬೆಳೆದಿರುವ ಮೆಣಸಿನಕಾಯಿ ಲೂಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಬೇಕಾಬಿಟ್ಟಿಯಾಗಿ ಮೆಣಸಿನಕಾಯಿ ಗಿಡ […]

ಅರ್ಧ ಬೆಳೆ ಮಳೆ ಪಾಲಾಗಿದೆ; ಉಳಿದರ್ಧ ಭಾಗ ಕಳ್ಳಕಾಕರ ಪಾಲಾಗಿದೆ: ರೈತನ ಪಾಡೇನು?
ಆಯೇಷಾ ಬಾನು
ಆಯೇಷಾ ಬಾನು|

Updated on: Nov 03, 2020 | 3:47 PM

Share

ಗದಗ: ಸತತ ಮಳೆಯಿಂದ ರೈತರು ಬೆಳೆದ ಅರ್ಧಕ್ಕಿಂತ ಹೆಚ್ಚು ಬೆಳೆ ಮಳೆರಾಯನ ಪಾಲಾಗಿದೆ. ಹಾಗೋ ಹೀಗೋ ಇನ್ನುಳಿದ ಬೆಳೆಗೆ ಕಳ್ಳರ ಕಣ್ಣು ಬಿದ್ದಿದೆ. ಹೌದು ಗದಗ ಜಿಲ್ಲೆಯಲ್ಲಿ ಈಗ ಬೆಳೆ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಲಿಂಬವ್ವ ಹೊನಗೇರಿ ಎಂಬುವವರ ಜಮೀನಿನಲ್ಲಿ ಸುಮಾರು ಆರು ಕ್ವಿಂಟಲ್​ಗಿಂತಲೂ ಹೆಚ್ಚಿಗೆ ಹಸಿ ಮೆಣಸಿನಕಾಯಿ ಕಳ್ಳತನ ಮಾಡಲಾಗಿದೆ. ರಾತ್ರೋರಾತ್ರಿ ಹೊಲಗಳಿಗೆ ನುಗ್ಗಿದ ಕಳ್ಳರು ಬೆಳೆದಿರುವ ಮೆಣಸಿನಕಾಯಿ ಲೂಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಬೇಕಾಬಿಟ್ಟಿಯಾಗಿ ಮೆಣಸಿನಕಾಯಿ ಗಿಡ ಕಿತ್ತು ಬಿಸಾಕಿ ಪರಾರಿಯಾಗಿದ್ದಾರೆ. ಸುಮಾರು ಮೂರು ಕ್ವಿಂಟಲ್​ಗೂ ಅಧಿಕ ಮೆಣಸಿನಕಾಯಿಯನ್ನು ಹೊತ್ತೊಯ್ದಿದ್ದಾರೆ ಎನ್ನಲಾಗ್ತಿದೆ. ಉಳಿದದ್ದನ್ನು ಹೊಲದಲ್ಲಿಯೇ ಬಿಸಾಡಿ ಎಲ್ಲೆಂದರಲ್ಲಿ ಬೆಳೆಯನ್ನ ತುಳಿದು, ಮೆಣಸಿನ ಕಾಯಿ ಗಿಡಗಳನ್ನು ಸಹ ಕಿತ್ತು ಹಾಕಿ ಪರಾರಿಯಾಗಿದ್ದಾರೆ.

ಕಣ್ಣೀರು ತರಿಸುತ್ತಿದೆ ಕಳ್ಳರ ಆಟ: ತಿಮ್ಮಾಪುರ ಗ್ರಾಮದಲ್ಲಿ ಕೇವಲ ಲಿಂಬವ್ವ ಹೊನಗೇರಿ ಇವರಷ್ಟೇ ಅಲ್ಲದೆ ಇನ್ನೊಬ್ಬರಾದ ಚೆನ್ನಪ್ಪ ಹೊನಗೇರಿ ಎಂಬುವರ ಜಮೀನಿನಲ್ಲಿಯೂ ಸಹ ಇದೇ ರೀತಿ ಮೆಣಸಿನಕಾಯಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಲಕ್ಷಾಂತರ ಆದಾಯದ ಮೆಣಸಿನಕಾಯಿಯನ್ನು ಕಳ್ಳರು ಹೊತ್ತೊಯ್ದಿದ್ದಾರೆ ಅಂತ ಜಮೀನು ಮಾಲೀಕರು ಕಣ್ಣೀರು ಹಾಕಿದ್ದಾರೆ. ಇನ್ನು ಹೊಲದಲ್ಲಿ ಬಿದ್ದಿದ್ದ ಮೆಣಸಿನ ಕಾಯಿ ಗಿಡಗಳನ್ನು ನೋಡಿ ರೈತ ಮಹಿಳೆ ಅಂಬವ್ವ ಒಂದು ಕ್ಷಣ ದಿಗಿಲು ಬಡಿದಂತೆ ಕೂತಿದ್ದಾರೆ. ಕಳ್ಳರಗೆ ಹಿಡಿ ಶಾಪ ಹಾಕಿದ್ದಾರೆ. ಏನ್ ಮಾಡಬೇಕು ಅಂತ ದಿಕ್ಕು ದೋಚುತ್ತಿಲ್ಲಾ ಅಂತಿದ್ದಾರೆ. ವರ್ಷಗಟ್ಟಲೆ ಕಷ್ಟ ಪಟ್ಟು ಶ್ರಮ ಪಟ್ಟಿದ್ದ ಆದಾಯ ಕಳ್ಳರ ಪಾಲಾಯ್ತಲ್ಲಾ ಅಂತ ರೈತರು ಕೊರಗುತ್ತಿದ್ದಾರೆ. ಹಾಗಾಗಿ ಜಿಲ್ಲಾಡಳಿತ ಇಂತಹ ಬೆಳೆ ಕಳ್ಳರಿಂದ ರೈತರನ್ನ ರಕ್ಷಣೆ ಮಾಡಬೇಕು ಅಂತ ರೈತರು ಒತ್ತಾಯ ಮಾಡ್ತಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ