AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಬೆಳೆ ಮಳೆ ಪಾಲಾಗಿದೆ; ಉಳಿದರ್ಧ ಭಾಗ ಕಳ್ಳಕಾಕರ ಪಾಲಾಗಿದೆ: ರೈತನ ಪಾಡೇನು?

ಗದಗ: ಸತತ ಮಳೆಯಿಂದ ರೈತರು ಬೆಳೆದ ಅರ್ಧಕ್ಕಿಂತ ಹೆಚ್ಚು ಬೆಳೆ ಮಳೆರಾಯನ ಪಾಲಾಗಿದೆ. ಹಾಗೋ ಹೀಗೋ ಇನ್ನುಳಿದ ಬೆಳೆಗೆ ಕಳ್ಳರ ಕಣ್ಣು ಬಿದ್ದಿದೆ. ಹೌದು ಗದಗ ಜಿಲ್ಲೆಯಲ್ಲಿ ಈಗ ಬೆಳೆ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಲಿಂಬವ್ವ ಹೊನಗೇರಿ ಎಂಬುವವರ ಜಮೀನಿನಲ್ಲಿ ಸುಮಾರು ಆರು ಕ್ವಿಂಟಲ್​ಗಿಂತಲೂ ಹೆಚ್ಚಿಗೆ ಹಸಿ ಮೆಣಸಿನಕಾಯಿ ಕಳ್ಳತನ ಮಾಡಲಾಗಿದೆ. ರಾತ್ರೋರಾತ್ರಿ ಹೊಲಗಳಿಗೆ ನುಗ್ಗಿದ ಕಳ್ಳರು ಬೆಳೆದಿರುವ ಮೆಣಸಿನಕಾಯಿ ಲೂಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಬೇಕಾಬಿಟ್ಟಿಯಾಗಿ ಮೆಣಸಿನಕಾಯಿ ಗಿಡ […]

ಅರ್ಧ ಬೆಳೆ ಮಳೆ ಪಾಲಾಗಿದೆ; ಉಳಿದರ್ಧ ಭಾಗ ಕಳ್ಳಕಾಕರ ಪಾಲಾಗಿದೆ: ರೈತನ ಪಾಡೇನು?
ಆಯೇಷಾ ಬಾನು
|

Updated on: Nov 03, 2020 | 3:47 PM

Share

ಗದಗ: ಸತತ ಮಳೆಯಿಂದ ರೈತರು ಬೆಳೆದ ಅರ್ಧಕ್ಕಿಂತ ಹೆಚ್ಚು ಬೆಳೆ ಮಳೆರಾಯನ ಪಾಲಾಗಿದೆ. ಹಾಗೋ ಹೀಗೋ ಇನ್ನುಳಿದ ಬೆಳೆಗೆ ಕಳ್ಳರ ಕಣ್ಣು ಬಿದ್ದಿದೆ. ಹೌದು ಗದಗ ಜಿಲ್ಲೆಯಲ್ಲಿ ಈಗ ಬೆಳೆ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಲಿಂಬವ್ವ ಹೊನಗೇರಿ ಎಂಬುವವರ ಜಮೀನಿನಲ್ಲಿ ಸುಮಾರು ಆರು ಕ್ವಿಂಟಲ್​ಗಿಂತಲೂ ಹೆಚ್ಚಿಗೆ ಹಸಿ ಮೆಣಸಿನಕಾಯಿ ಕಳ್ಳತನ ಮಾಡಲಾಗಿದೆ. ರಾತ್ರೋರಾತ್ರಿ ಹೊಲಗಳಿಗೆ ನುಗ್ಗಿದ ಕಳ್ಳರು ಬೆಳೆದಿರುವ ಮೆಣಸಿನಕಾಯಿ ಲೂಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಬೇಕಾಬಿಟ್ಟಿಯಾಗಿ ಮೆಣಸಿನಕಾಯಿ ಗಿಡ ಕಿತ್ತು ಬಿಸಾಕಿ ಪರಾರಿಯಾಗಿದ್ದಾರೆ. ಸುಮಾರು ಮೂರು ಕ್ವಿಂಟಲ್​ಗೂ ಅಧಿಕ ಮೆಣಸಿನಕಾಯಿಯನ್ನು ಹೊತ್ತೊಯ್ದಿದ್ದಾರೆ ಎನ್ನಲಾಗ್ತಿದೆ. ಉಳಿದದ್ದನ್ನು ಹೊಲದಲ್ಲಿಯೇ ಬಿಸಾಡಿ ಎಲ್ಲೆಂದರಲ್ಲಿ ಬೆಳೆಯನ್ನ ತುಳಿದು, ಮೆಣಸಿನ ಕಾಯಿ ಗಿಡಗಳನ್ನು ಸಹ ಕಿತ್ತು ಹಾಕಿ ಪರಾರಿಯಾಗಿದ್ದಾರೆ.

ಕಣ್ಣೀರು ತರಿಸುತ್ತಿದೆ ಕಳ್ಳರ ಆಟ: ತಿಮ್ಮಾಪುರ ಗ್ರಾಮದಲ್ಲಿ ಕೇವಲ ಲಿಂಬವ್ವ ಹೊನಗೇರಿ ಇವರಷ್ಟೇ ಅಲ್ಲದೆ ಇನ್ನೊಬ್ಬರಾದ ಚೆನ್ನಪ್ಪ ಹೊನಗೇರಿ ಎಂಬುವರ ಜಮೀನಿನಲ್ಲಿಯೂ ಸಹ ಇದೇ ರೀತಿ ಮೆಣಸಿನಕಾಯಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಲಕ್ಷಾಂತರ ಆದಾಯದ ಮೆಣಸಿನಕಾಯಿಯನ್ನು ಕಳ್ಳರು ಹೊತ್ತೊಯ್ದಿದ್ದಾರೆ ಅಂತ ಜಮೀನು ಮಾಲೀಕರು ಕಣ್ಣೀರು ಹಾಕಿದ್ದಾರೆ. ಇನ್ನು ಹೊಲದಲ್ಲಿ ಬಿದ್ದಿದ್ದ ಮೆಣಸಿನ ಕಾಯಿ ಗಿಡಗಳನ್ನು ನೋಡಿ ರೈತ ಮಹಿಳೆ ಅಂಬವ್ವ ಒಂದು ಕ್ಷಣ ದಿಗಿಲು ಬಡಿದಂತೆ ಕೂತಿದ್ದಾರೆ. ಕಳ್ಳರಗೆ ಹಿಡಿ ಶಾಪ ಹಾಕಿದ್ದಾರೆ. ಏನ್ ಮಾಡಬೇಕು ಅಂತ ದಿಕ್ಕು ದೋಚುತ್ತಿಲ್ಲಾ ಅಂತಿದ್ದಾರೆ. ವರ್ಷಗಟ್ಟಲೆ ಕಷ್ಟ ಪಟ್ಟು ಶ್ರಮ ಪಟ್ಟಿದ್ದ ಆದಾಯ ಕಳ್ಳರ ಪಾಲಾಯ್ತಲ್ಲಾ ಅಂತ ರೈತರು ಕೊರಗುತ್ತಿದ್ದಾರೆ. ಹಾಗಾಗಿ ಜಿಲ್ಲಾಡಳಿತ ಇಂತಹ ಬೆಳೆ ಕಳ್ಳರಿಂದ ರೈತರನ್ನ ರಕ್ಷಣೆ ಮಾಡಬೇಕು ಅಂತ ರೈತರು ಒತ್ತಾಯ ಮಾಡ್ತಿದ್ದಾರೆ.

Follow Us
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​