AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahadayi dispute: ಬೆಂಗಳೂರು ಚಲೋ.. ಮಹದಾಯಿ ಹೋರಾಟದ ಕಿಚ್ಚು ಮತ್ತೆ ಹೊತ್ತಿಕೊಳ್ಳುವಂತೆ ಕಾಣುತ್ತಿದೆ

Mahadayi ಮಹದಾಯಿ ಕಾಮಗಾರಿ ವಿಳಂಬ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಮಹದಾಯಿ ಹೋರಾಟಗಾರರಿಂದ ಬೆಂಗಳೂರು ಚಲೋ ನಡೆಸಲು ನಿರ್ಧರಿಸಲಾಗಿದೆ.

Mahadayi dispute: ಬೆಂಗಳೂರು ಚಲೋ.. ಮಹದಾಯಿ ಹೋರಾಟದ ಕಿಚ್ಚು ಮತ್ತೆ ಹೊತ್ತಿಕೊಳ್ಳುವಂತೆ ಕಾಣುತ್ತಿದೆ
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹದಾಯಿ ಹೋರಾಟಗಾರ ವೀರೇಶ್ ಸೊಬರದಮಠ
ಆಯೇಷಾ ಬಾನು
| Edited By: |

Updated on: Feb 03, 2021 | 3:36 PM

Share

ಹುಬ್ಬಳ್ಳಿ: ಮಹದಾಯಿ ಕಾಮಗಾರಿ ವಿಳಂಬ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರಿಂದ ಬೆಂಗಳೂರು ಚಲೋ ನಡೆಸಲು ನಿರ್ಧರಿಸಲಾಗಿದೆ ಎಂದು ಮಹದಾಯಿ ಹೋರಾಟಗಾರ ವೀರೇಶ್ ಸೊಬರದಮಠ ತಿಳಿಸಿದ್ದಾರೆ. ಮಹದಾಯಿ ಹೋರಾಟದ ಕಿಚ್ಚು ಮತ್ತೆ ಹೊತ್ತಿಕೊಳ್ಳುವಂತೆ ಕಾಣುತ್ತಿದೆ. ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಹೋರಾಟಗಾರರು ಸಿದ್ಧರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವೀರೇಶ್ ಸೊಬರದಮಠ “ತುಮಕೂರಿನ ಸಿದ್ಧಗಂಗಾ ಮಠದಿಂದ ರೈತರ ಪಾದಯಾತ್ರೆಗೆ ಚಿಂತನೆ ನಡೆಸಿದ್ದೇವೆ. ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಬೆಂಗಳೂರು ಚಲೋ ನಡೆಸಲಿದ್ದೇವೆ. 4 ಜಿಲ್ಲೆಯ ರೈತರಿಂದ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಯುತ್ತೆ. ಜೀವ ಹೋದರೂ ಸರಿ ಕಾಮಗಾರಿ ಆರಂಭವಾಗುವವರೆಗೆ ಬೆಂಗಳೂರು ಬಿಟ್ಟು ಕದಲುವುದಿಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಚಲೋ ಹಿನ್ನೆಲೆಯಲ್ಲಿ ನರಗುಂದದಲ್ಲಿ ಶೀಘ್ರದಲ್ಲೇ ಸಾವಿರಾರು ರೈತರೊಂದಿಗೆ ಸಭೆ ನಡೆಸಲು ಚಿಂತನೆ ನಡೆಸಲಾಗುತ್ತಿದೆ. ಬೆಂಗಳೂರಿನಿಂದ ಈ ಸಲ ಬರಿಗೈಯಲ್ಲಿ ಮರಳಿ ಬರುವುದಿಲ್ಲ. ಗೋವಾ ಪದೇ ಪದೇ ಕ್ಯಾತೆ ತೆಗೆಯುತ್ತಿದೆ. ಗೋವಾ ತನ್ನ ಹೋರಾಟವನ್ನು ಮಾಡುತ್ತಿದೆ. ರಾಜ್ಯದ ರಾಜಕಾರಣಿಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. 500 ಕೋಟಿ ಮೀಸಲಿಟ್ಟರೂ ಟೆಂಡರ್ ಕರೆಯುತ್ತಿಲ್ಲವೆಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಶಕದ ಹೋರಾಟಕ್ಕೆ ಜಯ, ಮಹದಾಯಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದ ಕೇಂದ್ರ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ