AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ರೈತರ ಹೋರಾಟ: ಅದು ಮತ್ತೊಂದು CAA ಹೋರಾಟ ಆಗುತ್ತೆ ಅಷ್ಟೇ -ಸಂಸದ ಪ್ರತಾಪ್‌ ಸಿಂಹ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಇದು ಮತ್ತೊಂದು ಸಿಎಎ ಹೋರಾಟ ಆಗುತ್ತೆ ಅಷ್ಟೇ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ರೈತರ ಹೋರಾಟ: ಅದು ಮತ್ತೊಂದು CAA ಹೋರಾಟ ಆಗುತ್ತೆ ಅಷ್ಟೇ -ಸಂಸದ ಪ್ರತಾಪ್‌ ಸಿಂಹ
ಸಾಧು ಶ್ರೀನಾಥ್​
|

Updated on: Dec 10, 2020 | 2:39 PM

Share

ಮೈಸೂರು: ಕೃಷಿ ಕಾಯಿದೆ ತಿದ್ದುಪಡಿ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಇದು ಮತ್ತೊಂದು ಸಿಎಎ ಹೋರಾಟ ಆಗುತ್ತೆ ಅಷ್ಟೇ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ವಿಚಾರ ಸಂಬಂಧ ಮಾತನಾಡಿದ ಪ್ರತಾಪ್ ಸಿಂಹ ಇದು ಮತ್ತೊಂದು ಸಿಎಎ ಹೋರಾಟ ಆಗುತ್ತೆ ಎಂದಿದ್ದಾರೆ. ಸಿಎಎಯಿಂದ ಯಾವ ಮುಸ್ಲಿಮರಿಗೂ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರೂ ಪ್ರತಿಭಟನೆ ಮಾಡಿದರು. ಈಗ ರೈತರಿಗೂ ಅಷ್ಟೇ.. ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳುತ್ತಿದ್ದರೂ ಪ್ರತಿಭಟನೆ ಮಾಡುತ್ತಿದ್ದಾರೆ.

ಪ್ರತಿಭಟನೆ ಉದ್ದೇಶ ಬೇರೆಯೇ ಇದ್ದಂತೆ ಕಾಣಿಸುತ್ತಿದೆ. ಪಂಜಾಬ್ ರೈತರು ದೆಹಲಿಗೆ ಬಂದು ಧರಣಿ ಮಾಡ್ತಿದ್ದಾರೆ. ಪಂಜಾಬ್ ರೈತರೇಕೆ ದೆಹಲಿಗೆ ಬಂದು ಧರಣಿ ಮಾಡ್ಬೇಕು. ಪಂಜಾಬ್‌ನಲ್ಲಿ ಹೋರಾಟ ಮಾಡಿದರೆ ನ್ಯಾಯ ಸಿಗಲ್ವಾ? ದೆಹಲಿಯಲ್ಲಿ ಹಲವು ದೇಶದ ರಾಯಭಾರಿ ಕಚೇರಿಗಳು ಇವೆ. ಕಚೇರಿಗಳಿಗೆ ನುಗ್ಗಿ ಪ್ರತಿಭಟನೆ ಮಾಡುವ ಉದ್ದೇಶವೇನು? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಗೋವಿಗೆ ಮಾತ್ರ ನಾವು ತಾಯಿ ಸ್ಥಾನ ಕೊಟ್ಟಿರೋದು: ಇನ್ನು ಇದೇ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಗೋಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿಯೂ ಮಾತನಾಡಿದರು. ಕೇವಲ ಮೃಗಾಲಯದಲ್ಲಿನ ಪ್ರಾಣಿಗಳ ಆಹಾರದ ಬಗ್ಗೆ ಕಾಳಜಿ ಇದ್ದರೆ ಹೇಳಿ, ಆ ಪ್ರಾಣಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡೋಣ. ಆ ಬಗ್ಗೆ ನಮ್ಮೊಂದಿಗೆ ನೀವು ಪ್ರತ್ಯೇಕವಾಗಿ ಚರ್ಚೆ ಮಾಡಿ. ಆಗ ನಿಮಗೆ ಉತ್ತರ ಕೊಡುತ್ತೇವೆ. ಆದರೆ ಚರ್ಮೋದ್ಯಮ ಆಹಾರ ಪದ್ಧತಿ ಅನ್ನುವ ಕ್ಷುಲ್ಲಕ ಕಾರಣ ಕೊಡಬೇಡಿ.

ಭಾರತೀಯರು ತಾಯಿಯನ್ನ ಬಿಟ್ಟರೆ ಗೋವಿಗೆ ಮಾತ್ರ ತಾಯಿ ಸ್ಥಾನ ಕೊಟ್ಟಿರುವುದು. ಅದನ್ನ ಅರ್ಥ ಮಾಡಿಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾನೂನು ಜಾರಿ ಮಾಡಿದ್ದಾರೆ. ತಿನ್ನುವುದಕ್ಕಾಗಿ ಕುರಿ, ಕೋಳಿ, ಆಡು ಇವೆ. ಅವುಗಳಿಗೆ ಯಾರೂ ಮಾತೆ ಎನ್ನುವುದಿಲ್ಲ. ಕಾಂಗ್ರೆಸ್‌ನದ್ದು ಯಾವಾಗಲೂ ಓಲೈಕೆ ರಾಜಕಾರಣ. ಗೋಹತ್ಯೆ ಕಾಯ್ದೆ ವಿರೋಧಿಸಿ ಮತ್ತೆ ಯಾರನ್ನೋ ಓಲೈಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ನವರು ಅದರಿಂದ ಹೊರಗೆ ಬಂದು ರಾಜಕಾರಣ ಮಾಡಲಿ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್​ ಸಿಂಹ ಗುಡುಗಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?