AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ರೈತರ ಹೋರಾಟ: ಅದು ಮತ್ತೊಂದು CAA ಹೋರಾಟ ಆಗುತ್ತೆ ಅಷ್ಟೇ -ಸಂಸದ ಪ್ರತಾಪ್‌ ಸಿಂಹ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಇದು ಮತ್ತೊಂದು ಸಿಎಎ ಹೋರಾಟ ಆಗುತ್ತೆ ಅಷ್ಟೇ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ರೈತರ ಹೋರಾಟ: ಅದು ಮತ್ತೊಂದು CAA ಹೋರಾಟ ಆಗುತ್ತೆ ಅಷ್ಟೇ -ಸಂಸದ ಪ್ರತಾಪ್‌ ಸಿಂಹ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 10, 2020 | 2:39 PM

Share

ಮೈಸೂರು: ಕೃಷಿ ಕಾಯಿದೆ ತಿದ್ದುಪಡಿ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಇದು ಮತ್ತೊಂದು ಸಿಎಎ ಹೋರಾಟ ಆಗುತ್ತೆ ಅಷ್ಟೇ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ವಿಚಾರ ಸಂಬಂಧ ಮಾತನಾಡಿದ ಪ್ರತಾಪ್ ಸಿಂಹ ಇದು ಮತ್ತೊಂದು ಸಿಎಎ ಹೋರಾಟ ಆಗುತ್ತೆ ಎಂದಿದ್ದಾರೆ. ಸಿಎಎಯಿಂದ ಯಾವ ಮುಸ್ಲಿಮರಿಗೂ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರೂ ಪ್ರತಿಭಟನೆ ಮಾಡಿದರು. ಈಗ ರೈತರಿಗೂ ಅಷ್ಟೇ.. ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳುತ್ತಿದ್ದರೂ ಪ್ರತಿಭಟನೆ ಮಾಡುತ್ತಿದ್ದಾರೆ.

ಪ್ರತಿಭಟನೆ ಉದ್ದೇಶ ಬೇರೆಯೇ ಇದ್ದಂತೆ ಕಾಣಿಸುತ್ತಿದೆ. ಪಂಜಾಬ್ ರೈತರು ದೆಹಲಿಗೆ ಬಂದು ಧರಣಿ ಮಾಡ್ತಿದ್ದಾರೆ. ಪಂಜಾಬ್ ರೈತರೇಕೆ ದೆಹಲಿಗೆ ಬಂದು ಧರಣಿ ಮಾಡ್ಬೇಕು. ಪಂಜಾಬ್‌ನಲ್ಲಿ ಹೋರಾಟ ಮಾಡಿದರೆ ನ್ಯಾಯ ಸಿಗಲ್ವಾ? ದೆಹಲಿಯಲ್ಲಿ ಹಲವು ದೇಶದ ರಾಯಭಾರಿ ಕಚೇರಿಗಳು ಇವೆ. ಕಚೇರಿಗಳಿಗೆ ನುಗ್ಗಿ ಪ್ರತಿಭಟನೆ ಮಾಡುವ ಉದ್ದೇಶವೇನು? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಗೋವಿಗೆ ಮಾತ್ರ ನಾವು ತಾಯಿ ಸ್ಥಾನ ಕೊಟ್ಟಿರೋದು: ಇನ್ನು ಇದೇ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಗೋಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿಯೂ ಮಾತನಾಡಿದರು. ಕೇವಲ ಮೃಗಾಲಯದಲ್ಲಿನ ಪ್ರಾಣಿಗಳ ಆಹಾರದ ಬಗ್ಗೆ ಕಾಳಜಿ ಇದ್ದರೆ ಹೇಳಿ, ಆ ಪ್ರಾಣಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡೋಣ. ಆ ಬಗ್ಗೆ ನಮ್ಮೊಂದಿಗೆ ನೀವು ಪ್ರತ್ಯೇಕವಾಗಿ ಚರ್ಚೆ ಮಾಡಿ. ಆಗ ನಿಮಗೆ ಉತ್ತರ ಕೊಡುತ್ತೇವೆ. ಆದರೆ ಚರ್ಮೋದ್ಯಮ ಆಹಾರ ಪದ್ಧತಿ ಅನ್ನುವ ಕ್ಷುಲ್ಲಕ ಕಾರಣ ಕೊಡಬೇಡಿ.

ಭಾರತೀಯರು ತಾಯಿಯನ್ನ ಬಿಟ್ಟರೆ ಗೋವಿಗೆ ಮಾತ್ರ ತಾಯಿ ಸ್ಥಾನ ಕೊಟ್ಟಿರುವುದು. ಅದನ್ನ ಅರ್ಥ ಮಾಡಿಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾನೂನು ಜಾರಿ ಮಾಡಿದ್ದಾರೆ. ತಿನ್ನುವುದಕ್ಕಾಗಿ ಕುರಿ, ಕೋಳಿ, ಆಡು ಇವೆ. ಅವುಗಳಿಗೆ ಯಾರೂ ಮಾತೆ ಎನ್ನುವುದಿಲ್ಲ. ಕಾಂಗ್ರೆಸ್‌ನದ್ದು ಯಾವಾಗಲೂ ಓಲೈಕೆ ರಾಜಕಾರಣ. ಗೋಹತ್ಯೆ ಕಾಯ್ದೆ ವಿರೋಧಿಸಿ ಮತ್ತೆ ಯಾರನ್ನೋ ಓಲೈಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ನವರು ಅದರಿಂದ ಹೊರಗೆ ಬಂದು ರಾಜಕಾರಣ ಮಾಡಲಿ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್​ ಸಿಂಹ ಗುಡುಗಿದ್ದಾರೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’