AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR Market​ನಲ್ಲಿ 1 ಅಂಗಡಿಗೆ ಲಂಚ ಎಷ್ಟು ಗೊತ್ತಾ? ಫೀಲ್ಡಿಗೆ ಇಳಿದರು ರೈತ ನಾಯಕರು

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ವ್ಯಾಪಾರವಿಲ್ಲದೆ ನಷ್ಟವಾಗಿದೆ. ಹಾಗಾಗಿ ಕೆ.ಆರ್​.ಮಾರ್ಕೆಟ್‌ನಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜ್ಯದ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತರ ಮೇಲೆ ಬಿಬಿಎಂಪಿ ಅಧಿಕಾರಿಗಳು ನಡೆಸಿರುವ ದೌರ್ಜನ್ಯವನ್ನೂ ಖಂಡಿಸಿದ್ದಾರೆ. ಮಾರ್ಕೆಟ್​ನಲ್ಲಿ ವ್ಯಾಪಾರ ಮಾಡೋಕೆ ಅನುಮತಿ ನೀಡಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ನೂರಾರು ರೈತರು ಜಮಾಯಿಸಿರುವ ಕಾರಣ ಪೊಲೀಸರು ಬಿಗಿ ಬಂದೋಬಸ್ತ್‌ ಆಯೋಜಿಸಿದ್ದಾರೆ. ಇದೇ ವೇಳೆ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ತೀರ್ಮಾನಿಸಿದ್ದಾರೆ.

KR Market​ನಲ್ಲಿ 1 ಅಂಗಡಿಗೆ ಲಂಚ ಎಷ್ಟು ಗೊತ್ತಾ? ಫೀಲ್ಡಿಗೆ ಇಳಿದರು ರೈತ ನಾಯಕರು
ಸಾಧು ಶ್ರೀನಾಥ್​
|

Updated on:Jun 06, 2020 | 2:01 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ವ್ಯಾಪಾರವಿಲ್ಲದೆ ನಷ್ಟವಾಗಿದೆ. ಹಾಗಾಗಿ ಕೆ.ಆರ್​.ಮಾರ್ಕೆಟ್‌ನಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜ್ಯದ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತರ ಮೇಲೆ ಬಿಬಿಎಂಪಿ ಅಧಿಕಾರಿಗಳು ನಡೆಸಿರುವ ದೌರ್ಜನ್ಯವನ್ನೂ ಖಂಡಿಸಿದ್ದಾರೆ.

ಮಾರ್ಕೆಟ್​ನಲ್ಲಿ ವ್ಯಾಪಾರ ಮಾಡೋಕೆ ಅನುಮತಿ ನೀಡಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ನೂರಾರು ರೈತರು ಜಮಾಯಿಸಿರುವ ಕಾರಣ ಪೊಲೀಸರು ಬಿಗಿ ಬಂದೋಬಸ್ತ್‌ ಆಯೋಜಿಸಿದ್ದಾರೆ. ಇದೇ ವೇಳೆ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ತೀರ್ಮಾನಿಸಿದ್ದಾರೆ.

Published On - 1:26 pm, Sat, 6 June 20