AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಗಂಗಾಧರನಾಥ ಸ್ವಾಮೀಜಿ ಫ್ಲೈ ಓವರ್ ಏರಿ ಟೌನ್​ಹಾಲ್​ನತ್ತ ಸಾಗಿದ ಪ್ರತಿಭಟನಾ ಜಾಥಾ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಪ್ರತಿಭಟನೆಯ ಕಾವು ಜೋರಾಗಿದ್ದು ನಗರದ ಸುಮ್ಮನಹಳ್ಳಿಯಿಂದ ಟೌನ್ ಹಾಲ್​ವರೆಗೂ ಬೃಹತ್​ ಪ್ರತಿಭಟನಾ ಱಲಿಗೆ ಚಾಲನೆ ಸಿಕ್ಕಿದೆ. ಕುರಬೂರು ಶಾಂತಕುಮಾರ್, ನಟ ಚೇತನ ಹಾಗೂ ಗಿರೀಶ್ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಱಲಿ ನಡೆಸಲಾಗುತ್ತಿದೆ. ಗಿರೀಶ್ ಗೌಡ, ಕುರಬೂರು ಶಾಂತಕುಮಾರ್ ಹಾಗೂ ನಟ ಚೇತನರ ಜೊತೆ ಱಲಿಯಲ್ಲಿ […]

ಬಾಲಗಂಗಾಧರನಾಥ ಸ್ವಾಮೀಜಿ ಫ್ಲೈ ಓವರ್ ಏರಿ ಟೌನ್​ಹಾಲ್​ನತ್ತ ಸಾಗಿದ ಪ್ರತಿಭಟನಾ ಜಾಥಾ
KUSHAL V
| Edited By: |

Updated on:Sep 28, 2020 | 11:26 AM

Share

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಪ್ರತಿಭಟನೆಯ ಕಾವು ಜೋರಾಗಿದ್ದು ನಗರದ ಸುಮ್ಮನಹಳ್ಳಿಯಿಂದ ಟೌನ್ ಹಾಲ್​ವರೆಗೂ ಬೃಹತ್​ ಪ್ರತಿಭಟನಾ ಱಲಿಗೆ ಚಾಲನೆ ಸಿಕ್ಕಿದೆ. ಕುರಬೂರು ಶಾಂತಕುಮಾರ್, ನಟ ಚೇತನ ಹಾಗೂ ಗಿರೀಶ್ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಱಲಿ ನಡೆಸಲಾಗುತ್ತಿದೆ.

ಗಿರೀಶ್ ಗೌಡ, ಕುರಬೂರು ಶಾಂತಕುಮಾರ್ ಹಾಗೂ ನಟ ಚೇತನರ ಜೊತೆ ಱಲಿಯಲ್ಲಿ ಹಲವು ಸಂಘಟನೆಗಳ ನೂರಾರು ಮಂದಿ ಪ್ರತಿಭಟನಾಕಾರರು ಸಹ ಭಾಗಿಯಾಗಿದ್ದಾರೆ. ಸುಮ್ಮನಹಳ್ಳಿ ಜಂಕ್ಷನ್​ನಿಂದ ಶುರುವಾಗಿರುವ ಬಹೃತ ಪ್ರತಿಭಟನಾ ಜಾಥಾ ನಾಯಂಡಹಳ್ಳಿ, ಮೈಸೂರು ರಸ್ತೆ ಮುಖಾಂತರವಾಗಿ ಟೌನ್ ಹಾಲ್​ಗೆ ತಲುಪಲಿದೆ. ಇಲ್ಲಿಯವರೆಗೆ ಪ್ರತಿಭಟನಾಕಾರರು ಬೈಕ್ ಱಲಿ ಮುಖಾಂತರ ತೆರಳಲಿದ್ದು ಬಳಿಕ ಅಲ್ಲಿಂದ ಕಾಲ್ನಡಿಗೆ ಮೂಲಕ ಮೈಸೂರು ಬ್ಯಾಂಕ್ ಸರ್ಕಲ್​ ತಲುಪಿ ಅಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಈ ನಡುವೆ, ಪ್ರತಿಭಟನೆಯಲ್ಲಿ ಇನ್ನು ಕೆಲವರು ಭಾಗಿಯಾಗುವವರು ಬರಬೇಕಾಗಿದೆ. ಹಾಗಾಗಿ, 11.30ಕ್ಕೆ ಟೌನ್ ಹಾಲ್​ನಿಂದ ಮೈಸೂರು ಬ್ಯಾಂಕ್ ಸರ್ಕಲ್​ಗೆ ಱಲಿ ಹೊರಡಲಿದೆ. ಸದ್ಯ, KR ಮಾರುಕಟ್ಟೆ ಮೇಲಿನ ಬಾಲಗಂಗಾಧರನಾಥ ಸ್ವಾಮೀಜಿ ಫ್ಲೈಓವರ್​ಗೆ  ರೈತರ ಱಲಿ ತಲುಪಿದೆ ಎಂದು ತಿಳಿದುಬಂದಿದೆ.

Published On - 10:57 am, Mon, 28 September 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್