AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನನ್ನು ಆಸ್ಪತ್ರೆಗೆ ಸೇರಿಸಿದ ಮಗ-ತಂದೆ ದಿಢೀರ್ ಸಾವು, ಇತ್ತ ಅಮ್ಮನೂ ಬದುಕುಳಿಯಲಿಲ್ಲ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲು ಹೋದ ಮಗ ಹಾಗೂ ಗಂಡ ಇಬ್ಬರೂ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆ.ಆರ್ ಪುರಂನ ವಿಜಿನಾಪುರದ ನಿವಾಸಿ 46 ವರ್ಷದ ಅಪ್ರೋಜ್. ಬಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 13 ರಂದು ITPL ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಐಸಿಯು ವಾರ್ಡ್​ಗೆ ಶಿಫ್ಟ್ ಮಾಡಬೇಕು ಅಂತ‌ ಹೇಳಿದ್ರು. ಈ ವಿಚಾರ ಕೇಳಿದ್ದೆ ತಡ ಅಪ್ರೋಜ್ ಬಿ ಪತಿ ಸೈಯದ್ […]

ಅಮ್ಮನನ್ನು ಆಸ್ಪತ್ರೆಗೆ ಸೇರಿಸಿದ ಮಗ-ತಂದೆ ದಿಢೀರ್ ಸಾವು, ಇತ್ತ ಅಮ್ಮನೂ ಬದುಕುಳಿಯಲಿಲ್ಲ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 24, 2020 | 12:34 PM

Share

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲು ಹೋದ ಮಗ ಹಾಗೂ ಗಂಡ ಇಬ್ಬರೂ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆ.ಆರ್ ಪುರಂನ ವಿಜಿನಾಪುರದ ನಿವಾಸಿ 46 ವರ್ಷದ ಅಪ್ರೋಜ್. ಬಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 13 ರಂದು ITPL ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಐಸಿಯು ವಾರ್ಡ್​ಗೆ ಶಿಫ್ಟ್ ಮಾಡಬೇಕು ಅಂತ‌ ಹೇಳಿದ್ರು. ಈ ವಿಚಾರ ಕೇಳಿದ್ದೆ ತಡ ಅಪ್ರೋಜ್ ಬಿ ಪತಿ ಸೈಯದ್ ಸರ್ತಾಜ್ ಹೃದಯಾಘಾತದಿಂದ ಕಾರಿನಲ್ಲೇ ತೀರಿಕೊಂಡಿದ್ದಾರೆ.

2 ದಿನಗಳ ಅಂತರದಲ್ಲಿ ಇಹಲೋಕ ತ್ಯಜಿಸಿದ ಅಪ್ಪ-ಮಗ ತಾಯಿಯನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿ ಮನೆಗೆ ಬಂದ ಮಗ, ತಂದೆಯ ಅಂತ್ಯಸಂಸ್ಕಾರ ಮಾಡಿದ್ದಾನೆ. ಎರಡು ದಿನದ ನಂತರ ಮಗ ಸೈಯದ್ ಇಮ್ರಾನ್​ಗೆ ಹಾರ್ಟ್ ಅಟ್ಯಾಕ್ ಆಗಿ, ಆತನೂ ತೀರಿಕೊಂಡಿದ್ದಾನೆ. ಅಲ್ಲಿಗೆ ಅಪ್ಪ-ಮಗ 2 ದಿನಗಳ ಅಂತರದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ತಾಯಿ ಅಪ್ರೋಜ್ ಸಹ ತೀರಿಕೊಂಡಿದ್ದಾರೆ ಈ ಮಧ್ಯೆ,  ಅಪ್ರೋಜ್ ಬಿ ಕುಟುಂಬಸ್ಥರಿಗೆ ನಿನ್ನೆ ಬೆಳಿಗ್ಗೆ 8.45 ಕ್ಕೆ ಆಸ್ಪತ್ರೆಯಿಂದ ದೂರವಾಣಿ ಕರೆ ಬಂದಿದೆ. ಕಾಲ್ ಮಾಡಿದ್ದ ಆಸ್ಪತ್ರೆಯವರು ಇಮ್ರಾನ್ ತಾಯಿ ಅಪ್ರೋಜ್  ತೀರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದೇ ವೇಳೆ, 9 ಲಕ್ಷ ರುಪಾಯಿ ಹಣ ಕಟ್ಟಿ, ಬಾಡಿ ತೆಗೆದುಕೊಂಡು ಹೋಗಿ ಎಂದೂ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರಂತೆ.

ತಾಯಿಯ ಶವ ಇನ್ನೂ ಆಸ್ಪತ್ರೆಯಲ್ಲೇ.. ಹೀಗಾಗಿ ಅಷ್ಟು ಹಣ ಕಟ್ಟಲಾಗದೆ ನಿನ್ನೆಯಿಂದ ಅಪ್ರೋಜ್ ಬಿ ಅವರ ಮಕ್ಕಳು ಆಸ್ಪತ್ರೆಯ ಮುಂಭಾಗದಲ್ಲೇ ಕಾಯುತ್ತಿದ್ದಾರೆ. ಇದನ್ನು ನೋಡಿದ ಆಸ್ಪತ್ರೆಯವರು ಬಿಬಿಎಂಪಿ ಅಧಿಕಾರಿಗಳನ್ನು ಕರೆದುಕೊಂಡು ಬನ್ನಿ ಅಂದಿದ್ದಾರೆ. ಇತ್ತ ಬಿಬಿಎಂಪಿ ಅಧಿಕಾರಿಗಳಿಗೆ ಕಾಲ್ ಮಾಡಿದ್ರೆ ಅವರು ನಾವು ಆಸ್ಪತ್ರೆಯವರ ಜೊತೆಗೆ ಮಾತಾಡಿದ್ದೀವಿ ಬಾಡಿ ಕೊಡ್ತಾರೆ ಅಂತಿದ್ದಾರೆ. ಆದರೆ ಆಸ್ಪತ್ರೆಯವರು ಮಾತ್ರ ಬಾಡಿ ಕೊಡ್ತಿಲ್ಲ ಅಂತ ಅಪ್ರೋಜ್ ಬಿ ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ.

Published On - 12:33 pm, Fri, 24 July 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು