AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನನ್ನು ಆಸ್ಪತ್ರೆಗೆ ಸೇರಿಸಿದ ಮಗ-ತಂದೆ ದಿಢೀರ್ ಸಾವು, ಇತ್ತ ಅಮ್ಮನೂ ಬದುಕುಳಿಯಲಿಲ್ಲ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲು ಹೋದ ಮಗ ಹಾಗೂ ಗಂಡ ಇಬ್ಬರೂ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆ.ಆರ್ ಪುರಂನ ವಿಜಿನಾಪುರದ ನಿವಾಸಿ 46 ವರ್ಷದ ಅಪ್ರೋಜ್. ಬಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 13 ರಂದು ITPL ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಐಸಿಯು ವಾರ್ಡ್​ಗೆ ಶಿಫ್ಟ್ ಮಾಡಬೇಕು ಅಂತ‌ ಹೇಳಿದ್ರು. ಈ ವಿಚಾರ ಕೇಳಿದ್ದೆ ತಡ ಅಪ್ರೋಜ್ ಬಿ ಪತಿ ಸೈಯದ್ […]

ಅಮ್ಮನನ್ನು ಆಸ್ಪತ್ರೆಗೆ ಸೇರಿಸಿದ ಮಗ-ತಂದೆ ದಿಢೀರ್ ಸಾವು, ಇತ್ತ ಅಮ್ಮನೂ ಬದುಕುಳಿಯಲಿಲ್ಲ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 24, 2020 | 12:34 PM

Share

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲು ಹೋದ ಮಗ ಹಾಗೂ ಗಂಡ ಇಬ್ಬರೂ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆ.ಆರ್ ಪುರಂನ ವಿಜಿನಾಪುರದ ನಿವಾಸಿ 46 ವರ್ಷದ ಅಪ್ರೋಜ್. ಬಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 13 ರಂದು ITPL ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಐಸಿಯು ವಾರ್ಡ್​ಗೆ ಶಿಫ್ಟ್ ಮಾಡಬೇಕು ಅಂತ‌ ಹೇಳಿದ್ರು. ಈ ವಿಚಾರ ಕೇಳಿದ್ದೆ ತಡ ಅಪ್ರೋಜ್ ಬಿ ಪತಿ ಸೈಯದ್ ಸರ್ತಾಜ್ ಹೃದಯಾಘಾತದಿಂದ ಕಾರಿನಲ್ಲೇ ತೀರಿಕೊಂಡಿದ್ದಾರೆ.

2 ದಿನಗಳ ಅಂತರದಲ್ಲಿ ಇಹಲೋಕ ತ್ಯಜಿಸಿದ ಅಪ್ಪ-ಮಗ ತಾಯಿಯನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿ ಮನೆಗೆ ಬಂದ ಮಗ, ತಂದೆಯ ಅಂತ್ಯಸಂಸ್ಕಾರ ಮಾಡಿದ್ದಾನೆ. ಎರಡು ದಿನದ ನಂತರ ಮಗ ಸೈಯದ್ ಇಮ್ರಾನ್​ಗೆ ಹಾರ್ಟ್ ಅಟ್ಯಾಕ್ ಆಗಿ, ಆತನೂ ತೀರಿಕೊಂಡಿದ್ದಾನೆ. ಅಲ್ಲಿಗೆ ಅಪ್ಪ-ಮಗ 2 ದಿನಗಳ ಅಂತರದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ತಾಯಿ ಅಪ್ರೋಜ್ ಸಹ ತೀರಿಕೊಂಡಿದ್ದಾರೆ ಈ ಮಧ್ಯೆ,  ಅಪ್ರೋಜ್ ಬಿ ಕುಟುಂಬಸ್ಥರಿಗೆ ನಿನ್ನೆ ಬೆಳಿಗ್ಗೆ 8.45 ಕ್ಕೆ ಆಸ್ಪತ್ರೆಯಿಂದ ದೂರವಾಣಿ ಕರೆ ಬಂದಿದೆ. ಕಾಲ್ ಮಾಡಿದ್ದ ಆಸ್ಪತ್ರೆಯವರು ಇಮ್ರಾನ್ ತಾಯಿ ಅಪ್ರೋಜ್  ತೀರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದೇ ವೇಳೆ, 9 ಲಕ್ಷ ರುಪಾಯಿ ಹಣ ಕಟ್ಟಿ, ಬಾಡಿ ತೆಗೆದುಕೊಂಡು ಹೋಗಿ ಎಂದೂ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರಂತೆ.

ತಾಯಿಯ ಶವ ಇನ್ನೂ ಆಸ್ಪತ್ರೆಯಲ್ಲೇ.. ಹೀಗಾಗಿ ಅಷ್ಟು ಹಣ ಕಟ್ಟಲಾಗದೆ ನಿನ್ನೆಯಿಂದ ಅಪ್ರೋಜ್ ಬಿ ಅವರ ಮಕ್ಕಳು ಆಸ್ಪತ್ರೆಯ ಮುಂಭಾಗದಲ್ಲೇ ಕಾಯುತ್ತಿದ್ದಾರೆ. ಇದನ್ನು ನೋಡಿದ ಆಸ್ಪತ್ರೆಯವರು ಬಿಬಿಎಂಪಿ ಅಧಿಕಾರಿಗಳನ್ನು ಕರೆದುಕೊಂಡು ಬನ್ನಿ ಅಂದಿದ್ದಾರೆ. ಇತ್ತ ಬಿಬಿಎಂಪಿ ಅಧಿಕಾರಿಗಳಿಗೆ ಕಾಲ್ ಮಾಡಿದ್ರೆ ಅವರು ನಾವು ಆಸ್ಪತ್ರೆಯವರ ಜೊತೆಗೆ ಮಾತಾಡಿದ್ದೀವಿ ಬಾಡಿ ಕೊಡ್ತಾರೆ ಅಂತಿದ್ದಾರೆ. ಆದರೆ ಆಸ್ಪತ್ರೆಯವರು ಮಾತ್ರ ಬಾಡಿ ಕೊಡ್ತಿಲ್ಲ ಅಂತ ಅಪ್ರೋಜ್ ಬಿ ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ.

Published On - 12:33 pm, Fri, 24 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ