AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನನ್ನು ಆಸ್ಪತ್ರೆಗೆ ಸೇರಿಸಿದ ಮಗ-ತಂದೆ ದಿಢೀರ್ ಸಾವು, ಇತ್ತ ಅಮ್ಮನೂ ಬದುಕುಳಿಯಲಿಲ್ಲ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲು ಹೋದ ಮಗ ಹಾಗೂ ಗಂಡ ಇಬ್ಬರೂ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆ.ಆರ್ ಪುರಂನ ವಿಜಿನಾಪುರದ ನಿವಾಸಿ 46 ವರ್ಷದ ಅಪ್ರೋಜ್. ಬಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 13 ರಂದು ITPL ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಐಸಿಯು ವಾರ್ಡ್​ಗೆ ಶಿಫ್ಟ್ ಮಾಡಬೇಕು ಅಂತ‌ ಹೇಳಿದ್ರು. ಈ ವಿಚಾರ ಕೇಳಿದ್ದೆ ತಡ ಅಪ್ರೋಜ್ ಬಿ ಪತಿ ಸೈಯದ್ […]

ಅಮ್ಮನನ್ನು ಆಸ್ಪತ್ರೆಗೆ ಸೇರಿಸಿದ ಮಗ-ತಂದೆ ದಿಢೀರ್ ಸಾವು, ಇತ್ತ ಅಮ್ಮನೂ ಬದುಕುಳಿಯಲಿಲ್ಲ
ಆಯೇಷಾ ಬಾನು
| Edited By: |

Updated on:Jul 24, 2020 | 12:34 PM

Share

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲು ಹೋದ ಮಗ ಹಾಗೂ ಗಂಡ ಇಬ್ಬರೂ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆ.ಆರ್ ಪುರಂನ ವಿಜಿನಾಪುರದ ನಿವಾಸಿ 46 ವರ್ಷದ ಅಪ್ರೋಜ್. ಬಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 13 ರಂದು ITPL ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಐಸಿಯು ವಾರ್ಡ್​ಗೆ ಶಿಫ್ಟ್ ಮಾಡಬೇಕು ಅಂತ‌ ಹೇಳಿದ್ರು. ಈ ವಿಚಾರ ಕೇಳಿದ್ದೆ ತಡ ಅಪ್ರೋಜ್ ಬಿ ಪತಿ ಸೈಯದ್ ಸರ್ತಾಜ್ ಹೃದಯಾಘಾತದಿಂದ ಕಾರಿನಲ್ಲೇ ತೀರಿಕೊಂಡಿದ್ದಾರೆ.

2 ದಿನಗಳ ಅಂತರದಲ್ಲಿ ಇಹಲೋಕ ತ್ಯಜಿಸಿದ ಅಪ್ಪ-ಮಗ ತಾಯಿಯನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿ ಮನೆಗೆ ಬಂದ ಮಗ, ತಂದೆಯ ಅಂತ್ಯಸಂಸ್ಕಾರ ಮಾಡಿದ್ದಾನೆ. ಎರಡು ದಿನದ ನಂತರ ಮಗ ಸೈಯದ್ ಇಮ್ರಾನ್​ಗೆ ಹಾರ್ಟ್ ಅಟ್ಯಾಕ್ ಆಗಿ, ಆತನೂ ತೀರಿಕೊಂಡಿದ್ದಾನೆ. ಅಲ್ಲಿಗೆ ಅಪ್ಪ-ಮಗ 2 ದಿನಗಳ ಅಂತರದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ತಾಯಿ ಅಪ್ರೋಜ್ ಸಹ ತೀರಿಕೊಂಡಿದ್ದಾರೆ ಈ ಮಧ್ಯೆ,  ಅಪ್ರೋಜ್ ಬಿ ಕುಟುಂಬಸ್ಥರಿಗೆ ನಿನ್ನೆ ಬೆಳಿಗ್ಗೆ 8.45 ಕ್ಕೆ ಆಸ್ಪತ್ರೆಯಿಂದ ದೂರವಾಣಿ ಕರೆ ಬಂದಿದೆ. ಕಾಲ್ ಮಾಡಿದ್ದ ಆಸ್ಪತ್ರೆಯವರು ಇಮ್ರಾನ್ ತಾಯಿ ಅಪ್ರೋಜ್  ತೀರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದೇ ವೇಳೆ, 9 ಲಕ್ಷ ರುಪಾಯಿ ಹಣ ಕಟ್ಟಿ, ಬಾಡಿ ತೆಗೆದುಕೊಂಡು ಹೋಗಿ ಎಂದೂ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರಂತೆ.

ತಾಯಿಯ ಶವ ಇನ್ನೂ ಆಸ್ಪತ್ರೆಯಲ್ಲೇ.. ಹೀಗಾಗಿ ಅಷ್ಟು ಹಣ ಕಟ್ಟಲಾಗದೆ ನಿನ್ನೆಯಿಂದ ಅಪ್ರೋಜ್ ಬಿ ಅವರ ಮಕ್ಕಳು ಆಸ್ಪತ್ರೆಯ ಮುಂಭಾಗದಲ್ಲೇ ಕಾಯುತ್ತಿದ್ದಾರೆ. ಇದನ್ನು ನೋಡಿದ ಆಸ್ಪತ್ರೆಯವರು ಬಿಬಿಎಂಪಿ ಅಧಿಕಾರಿಗಳನ್ನು ಕರೆದುಕೊಂಡು ಬನ್ನಿ ಅಂದಿದ್ದಾರೆ. ಇತ್ತ ಬಿಬಿಎಂಪಿ ಅಧಿಕಾರಿಗಳಿಗೆ ಕಾಲ್ ಮಾಡಿದ್ರೆ ಅವರು ನಾವು ಆಸ್ಪತ್ರೆಯವರ ಜೊತೆಗೆ ಮಾತಾಡಿದ್ದೀವಿ ಬಾಡಿ ಕೊಡ್ತಾರೆ ಅಂತಿದ್ದಾರೆ. ಆದರೆ ಆಸ್ಪತ್ರೆಯವರು ಮಾತ್ರ ಬಾಡಿ ಕೊಡ್ತಿಲ್ಲ ಅಂತ ಅಪ್ರೋಜ್ ಬಿ ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ.

Published On - 12:33 pm, Fri, 24 July 20

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ