ರಾಮುಲು ಕಚೇರಿಯಲ್ಲಿ ಕೆಲ್ಸ ಮಾಡ್ತಿದ್ದ ಯುವತಿ ನೀರುಪಾಲು: ಮಗಳನ್ನೇ ಕೊಂದ ಪಾಪಿ ತಂದೆ?

ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬಂಡಿಹಟ್ಟಿ ಗ್ರಾಮದ ಬಳಿ ನೀರುಪಾಲಾಗಿದ್ದಾರೆ. 22 ವರ್ಷದ ಪಲ್ಲವಿಯನ್ನು ತಂದೆ ಸೂರಿ ಅಲಿಯಾಸ್ ಆಟೋ ಸೂರಿಯೇ ಕಾಲುವೆಗೆ ನೂಕಿ ಹತ್ಯೆಗೈದಿರುವ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕಳೆದ ಮೂರು ವರ್ಷಗಳ ಹಿಂದೆ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾರದಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆತ್ತಮಗಳನ್ನೇ ಕಾಲುವೆಗೆ ಹಾಕಿ ಕೊಂದ ಪಾಪಿ ತಂದೆ? ಮಗಳು ಪಲ್ಲವಿಯನ್ನು ಪುಸಲಾಯಿಸಿ ಕಾಲುವೆ ಬಳಿ ತಂದೆ ಸೂರಿ […]

ರಾಮುಲು ಕಚೇರಿಯಲ್ಲಿ ಕೆಲ್ಸ ಮಾಡ್ತಿದ್ದ ಯುವತಿ ನೀರುಪಾಲು: ಮಗಳನ್ನೇ ಕೊಂದ ಪಾಪಿ ತಂದೆ?
ಸಾಧು ಶ್ರೀನಾಥ್​

Updated on: Feb 17, 2020 | 1:49 PM

ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬಂಡಿಹಟ್ಟಿ ಗ್ರಾಮದ ಬಳಿ ನೀರುಪಾಲಾಗಿದ್ದಾರೆ. 22 ವರ್ಷದ ಪಲ್ಲವಿಯನ್ನು ತಂದೆ ಸೂರಿ ಅಲಿಯಾಸ್ ಆಟೋ ಸೂರಿಯೇ ಕಾಲುವೆಗೆ ನೂಕಿ ಹತ್ಯೆಗೈದಿರುವ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕಳೆದ ಮೂರು ವರ್ಷಗಳ ಹಿಂದೆ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾರದಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ಹೆತ್ತಮಗಳನ್ನೇ ಕಾಲುವೆಗೆ ಹಾಕಿ ಕೊಂದ ಪಾಪಿ ತಂದೆ?
ಮಗಳು ಪಲ್ಲವಿಯನ್ನು ಪುಸಲಾಯಿಸಿ ಕಾಲುವೆ ಬಳಿ ತಂದೆ ಸೂರಿ ಕರೆತಂದಿದ್ದರು. ಕಾಲುಗಳನ್ನು ಕಟ್ಟಿಹಾಕಿ ಹಾಡಹಗಲೇ ಮಗಳನ್ನು ಕಾಲುವೆಗೆ ನೂಕಿದ್ದಾನೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೌಲ್ ಬಜಾರ್ ಪೊಲೀಸರ ದೌಡಾಯಿಸಿದ್ದಾರೆ. ಸ್ಥಳೀಯ ಈಜುಗಾರರ ಜೊತೆ ಅಗ್ನಿಶಾಮಕ ಸಿಬ್ಬಂದಿ ಯುವತಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಆದ್ರೆ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Published On - 1:46 pm, Mon, 17 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us